Asianet Suvarna News Asianet Suvarna News

ಹಿಂದೂ ಧರ್ಮವಲ್ಲ ಅದು ದಂಧೆ, ವಂಚನೆ; ಸಮಾಜವಾದಿ ನಾಯಕನ ಮತ್ತೊಂದು ವಿವಾದ!

ಹಿಂದೂ ಧರ್ಮ, ಸನಾತನ ವಿರೋಧಿಸುವ ವಿಚಾರದಲ್ಲಿ ನಾವೆಲ್ಲ ಒಂದು ಎಂದು ಇಂಡಿ ಒಕ್ಕೂಟದ ನಾಯಕ ನೀಡಿದ್ದ ಹೇಳಿಕೆ ನಿಜವಾಗುತ್ತಿದೆ. ಇದೀಗ ಇಂಡಿ ಒಕ್ಕೂಟದ ಒಬ್ಬೊಬ್ಬ ನಾಯಕರು ಹಿಂದೂ ಧರ್ಮದ ವಿರುದ್ಧ ಉದ್ದುದ್ದ ಭಾಷಣ ಬಿಗಿಯುತ್ತಿದ್ದಾರೆ. ಇದೀಗ ಎಸ್‌ಪಿ ನಾಯಕ, ಹಿಂದೂ ಧರ್ಮವಲ್ಲ, ಅದು ಕೆಲವರಿಗೆ ದಂಧೆ, ಹಿಂದೂ ಎಂದರೆ ವಂಚನೆ ಎಂದಿದ್ದಾರೆ.

Hindu not religion its dhokha hai says Samajwadi Party leader Swami Prasad Maurya ckm
Author
First Published Dec 26, 2023, 3:10 PM IST

ಲಖನೌ(ಡಿ.26) ಇಂಡಿ ಒಕ್ಕೂಟದ ಮಿತ್ರ ಪಕ್ಷಗಳು ಹಿಂದೂ ಧರ್ಮ, ಹಿಂದಿ ಭಾಷೆ ವಿಚಾರವಾಗಿ ಆಡುತ್ತಿರುವ ಮಾತು ಮೈತ್ರಿ ಕೂಟಕ್ಕೆ ತಲೆನೋವಾಗಿ ಪರಿಣಮಿಸುತ್ತಿದೆ. ಉದಯನಿಧಿ ಸ್ಟಾಲಿನ್, ಎ ರಾಜಾ ಬಳಿಕ ಇದೀಗ ಸಮಾಜವಾದಿ ಪಾರ್ಟಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಈಗಲೇ ಹಿಂದೂ ಧರ್ಮ, ಸನಾತನ, ಹಿಂದುತ್ವದ ವಿರುದ್ಧ ಮಾತನಾಡಿ ಹಲವರ ಆಕ್ರೋಶಕ್ಕೆ ತುತ್ತಾಗಿರುವ ಸ್ವಾಮಿ ಪ್ರಸಾದ್ ಮೌರ್ಯ ಇದೀಗ ಹಿಂದೂ ಧರ್ಮವಲ್ಲ, ಅದು ವಂಚನೆ ಎಂದಿದ್ದಾರೆ. ಇದೇ ಹಿಂದೂ ಧರ್ಮ ಕೆಲವರಿಗೆ ದಂಧೆಯಾಗಿದೆ ಎಂದು ಕಾರ್ಯಕ್ರಮದ ಭಾಷಣದಲ್ಲಿ ಹೇಳಿದ್ದಾರೆ. 

ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಭಾಷಣದಲ್ಲಿ ಹಿಂದೂ ಧರ್ಮದ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಪ್ರಧಾನಿ ನರೇಂದ್ರ ಮೋದಿ, ಸಚಿವ ನಿತಿನ್ ಗಡ್ಕರಿ ಹೇಳಿದ ಮಾತುಗಳನ್ನು ಉಲ್ಲೇಖಿಸಿ ಈ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ಹಿಂದೂ ಒಂದು ಧರ್ಮವಲ್ಲ, ಅದು ಜೀವನ ಪದ್ಧತಿ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಕೂಡ ಹಿಂದೂ ಧರ್ಮ ಇಲ್ಲ ಎಂದಿದ್ದಾರೆ. ಇದು ಯಾರ ಭಾವನೆಗೂ ಧಕ್ಕೆಯಾಗಲಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಏನಾದರು ಹೇಳಿದರೆ ಧಾರ್ಮಿಕ ಭಾವನೆಗೆ ಧಕ್ಕೆ, ವಿವಾದಾತ್ಮಕ ಹೇಳಿಕೆಯಾಗುತ್ತದೆ ಎಂದು ಮೌರ್ಯ ಕಿಡಿ ಕಾರಿದ್ದಾರೆ.

ಭಾರತ ಯಾವತ್ತೂ ಹಿಂದೂ ದೇಶವಲ್ಲ: ಎಸ್‌ಪಿ ಮುಖಂಡ

ಮಾತು ಮುಂದುವರಿಸಿದ ಸ್ವಾಮಿ ಪ್ರಸಾದ್ ಮೌರ್ಯ, ಹಿಂದೂ ಒಂದು ಧರ್ಮವಲ್ಲ, ಅಂದು ವಂಚನೆ ಸುಳ್ಳಿನ ಕಂತೆ, ಕೆಲವರಿಗೆ ಹಿಂದೂ ಧರ್ಮ ಒಂದು ದಂಧೆ ಎಂದು ಹೇಳಿಕೆ ನೀಡಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.  ಪದೇ ಪದೇ ಹಿಂದೂ ಧರ್ಮದ ವಿರುದ್ಧ ಮಾತನಾಡುತ್ತಾ, ಅಸಂಖ್ಯಾತ ಹಿಂದೂಗಳಿಗೆ ಅವಮಾನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂತಹ ನಾಯಕರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

 

 

ಸ್ವಾಮಿ ಪ್ರಸಾದ್ ಮೌರ್ಯ ಹಲವು ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದೆ. ಹಿಂದೂ ಧರ್ಮ ಎಂಬುದೇ ಇಲ್ಲ. ಇಂದಿನ ಎಲ್ಲ ಸಮಸ್ಯೆಗಳಿಗೂ ಬ್ರಾಹ್ಮಣವಾದ ಕಾರಣ’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಸಭೆಯೊಂದರಲ್ಲಿ ಅವರು ಮಾತ ನಾಡಿ, ‘ಹಿಂದೂ ಧರ್ಮ ಎಂಬುದೇ ಇಲ್ಲ. ಬ್ರಾಹ್ಮಣ ಧರ್ಮವನ್ನೇ ಹಿಂದೂ ಧರ್ಮ ಎಂದು ಕರೆಯಲಾಗುತ್ತದೆ ಎಂದಿದ್ದರು. ಪ್ರಪಂಚದಲ್ಲಿ ಜನಿಸುವ ಎಲ್ಲರಿಗೂ ಎರಡು ಕೈ, ಎರಡು ಕಾಲು, ಎರಡು ಕಿವಿ ಮತ್ತು ಎರಡು ಕಣ್ಣುಗಳಿದ್ದರೆ, ಲಕ್ಷ್ಮಿ ದೇವಿಗೆ ಮಾತ್ರ ಹೇಗೆ ನಾಲ್ಕು ಕೈಗಳು ಇರುತ್ತವೆ? ಎಂದು ಪ್ರಶ್ನಿಸುವ ಮೂಲಕ ಲಕ್ಷ್ಮಿ ದೇವಿಗೆ ಅವಮಾನ ಮಾಡಿದ್ದರು. ಇನ್ನು ರತ್ನಚರಿತ ಮಾನಸ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.

ಗ್ಯಾನವಾಪಿ ಮಸೀದಿಯಂತೆ ದೇಗುಲಗಳ ಸಮೀಕ್ಷೆ ಮಾಡಬೇಕು: ಎಸ್ಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

Latest Videos
Follow Us:
Download App:
  • android
  • ios