* ರಾಜಸ್ಥಾನದ ಕೋಟಾದಲ್ಲಿ ದೊಡ್ಡ ಮತ್ತು ನೋವಿನ ಅಪಘಾತ ಸಂಭವಿಸಿದೆ* ಚಂಬಲ್ ನದಿಗೆ ಬಿದ್ದ ಕಾರು, ವರ ಸೇರಿ 9 ಮಂದಿ ಸಾವು* ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು

ಜೈಪುರ(ಫೆ.20): ರಾಜಸ್ಥಾನದ ಕೋಟಾದಲ್ಲಿ ಬಹುದೊಡ್ಡ ಅಪಘಾತ ಸಂಭವಿಸಿದೆ, ಮದುವೆಗೆ ಇನ್ನೇನು ಕೆಲ ಸಮಯ ಇದೆ ಎನ್ನುವಷ್ಟರಲ್ಲಿ ವರ ಸೇರಿದಂತೆ 9 ಜನರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ರಾಜಸ್ಥಾನದಿಂದ ಮಧ್ಯಪ್ರದೇಶಕ್ಕೆ ಮದುವೆಗೆ ಹೋಗುತ್ತಿದ್ದಾಗ ಕೋಟಾದ ನಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೆರವಣಿಗೆಯಲ್ಲಿದ್ದವರ ಕಾರು ಚಂಬಲ್ ನದಿಗೆ ಡಿಕ್ಕಿ ಹೊಡೆದಿದೆ.

Add Asianetnews Kannada as a Preferred SourcegooglePreferred

ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಕಾರು ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲಾ ಕಾರು ಸವಾರರು ಮದುವೆಗೆ ಉಜ್ಜಯಿನಿಗೆ ಹೋಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದರು. ಬೆಳಗ್ಗೆ 7.30ರ ಸುಮಾರಿಗೆ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಬಳಿಕ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.

ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ಚೌತ್ ಕಾ ಬರ್ವಾರಾ ಗ್ರಾಮದಿಂದ ಮಧ್ಯಪ್ರದೇಶದ ಉಜ್ಜಯಿನಿಗೆ ಮೆರವಣಿಗೆ ಸಾಗುತ್ತಿದೆ ಎಂದು ಕೋಟಾ ಎಸ್ಪಿ ತಿಳಿಸಿದ್ದಾರೆ. ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ’ ಎಂದು ಹೇಳಿದರು. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಹೇಳಿದರು.

ಘಟನೆ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ''ಚಂಬಲ್ ನದಿಯಲ್ಲಿ ಕಾರು ಬಿದ್ದ ಪರಿಣಾಮ ವರ ಸೇರಿದಂತೆ ಒಂಭತ್ತು ಮಂದಿ ಮದುವೆ ಮೆರವಣಿಗೆಯಲ್ಲಿ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ. ಜಿಲ್ಲಾಧಿಕಾರಿ ಜತೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದರು. ಸಂತ್ರಸ್ತರ ಕುಟುಂಬಗಳೊಂದಿಗೆ ನನ್ನ ಆಳವಾದ ಸಹಾನುಭೂತಿ ಇದೆ. ದೇವರು ಅವರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.