ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಮಾನವ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾನೆ. ಈತ ಅಸ್ಸಾಂ, ತ್ರಿಪುರಾದಲ್ಲಿ ಸಕ್ರಿಯವಾಗಿರುವ ಮಾನವ ಕಳ್ಳಸಾಗಣೆ ಜಾಲದ ಜೊತೆ ಸಂಪರ್ಕದಲ್ಲಿದ್ದಾನೆ’ ಎಂಬುದನ್ನು ಆಧರಿಸಿ ನವೆಂಬರ್ 7ರಂದು ಎನ್‌ಐಎ ಪ್ರಕರಣ ದಾಖಲಿಸಿತ್ತು.

ನವದೆಹಲಿ (ಡಿಸೆಂಬರ್ 23, 2023): ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಬೆಂಗಳೂರಿನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬನನ್ನು ಕೇರಳದಲ್ಲಿ ಎನ್‌ಐಎ ಬಂಧಿಸಿದೆ. ಅಕ್ರಮ ವಲಸೆಗಾರರ ವಿರುದ್ಧ ಕಳೆದ ತಿಂಗಳಿನಿಂದ ಎನ್‌ಐಎ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಇದು 11ನೇ ಬಂಧನವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಂಧಿತ ಸೌಧಿ ಝಾಕಿರ್‌ ವಿರುದ್ಧ ಮಾನವ ಕಳ್ಳಸಾಗಣೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಝಾಕಿರ್‌ ಬಾಂಗ್ಲಾದೇಶ ಮತ್ತು ಭಾರತದ ಗಡಿಯಲ್ಲಿನ ಬೇನಾಪೋಲ್‌ ಬಳಿ ಅಕ್ರಮವಾಗಿ ಭಾರತ ಪ್ರವೇಶಿಸಿ, ಬಳಿಕ ಬೆಂಗಳೂರಿನ ಬೆಳ್ಳಂದೂರಿನಲ್ಲಿ ವಾಸಿಸುತ್ತಿದ್ದ. ಇಲ್ಲಿ ಈತ ತ್ಯಾಜ್ಯ ಸಂಗ್ರಹಣ ಘಟಕ ಸ್ಥಾಪಿಸಿದ್ದಲ್ಲದೇ ಅಕ್ರಮವಾಗಿ ವಲಸೆ ಬಂದ ವಿದೇಶಿ ಪ್ರಜೆಗಳನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಎಂದು ಎನ್‌ಐಎ ವಕ್ತಾರ ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು ಜನರೇ ಎಚ್ಚರ: ಹಸುಗೂಸುಗಳನ್ನು ಮಾರಾಟ ಮಾಡುವ ಗ್ಯಾಂಗ್ ಎಲ್ಲೆಡೆ ಸಂಚಾರ

ಈ ನಡುವೆ, ‘ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಮಾನವ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾನೆ. ಈತ ಅಸ್ಸಾಂ, ತ್ರಿಪುರಾದಲ್ಲಿ ಸಕ್ರಿಯವಾಗಿರುವ ಮಾನವ ಕಳ್ಳಸಾಗಣೆ ಜಾಲದ ಜೊತೆ ಸಂಪರ್ಕದಲ್ಲಿದ್ದಾನೆ’ ಎಂಬುದನ್ನು ಆಧರಿಸಿ ನವೆಂಬರ್ 7ರಂದು ಎನ್‌ಐಎ ಪ್ರಕರಣ ದಾಖಲಿಸಿತ್ತು. ಇದಾದ ಬಳಿಕ ಎನ್‌ಐಎ ದೇಶಾದ್ಯಂತ ಶೋಧ ಕಾರ್ಯ ನಡೆಸಿದ್ದು, ಝಾಕಿರ್‌ನ ಬೆಂಗಳೂರು ಮನೆಯಲ್ಲೂ ಹುಡುಕಾಟ ನಡೆಸಿತ್ತು. ಆದರೆ ಈ ವೇಳೆ ಕೇರಳಕ್ಕೆ ಓಡಿಹೋಗಿ ಕೊಚ್ಚಿಯಲ್ಲಿ ತಲೆ ಮರೆಸಿಕೊಂಡಿದ್ದ ಝಾಕಿರ್‌ನನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ.
ಈ ಕುರಿತಾಗಿ ತನಿಖೆಯನ್ನು ಮುಂದುವರೆಸಿರುವುದಾಗಿ ತಿಳಿಸಿರುವ ಎನ್‌ಐಎ ವಕ್ತಾರ, ಇಂಡೋ - ಬಾಂಗ್ಲಾದೇಶ ಗಡಿಯಲ್ಲಿ ನಡೆಯುತ್ತಿರುವ ಮಾನವ ಕಳ್ಳಸಾಗಣೆಯನ್ನು ಸಂಪೂರ್ಣವಾಗಿ ಮಟ್ಟಹಾಕುವುದಾಗಿ ಹೇಳಿದ್ದಾರೆ.

ಅಕ್ರಮವಾಗಿ ಭಾರತ ಪ್ರವೇಶಿಸಿ ಬೆಂಗಳೂರಿಗೆ ಬರುತ್ತಿದ್ದ 14 ಅಕ್ರಮ ಬಾಂಗ್ಲಾ ವಲಸಿಗರು ಸೆರೆ

ಬಾಂಗ್ಲಾದ ಮಾನವ ಸ್ಮಗ್ಲರ್ಸ್‌ ವಿರುದ್ಧ ಎನ್‌ಐಎ ಭರ್ಜರಿ ಬೇಟೆ: ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ರೇಡ್‌