Asianet Suvarna News Asianet Suvarna News

ಕೇರಳ ರೈಲಿಗೆ ಬೆಂಕಿ ಹಿಂದೆ ಉಗ್ರ ನಂಟಿನ ಶಂಕೆ; ಸಂಪೂರ್ಣ ರೈಲು ಸುಡುವ ದುರುದ್ದೇಶ: ಎನ್‌ಐಎಗೆ ಸ್ಫೋಟಕ ಸುಳಿವು

ಆತ ಇಡೀ ರೈಲಿಗೆ ಬೆಂಕಿ ಹಚ್ಚುವ ಉದ್ದೇಶದಿಂದ ಮೂರು ಬಾಟಲ್‌ಗಳಲ್ಲಿ ಪೆಟ್ರೋಲ್‌ ತುಂಬಿಕೊಂಡು ಬಂದಿದ್ದ. ಆದರೆ ಈ ಕೃತ್ಯ ಎಸಗಲು ಆತನಿಗೆ ಸೂಕ್ತ ತರಬೇತಿ ಇಲ್ಲದ ಕಾರಣ ಆತ ಈ ಕೆಲಸದಲ್ಲಿ ವಿಫಲನಾಗಿದ್ದಾನೆ ಎಂದು ತನಿಖಾ ಸಂಸ್ಥೆಗಳು ಶಂಕಿಸಿವೆ.

ib nia confirm terror links behind kozhikode train fire attack ash
Author
First Published Apr 9, 2023, 9:35 AM IST

ತಿರುವನಂತಪುರ (ಏಪ್ರಿಲ್ 9, 2023): ಕೇರಳದ ರೈಲಿನೊಳಗೆ ಬೆಂಕಿ ಹಚ್ಚಿ ಮೂವರ ಸಾವಿಗೆ ಕಾರಣವಾದ ಇತ್ತೀಚಿನ ಘಟನೆ ಸುಲಿಗೆ ಉದ್ದೇಶ ಹೊಂದಿರಲಿಲ್ಲ. ಬದಲಾಗಿ ಇಡೀ ರೈಲಿಗೆ ಬೆಂಕಿ ಹಚ್ಚುವ ಭಾರೀ ಸಂಚೊಂದು ಅಡಗಿತ್ತು ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ. ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತು ಐಬಿ (ಇಂಟೆಲಿಜೆನ್ಸ್‌ ಬ್ಯೂರೋ)ಗೆ ಇಂಥದ್ದೊದು ಸ್ಫೋಟಕ ಸುಳಿವು ಸಿಕ್ಕಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಕೇರಳದ ಹಲವು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವಾರ ಆಲಪ್ಪುಳ- ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಸಂಚರಿಸುತ್ತಿದ್ದ ವೇಳೆ ಬಳಿ ವ್ಯಕ್ತಿಯೊಬ್ಬ ಪ್ರಯಾಣಿಕರ ಮೇಲೆ ಪೆಟ್ರೋಲ್‌ ವಸ್ತು ಎರಚಿ ಬೆಂಕಿ ಹಚ್ಚಿ ಪರಾರಿಯಾಗಿದ್ದ. ಘಟನೆಯಲ್ಲಿ ಹಲವರಿಗೆ ಸುಟ್ಟಗಾಯಗಳಾಗಿದ್ದವು. ಆದರೆ ಬೆಂಕಿ ಕಂಡು ಹೆದರಿದ್ದ ಮೂವರು ರೈಲಿನಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದರು. ಘಟನೆ ಸಂಬಂಧ ಎರಡು ದಿನಗಳ ಬಳಿಕ ದೆಹಲಿ ಮೂಲದ ಶಾರುಖ್‌ ಸೈಫಿ ಎಂಬಾತನನ್ನು ಬಂಧಿಸಲಾಗಿತ್ತು. ಮೊದಲಿಗೆ ಇದೊಂದು ಸುಲಿಗೆ ದಾಳಿ ಇರಬಹುದು ಎಂದು ಶಂಕಿಸಲಾಗಿತ್ತು.

ಇದನ್ನು ಓದಿ: ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿ ಮೂವರನ್ನು ಬಲಿ ತೆಗೆದುಕೊಂಡ ಆರೋಪಿ ಶಾರುಖ್‌ ಸೈಫಿ ಬಂಧನ

ಭಾರೀ ದುಷ್ಕೃತ್ಯ:
ಆದರೆ ಇದೀಗ ತನಿಖಾ ಸಂಸ್ಥೆಗಳು ಬೆಂಕಿ ಹಚ್ಚಿದ ಘಟನೆ ಹಿಂದೆ ದೊಡ್ಡ ಸಂಚು ಅಡಗಿದೆ. ಇದು ಕೇವಲ ಒಬ್ಬನ ಕೃತ್ಯವಲ್ಲ. ಇದರ ಹಿಂದೆ ದೊಡ್ಡ ತಂಡ ಕೆಲಸ ಮಾಡಿದೆ ಎಂಬ ಮಾಹಿತಿಯನ್ನು ಕಲೆ ಹಾಕಿದೆ. ದೇಶ ವಿರೋಧಿ ಮನಸ್ಥಿತಿ ಹೊಂದಿರುವ ಪ್ರಭಾವಿಗಳ ಗುಂಪೊಂದು ಸೈಫಿ ಮೇಲೆ ಭಯೋತ್ಪಾದನಾ ಸಿದ್ಧಾಂತವನ್ನು ತುಂಬಿ ಆತನನ್ನು ದುಷ್ಕೃತ್ಯಕ್ಕೆ ಪ್ರೇರೇಪಿಸಿತ್ತು. ಜೊತೆಗೆ ಆತನಿಗೆ ದುಷ್ಕೃತ್ಯಕ್ಕೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಒದಗಿಸಿತ್ತು. ಆತನ ಜೊತೆಗೆ ಇನ್ನೂ ಕೆಲವರು ಈ ಸಂಚಿನಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ಘಟನೆ ಬಳಿಕ ಪರಾರಿಯಾಗಲೂ ಸಂಚುಕೋರರು ಸೈಫಿಗೆ ನೆರವು ನೀಡಿದ್ದಾರೆ. ಎಂಬ ವಿಷಯ ತನಿಖಾ ಸಂಸ್ಥೆಗಳ ಗಮನಕ್ಕೆ ಬಂದಿದೆ.

ಇಡೀ ರೈಲಿಗೆ ಬೆಂಕಿ:
ಆತ ಇಡೀ ರೈಲಿಗೆ ಬೆಂಕಿ ಹಚ್ಚುವ ಉದ್ದೇಶದಿಂದ ಮೂರು ಬಾಟಲ್‌ಗಳಲ್ಲಿ ಪೆಟ್ರೋಲ್‌ ತುಂಬಿಕೊಂಡು ಬಂದಿದ್ದ. ಆದರೆ ಈ ಕೃತ್ಯ ಎಸಗಲು ಆತನಿಗೆ ಸೂಕ್ತ ತರಬೇತಿ ಇಲ್ಲದ ಕಾರಣ ಆತ ಈ ಕೆಲಸದಲ್ಲಿ ವಿಫಲನಾಗಿದ್ದಾನೆ ಎಂದು ತನಿಖಾ ಸಂಸ್ಥೆಗಳು ಶಂಕಿಸಿವೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ : ಮಗು ಸೇರಿ ಮೂವರು ಬಲಿ

Follow Us:
Download App:
  • android
  • ios