ಕಾಂಗ್ರೆಸ್ ನಾಯಕರ ಮೇಲೆ ತಿರುಗಿಬಿದ್ದ ಬಿಜೆಪಿ ಸಚಿವ| ರಾಹುಲ್, ಪ್ರಿಯಾಂಕಾ ಇಬ್ಬರೂ ಜೀವಂತ ಪೆಟ್ರೋಲ್ ಬಾಂಬ್ ಇದ್ದಂಗೆ'| ಹರಿಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ| ರಾಹುಲ್, ಪ್ರಿಯಾಂಕಾ ಅವರದ್ದು ಬೆಂಕಿ ಹಚ್ಚುವ ಕೆಲಸ ಎಂದ ಅನಿಲ್ ವಿಜ್| ಟ್ವಿಟ್ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದ ಅನಿಲ್ ವಿಜ್|

ಹರಿಯಾಣ(ಡಿ.25): ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಜೀವಂತ ಪೆಟ್ರೋಲ್‌ ಬಾಂಬ್'ಗಳಿದ್ದಂತೆ ಎಂದು ಹರಿಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಹೋದಲ್ಲಿ ಬಂದಲ್ಲಿ ಬೆಂಕಿ ಹಚ್ಚುವ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಜೀವಂತ ಪೆಟ್ರೋಲ್ ಬಾಂಬ್'ಗಳಿದ್ದಂತೆ ಎಂದು ಅನಿಲ್ ವಿಜ್ ಹರಿಹಾಯ್ದಿದ್ದಾರೆ.

CAAಗೆ ವಿರೋಧ: ಪದಕ ಸ್ವೀಕರಿಸಿ ಸ್ಟೇಜ್ ಮೇಲೆಯೇ CAA ಪ್ರತಿ ಹರಿದ ವಿದ್ಯಾರ್ಥಿನಿ!

ಉತ್ತರ ಪ್ರದೇಶದಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಲು ರಾಹುಲ್ ಹಾಗೂ ಪ್ರಿಯಾಂಕಾ ಮೀರಠ್'ಗೆ ತೆರಳಿದ್ದರು.

Scroll to load tweet…

ಆದರೆ ಪೊಲೀಸರು ಇಬ್ಬರೂ ನಾಯಕರು ಮೀರಠ್ ಪ್ರವೇಶಿಸದಂತೆ ತಡೆದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಪೌರತ್ವ ಕಾಯ್ದೆಗೆ ವಿರೋಧ: SP ಮುಂದೆಯೇ ನಾಲಿಗೆ ಹರಿಬಿಟ್ಟ ಪ್ರತಿಭಟನಾಕಾರರು

ಈ ಕುರಿತು ಟ್ವಿಟ್ ಮಾಡಿ ಅಸಮಾಧಾನ ಹೊರಹಾಕಿರುವ ಅನಿಲ್ ವಿಜ್, ಈ ಇಬ್ಬರೂ ನಾಯಕರು ಹೋದಲ್ಲಿ ಬಂದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ಹರಿಹಾಯ್ದಿದ್ದಾರೆ.