ಮೋದಿ ಸರ್ಕಾರ ಹೊಗಳಿದ ಚಿದಂಬರಂ!
ಬಿಜೆಪಿ ಹೊಗಳಿದ ಕಾಂಗ್ರೆಸ್| ಊಟಿ ಬಿಡಲು 24 ಗಂಟೆ ಗಡುವು| ರಾಜ್ಘಾಟ್ಗೆ ಪ್ರವಾಸಿಗರ ನಿಷೇಧ| ರಾಜಸ್ಥಾನಲ್ಲಿ 50 ಜನರ ಮಿತಿ
ಬಿಜೆಪಿ ಹೊಗಳಿದ ಕಾಂಗ್ರೆಸ್
ಕೊರೋನಾ ತಡೆಗಟ್ಟಲು ಸರ್ಕಾರ ಸರ್ವಸನ್ನದ್ದವಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ ಬೆನ್ನಲ್ಲೇ, ಸೋಂಕು ತಡೆಗೆ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರ ಶ್ಲಾಘನೀಯ ಎಂದು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೇಂದ್ರ ಸರ್ಕಾರವನ್ನು ಲೋಕಸಭೆಯಲ್ಲಿ ಹಾಡಿ ಹೊಗಳಿದ್ದಾರೆ. ಅಲ್ಲದೇ ಇದರಲ್ಲಿ ರಾಜಕೀಯ ಸಲ್ಲದು ಎಂದಿದ್ದಾರೆ.
ಊಟಿ ಬಿಡಲು 24 ಗಂಟೆ ಗಡುವು
ವ್ಯಾಧಿ ಹೆಚ್ಚುವ ಭೀತಿಯಿಂದ ರಾಜ್ಯದ ಎಲ್ಲಾ ಪ್ರವಾಸೋದ್ಯಮ ತಾಣಗಳನ್ನು ತಮಿಳುನಾಡು ಸರ್ಕಾರ ಮಾಚ್ರ್ 31ರ ವರೆಗೆ ಮುಚ್ಚಿದೆ. ಊಟಿಯಲ್ಲಿರುವ ಪ್ರವಾಸಿಗರನ್ನು 24 ಗಂಟೆಯೊಳಗೆ ಸ್ಥಳ ಬಿಡಲು ಸೂಚಿಸಲಾಗಿದೆ.
ರಾಜ್ಘಾಟ್ಗೆ ಪ್ರವಾಸಿಗರ ನಿಷೇಧ
ಕೋವಿಡ್ ಭಯದಿಂದ ಮಹಾತ್ಮ ಗಾಂಧೀಜಿ ಸಮಾಧಿ ರಾಜ್ಘಾಟ್ಗೆ ಮಂಗಳವಾರದಿಂದಲೇ ಮುಂದಿನ ಆದೇಶದ ವರೆಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿದೆ.
ರಾಜಸ್ಥಾನಲ್ಲಿ 50 ಜನರ ಮಿತಿ
ಕೋವಿಡ್-19 ತಡೆಗಟ್ಟಲು ದೆಹಲಿ ಮಾದರಿಯನ್ನು ರಾಜಸ್ಥಾನ ಅನುಸರಿಸಿದ್ದು, ಮಾಚ್ರ್ 31ರ ವರೆಗೆ 50ಕ್ಕೂ ಹೆಚ್ಚು ಮಂದಿ ಒಟ್ಟು ಸೇರುವುದನ್ನು ನಿಷೇಧಿಸಿ ಸಿಎಂ ಅಶೋಕ್ ಗೆಹ್ಲೋಟ್ ಆದೇಶಿಸಿದ್ದಾರೆ.
ಪ್ರವಾಸರಿಗಲ್ಲ ತಾಜ್ ಮಹಲ್
ವಿಶ್ವ ವಿಖ್ಯಾತ ಪ್ರೇಮ ಸೌಧ ತಾಜ್ ಮಹಲ್ ಹಾಗೂ ರಾಜ್ಯದ ಇತರೆ ಪ್ರವಾಸಿ ತಾಣಗಳನ್ನು ಮಾಚ್ರ್ 31ರ ವರೆಗೆ ಬಂದ್ ಮಾಡಿ ಉತ್ತರ ಪ್ರದೇಶದ ಪ್ರವಾಸೋದ್ಯಮ ಸಚಿವಾಲಯ ಆದೇಶ ಹೊರಡಿಸಿದೆ.
3 ದೇಶಗಳಿಗೆ ನಿರ್ಬಂಧ
ಆಷ್ಘಾನಿಸ್ತಾನ, ಫಿಲಿಪ್ಪೀನ್ಸ್ ಹಾಗೂ ಮಲೇಷ್ಯಾ ನಾಗರಿಕರಿಗೆ ಭಾರತ ಪ್ರವೇಶಿಸದಂತೆ ತಕ್ಷಣದಿಂದಲೇ ನಿರ್ಬಂಧ ಜಾರಿ.