ಸೈಕ್ಲೋನ್ ಸರ್ಕ್ಯುಲೇಷನ್ ಮುಂದುವರಿಕೆ | ಮುಂದಿನ ಐದು ದಿನಗಳಲ್ಲಿ ದೇಶದ ಯಾವುದೇ ಭಾಗದಲ್ಲಿ ಯಾವುದೇ ಬಿಸಿ ಅಲೆಯ ಸಾಧ್ಯತೆ ಇಲ್ಲ

ನವದೆಹಲಿ(ಮೇ.02): ವಾಯುವ್ಯ ಮಧ್ಯಪ್ರದೇಶದ ಮೇಲೆ ಚಂಡಮಾರುತದ ಪ್ರಸರಣವಿದೆ. ಮುಂದಿನ 4-5 ದಿನಗಳಲ್ಲಿ ಪೂರ್ವ ಭಾರತದ ಲ್ಲಿ ಇದು ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಂಡಮಾರುತವು ವಾಯುವ್ಯ ಮಧ್ಯಪ್ರದೇಶದಲ್ಲಿದೆ. ಈ ಚಲಾವಣೆಯಿಂದ ಮಣಿಪುರದಲ್ಲಿ ಕೆಳಮಟ್ಟದಲ್ಲಿ ಚಲಿಸಲಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ಮುಂದಿನ 4ರಿಂದ 5 ದಿನದಲ್ಲಿ ಮಳೆಯಾಗುವ ಸಾಧ್ಯತೆ ಇರಲಿದೆ. ಮೇ 3 ರಿಂದ 5 ರವರೆಗೆ ಮತ್ತು ಒಡಿಶಾ ಮತ್ತು ಅರುಣಾಚಲ ಪ್ರದೇಶದಲ್ಲಿ ಮಳೆ ಸಾಧ್ಯತೆ ಇದೆ.

ಕೊರೋನಾ ಪಾಸಿಟಿವ್: ಆಕ್ಸಿಜನ್‌ಗಾಗಿ ಅಶ್ವತ್ಥ ಮರದಡಿ ಠಿಕಾಣಿ ಹೂಡಿದ ಜನ

ಕೇರಳ ಮತ್ತು ಮಾಹೆಯಲ್ಲಿ, ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೇ.4ರಿಂದ 6ರ ತನಕ ಮಳೆಯಾಗಲಿದೆ. ಮೇ 5ರಂದು ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Scroll to load tweet…

ರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 24.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಇಲ್ಲಿ ಮಳೆಯೊಂದಿಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Scroll to load tweet…