ಮುಂಚೂಣಿ ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಣೆ ವೇಳೆ ಕೈ ತುಂಡಾಗಿದ್ದ ಯೋಧನೊಬ್ಬನನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯು ತಡರಾತ್ರಿ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಲಡಾಖ್‌ನಲ್ಲಿ ನಡೆದಿದೆ.

ನವದೆಹಲಿ (ಏ.13): ಮುಂಚೂಣಿ ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಣೆ ವೇಳೆ ಕೈ ತುಂಡಾಗಿದ್ದ ಯೋಧನೊಬ್ಬನನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯು ತಡರಾತ್ರಿ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಲಡಾಖ್‌ನಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಯಂತ್ರವೊಂದರಲ್ಲಿ ಕೆಲಸ ಮಾಡುವ ವೇಲೇಹ್ಳೆ ಯೋಧನ ಕೈ ತುಂಡರಿಸಿತ್ತು. ಕೂಡಲೇ ಗಾಯಾಳು ಯೋಧನನ್ನು ಮೊದಲಿಗೆ ಲೇಹ್‌ ವಾಯುನೆಲೆಗೆ ಕರೆತರಲಾಯಿತು. ಅಲ್ಲಿಂದ ದೆಹಲಿಗೆ ವಾಯುಪಡೆಯ ಸಿ-130 ಜೆ ವಿಮಾನದ ಮೂಲಕ ಸ್ಥಳಾಂತರಿಸಿ ಸೇನಾ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಘಟನೆ ನಡೆದಾಗಿನಿಂದ ಕೇವಲ 4 ಗಂಟೆಗಳ ಅವಧಿಯಲ್ಲಿ ಯೋಧನನ್ನು ದೆಹಲಿಗೆ ಕರೆತರಲಾದ ಕಾರಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ತುಂಡರಿಸಿದ್ದ ಭಾಗವನ್ನು ಮರಳಿ ಜೋಡಿಸಲಾಗಿದೆ. ಸೇನೆ ಮತ್ತು ವಾಯುಪಡೆಯ ಸಮನ್ವಯತೆ ಇದನ್ನು ಸಾಧ್ಯವಾಗಿಸಿದೆ ಎಂದು ಭಾರತೀಯ ವಾಯುಪಡೆ ಹೇಳಿದೆ.

ತಮಿಳನಾಡಲ್ಲಿ‌ ಭೀಕರ ರಸ್ತೆ ಅಪಘಾತ: ವಿಜಯಪುರ IRB ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಸಾವು!