Asianet Suvarna News Asianet Suvarna News

HDK ವಿಡಿಯೋ ರಿಲೀಸ್ to ಮದ್ವೆಯಾಗಿ 3 ನಿಮಿಷಕ್ಕೆ ಡಿವೋರ್ಸ್; ಜ.10ರ ಟಾಪ್ 10 ಸುದ್ದಿ!

ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟವಾಗಿದ್ದುರಾಘವೇಂದ್ರ ರಾಜ್‌ಕುಮಾರ್ , ಮೇಘನಾ ರಾಜ್ ಸೇರಿದಂತೆ ಹಲವು ಕಲಾವಿದರು, ಚಿತ್ರಗಳು ಪ್ರಶಸ್ತಿ ಬಾಚಿಕೊಂಡಿವೆ. ಇತ್ತ ಮಂಗಳೂರು ಗೋಲಿಬಾರ್ ಹಾಗೂ ಹಿಂಸಾಚಾರ ಪ್ರಕರಣ ಕುರಿತ 35 ವಿಡಿಯೋ ಹೆಚ್ ಡಿ ಕುಮಾರಸ್ವಾಮಿ ರಿಲೀಸ್ ಮಾಡಿದ್ದಾರೆ. ಆ ದಿನಗಳು ಚಿತ್ರದ ಖ್ಯಾತಿಯ ಚೇತನ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಜ.10ರ ಟಾಪ್ 10 ಸುದ್ದಿ ಇಲ್ಲಿವೆ.

HD Kumaraswamy to Karnataka film award top 10 news of January 10
Author
Bengaluru, First Published Jan 10, 2020, 5:17 PM IST

ಡಿ-ಪಿಕ್ಚರ್ಸ್, ರಿಷಬ್ ಶೆಟ್ಟಿ ಮುಡಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿಯ ಗರಿ!...

HD Kumaraswamy to Karnataka film award top 10 news of January 10

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಮೇಘನಾ ರಾಜ್ 'ಇರುವುದೆಲ್ಲವ ಬಿಟ್ಟು' ಚಿತ್ರದ ಅಭಿನಯನಕ್ಕೆ ಬೆಸ್ಟ್ ನಟಿ ಪ್ರಶಸ್ತಿಗೆ ಭಾಜನರಾದರೆ, ಅತ್ಯುತ್ತಮ ನಟ 'ಅಮ್ಮನ ಮನೆ' ಚಿತ್ರಕ್ಕೆ ರಾಘವೇಂದ್ರ ರಾಜ್‌ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 


ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35.

HD Kumaraswamy to Karnataka film award top 10 news of January 10

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.  ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು (ಶುಕ್ರವಾರ) ಸ್ಫೋಟಕ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.


ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ: ಆರೋಪಿಗೆ 7 ವರ್ಷ ಜೈಲು

HD Kumaraswamy to Karnataka film award top 10 news of January 10

ಬೆಂಗಳೂರಿಗರಲ್ಲಿ ಆತಂಕ ಸೃಷ್ಟಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗೆ ಕೊನೆಗೂ ಶಿಕ್ಷೆಯಾಗುತ್ತಿದೆ. ಪ್ರಮುಖ ಆರೋಪಿ ಫಯಾಜ್ ಅಹಮದ್‌ಗೆ 7 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ NIA ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಮದುವೆಯಾಗಿ 3 ನಿಮಿಷಕ್ಕೆ ಡಿವೋರ್ಸ್ ಕೇಳಿದ ಪತ್ನಿ, ಕಾರಣ ನೀವೇ ಓದಿ.

HD Kumaraswamy to Karnataka film award top 10 news of January 10

ಕುಟುಂಬಸ್ಥರ ಆಶಿರ್ವಾದದೊಂದಿಗೆ ಸತಿಪತಿಗಳಾಗಿ ಇನ್ನೇನು ಕೊಠಡಿಯಿಂದ ಹೊರ ಬರುತ್ತಿದ್ದಂತೆ, ಬರೀ ಮೂರು ನಿಮಿಷಕ್ಕೇ ಯುವತಿ ತನ್ನ ಪತಿಗೆ ಡಿವೋರ್ಸ್ ಕೊಟ್ಟಿದ್ದಾಳೆ.  ಇದು ಕುವೈತ್‌ ಇತಿಹಾಸದಲ್ಲೇ ಅತ್ಯಂತ ಕಡಿಮೆ ಕಾಲಾವಧಿಗೆ ಉಳಿದಂತಹ ವಿವಾಹ ಸಂಬಂಧ. 

