‘ನಾನು ಶಾಲೆಯಲ್ಲಿದ್ದಾಗ ತುಂಬಾ ತುಂಟನಾಗಿದ್ದೆ. ಅತೀ ಹುಡುಗಾಟಿಕೆ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಇಲ್ಲಿನ ಸಂತ ಥಾಮಸ್‌ ಇಂಗ್ಲಿಷ್‌ ಪ್ರೌಢಶಾಲೆಯ ಸ್ವರ್ಣಮಹೋತ್ಸವದಲ್ಲಿ ಭಾಗವಹಿಸಿದ್ದ ರಾಹುಲ್‌, ಮಳೆಯ ನಡುವೆಯೂ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.

ಊಟಿ (ತ.ನಾಡು): ‘ನಾನು ಶಾಲೆಯಲ್ಲಿದ್ದಾಗ ತುಂಬಾ ತುಂಟನಾಗಿದ್ದೆ. ಅತೀ ಹುಡುಗಾಟಿಕೆ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಇಲ್ಲಿನ ಸಂತ ಥಾಮಸ್‌ ಇಂಗ್ಲಿಷ್‌ ಪ್ರೌಢಶಾಲೆಯ ಸ್ವರ್ಣಮಹೋತ್ಸವದಲ್ಲಿ ಭಾಗವಹಿಸಿದ್ದ ರಾಹುಲ್‌, ಮಳೆಯ ನಡುವೆಯೂ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.

Add Asianetnews Kannada as a Preferred SourcegooglePreferred

ಶಾಲಾದಿನಗಳ ಮರೆಯಲಾರದ ನೆನಪಿನ ಬಗ್ಗೆ

ಶಾಲಾದಿನಗಳ ಮರೆಯಲಾರದ ನೆನಪಿನ ಬಗ್ಗೆ ವಿದ್ಯಾರ್ಥಿಯೊಬ್ಬಳು ಕೇಳಿದಾಗ ಉತ್ತರಿಸಿದ ಅವರು, ‘ನಾನು ಹಾಸ್ಟೆಲ್‌ನಲ್ಲಿದ್ದೆ. ಅಲ್ಲಿ ಖುಷಿಯಾಗಿದ್ದೆನಾದರೂ, ಪೋಷಕರು ಆಗಾಗ ಭೇಟಿ ಕೊಡಲಿ ಎಂಬ ಕಾರಣಕ್ಕೆ ಬೇಸರಿಸಿಕೊಂಡಂತೆ ನಟಿಸುತ್ತಿದ್ದೆ. ನಾನೆಂದೂ ಶಿಕ್ಷಕರಿಗೆ ಆಜ್ಞಾಕಾರಿಯಾಗಿ ಇರುತ್ತಲೇ ಇರಲಿಲ್ಲ.

ನನ್ನನ್ನು ಸಂಭಾಳಿಸಲು ಅವರು ಹೆಣಗಾಡುತ್ತಿದ್ದರು

ನಾನು ಸದಾ ಪ್ರಶ್ನೆಗಳನ್ನು ಕೇಳುತ್ತಿದ್ದುದರಿಂದ ನನ್ನನ್ನು ಸಂಭಾಳಿಸಲು ಅವರು ಹೆಣಗಾಡುತ್ತಿದ್ದರು. ಪ್ರಶ್ನೆ ಕೇಳದೆ ಏನನ್ನೂ ಕಲಿಯಲಾಗದು ಎಂಬುದು ನನ್ನ ಅಭಿಪ್ರಾಯ’ ಎಂದು ಹೇಳಿದರು. ಬಳಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪೊಂಗಲ್‌ (ಸಂಕ್ರಾಂತಿ) ಹಬ್ಬದಲ್ಲಿ ಭಾಗವಹಿಸಿ, ಸಕ್ಕರೆಪೊಂಗಲ್‌ ತಯಾರಿಸಿದರು.