ಬಜೆಟ್ 2020 : ಜನತೆಯಿಂದ ಸಲಹೆ ಆಹ್ವಾನಿಸಿದ ಪ್ರಧಾನಿ ಮೋದಿ

HD Kumaraswamy to Karnataka film award top 10 news of January 10

ಫೆಬ್ರವರಿ 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನತೆಯಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. ಈ ನಡುವೆ, ಗುರುವಾರ ಅವರು ಆರ್ಥಿಕ ತಜ್ಞರು ಹಾಗೂ ಉದ್ಯಮ ತಜ್ಞರ ಜತೆಗೂ ಸಮಾಲೋಚನೆ ನಡೆಸಿದ್ದಾರೆ.

ಪೇದೆ ನೆರವಿಂದ ಸಿಕ್ತು ಕೆಲ್ಸ: ಪೊಲೀಸ್‌ ಮುಂದೆ ಕಣ್ಣೀರಾದ್ಲು ಕಾಶ್ಮೀರಿ ಹುಡುಗಿ.

HD Kumaraswamy to Karnataka film award top 10 news of January 10

ಇನ್ನೇನು ಸಂದರ್ಶನಕ್ಕೆ ಹೋಗಬೇಕಾದಾಗ ಎಲ್ಲ ದಾಖಲೆಗಳನ್ನೂ ಅಪರಿಚಿತ ನಗರವೊಂದರಲ್ಲಿ ಕಳೆದುಕೊಂಡರೆ ಹೇಗಾಗಬಹುದು..? ಎಷ್ಟು ಅಸಹಾಯಕರಾಗಿ ಬಿಡಬಹುದಲ್ಲ..? ಅದೇ ದಾಖಲೆಗಳು ಮರಳಿ ಸಿಕ್ಕಿದರೆ..? ಇಂತಹದೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಮದುವೆಯಾಗೆಂದು ಶಾಲೆಯಲ್ಲೇ ಶಿಕ್ಷಕಿಯ ಎಳೆದಾಡಿದ ಪೇದೆ..!

HD Kumaraswamy to Karnataka film award top 10 news of January 10

ಪ್ರೀತಿಸುತ್ತಿದ್ದ ಯುವತಿಗೆ ಮದುವೆ ಗೊತ್ತಾದಾಗ ಪೊಲೀಸ್ ಪೇದೆ ಮಾಡಿದ್ದೇನು ಗೊತ್ತಾ..? ಪೊಲೀಸ್ ಪೇದೆ ಶಾಲೆಗೆ ಬಂದು ವಿದ್ಯಾರ್ಥಿಗಳ ಮುಂದೆಯೇ ಶಿಕ್ಷಕಿಯನ್ನು ಎಳೆದಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಧೋನಿ ನಿವೃತ್ತಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ರವಿಶಾಸ್ತ್ರಿ..!...

HD Kumaraswamy to Karnataka film award top 10 news of January 10

‘ನಾನು ಧೋನಿ ಜತೆ ಚರ್ಚಿಸಿದ್ದೇನೆ. ಅವರ ನಿಲುವೇನು ಎಂದು ನನಗೆ ತಿಳಿದಿದೆ. ಟೆಸ್ಟ್‌ ಕ್ರಿಕೆಟ್‌ನಿಂದ ಈಗಾಗಲೇ ನಿವೃತ್ತಿ ಪಡೆದಿರುವ ಧೋನಿ, ಸದ್ಯದಲ್ಲೇ ಏಕದಿನ ಕ್ರಿಕೆಟ್‌ಗೂ ಗುಡ್‌ಬೈ ಹೇಳಬಹುದು’ ಎಂದು ಶಾಸ್ತ್ರಿ ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

'ಆ ದಿನಗಳು' ಚೇತನ ಬಾಳ ಸಂಗಾತಿ ಹೀಗಿದ್ದಾರೆ ನೋಡಿ

HD Kumaraswamy to Karnataka film award top 10 news of January 10

2007ರಲ್ಲಿ 'ಆ ದಿನಗಳು' ಚಿತ್ರದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ನಟ ಚೇತನ್ ಕುಮಾರ್ ನಂತರ ಹಲವು ವಿವಾದಾತ್ಮಕ ಹೇಳಿಕೆಗಳು ಹಾಗೂ ಬುಡಕಟ್ಟು ಜನರ ನೋವಿಗೆ ಧ್ವನಿಯಾಗಿ ಸುದ್ದಿಯಾದವರು. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. 

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ಇಂದಿನ ಆಭರಣ ದರ..!.

HD Kumaraswamy to Karnataka film award top 10 news of January 10

ಹೊಸ ವರ್ಷದ ಆರಂಭದಲ್ಲಿ ಏರಿಕೆಯತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ದರ, ಎರಡನೇ ವಾರದ ಆರಂಭದಲ್ಲಿ ಇಳಿಕೆಯತ್ತ ಮುಖ ಮಾಡಿರುವುದು ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.

Follow Us:
Download App:
  • android
  • ios