Asianet Suvarna News Asianet Suvarna News

Coronavirus: ಕೊರೋನಾ ಟೆಸ್ಟಿಂಗ್‌ ಕಮ್ಮಿ ಮಾಡಬೇಡಿ: ಕೇಂದ್ರ ಸರ್ಕಾರ

ಕೆಲವು ರಾಜ್ಯಗಳು ಕೊರೋನಾ ಪರೀಕ್ಷೆಯನ್ನು ಕಡಿಮೆಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೋಮವಾರ ಸೂಚಿಸಿದೆ.

Immediately Increase Covid Testing in Strategic Manner Centre asks States gvd
Author
Bangalore, First Published Jan 19, 2022, 3:15 AM IST

ನವದೆಹಲಿ (ಜ.19): ಕೆಲವು ರಾಜ್ಯಗಳು ಕೊರೋನಾ ಪರೀಕ್ಷೆಯನ್ನು (Covid Testing) ಕಡಿಮೆಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೋಮವಾರ ಸೂಚಿಸಿದೆ.

ಈ ಸಂಬಂಧ ಎಲ್ಲಾ ರಾಜ್ಯ (States) ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ರವಾನಿಸಿರುವ ಕೇಂದ್ರ ಹೆಚ್ಚುವರಿ ಆರೋಗ್ಯ ಕಾರ‍್ಯದರ್ಶಿ ಆರತಿ ಅಹುಜಾ (Arti Ahuja), ತತ್‌ಕ್ಷಣದಿಂದಲೇ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವಂತೆ ಸಲಹೆ ನೀಡಿದ್ದಾರೆ. ಈ ಮೂಲಕ ಕೆಲವು ನಿರ್ದಿಷ್ಟಪ್ರದೇಶಗಳ ಕೋವಿಡ್‌ ಪಾಸಿಟಿವಿಟಿ (Covid Positivity) ಮೇಲೆ ನಿಗಾ ಇಡಲು ಕೋರಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ವೇರಿಯಂಟ್‌ ಆಫ್‌ ಕನ್ಸರ್ನ್‌ ಎಂದು ಗುರುತಿಸಿರುವ ಒಮಿಕ್ರೋನ್‌ ವೈರಸ್‌ (Omicron Virus) ದೇಶಾದ್ಯಂತ ಹರಡುತ್ತಿದೆ. ಈ ರೂಪಾಂತರಿ ನಿಗ್ರಹಕ್ಕೆ ಆಕ್ರಮಣಕಾರಿ ಪರೀಕ್ಷೆಯೇ ಪ್ರಮುಖ ಮದ್ದು. ಆದಾಗ್ಯೂ ಕೆಲ ರಾಜ್ಯಗಳಲ್ಲಿ ಕಡಿಮೆ ಪ್ರಮಾಣ ಪರೀಕ್ಷೆ ನಡೆಯುತ್ತಿದೆ ಎಂಬ ವರದಿಗಳು ಕೇಂದ್ರ ಸರ್ಕಾರಕ್ಕೆ ಲಭಿಸಿವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Corona 3rd Wave: ಕೋವಿಡ್‌ ಪ್ರಸರಣದ ಆರ್‌ ವ್ಯಾಲ್ಯೂ ಇಳಿಕೆ: 3ನೇ ಅಲೆ ತಗ್ಗಿದ ಸೂಚನೆಯೆ?

ಪರೀಕ್ಷೆಯಿಂದ ವೇಗವಾಗಿ ಹೊಸ ಕೊರೋನಾ ಹಾಟ್‌ಸ್ಪಾಟ್‌, ಕ್ಲಸ್ಟರ್‌ ಗುರುತಿಸಬಹುದು. ಇದರಿಂದ ಸೋಂಕಿತರ ಸಂಪರ್ಕ ಪತ್ತೆ ಹಚ್ಚುವಿಕೆ, ಕ್ವಾರಂಟೈನ್‌ ಮತ್ತಿತರ ಸೋಂಕು ನಿಯಂತ್ರಕ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬಹುದು. ತನ್ಮೂಲಕ ಜಿಲ್ಲೆ ಮತ್ತು ರಾಜ್ಯಗಳು ಸೋಂಕನ್ನು ನಿಗ್ರಹಿಸಬಹುದು ಎಂದು ಅಹುಜಾ ಹೇಳಿದ್ದಾರೆ.

ಬಲವಂತವಾಗಿ ಲಸಿಕೆ ನೀಡುವಂತಿಲ್ಲ: ಯಾವುದೇ ವ್ಯಕ್ತಿಯ ಸಮ್ಮತಿ ಪಡೆಯದೇ ಬಲವಂತವಾಗಿ ಕೋವಿಡ್‌ ಲಸಿಕೆ (Covid Vaccine) ನೀಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲಸಿಕೆ ಪಡೆಯಲು ನಿರಾಕರಿಸುವವರಿಗೆ ಬಲವಂತವಾಗಿ ಲಸಿಕೆ ನೀಡುವುದು ಹಾಗೂ ಸರ್ಕಾರ ಸೌಲಭ್ಯ ನಿರಾಕರಿಸುವಂತಹ ಘಟನೆಗಳು ದೇಶಾದ್ಯಂತ ನಡೆಯುತ್ತಿರುವಾಗಲೇ ಕೇಂದ್ರ ಸರ್ಕಾರದ ಈ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ.

‘ಕೋವಿಡ್‌ ಲಸಿಕಾಕರಣ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಲ್ಲಿ ವ್ಯಕ್ತಿಯ ಸಮ್ಮತಿ ಪಡೆಯದೆ ಬಲವಂತವಾಗಿ ಲಸಿಕೆ ನೀಡುವ ಕುರಿತು ಯಾವುದೇ ಪ್ರಸ್ತಾಪ ಇಲ್ಲ’ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ಅಫಿಡವಿಟ್‌ನಲ್ಲಿ ತಿಳಿಸಿದೆ. ‘ಅಂಗವೈಕಲ್ಯ ಹೊಂದಿದವರಿಗೆ ಆದ್ಯತೆ ಮೇರೆಗೆ ಹಾಗೂ ಮನೆ ಬಾಗಿಲಿಗೆ ಕೊರೋನಾ ಲಸಿಕೆ ನೀಡಬೇಕು’ ಎಂದು ಎವಾರಾ ಫೌಂಡೇಷನ್‌ ಎಂಬ ಎನ್‌ಜಿಒ ಸುಪ್ರೀಂಕೋರ್ಟ್‌ನಲ್ಲಿ (Supreme Court) ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ವೇಳೆ ಕೇಂದ್ರ ಆರೋಗ್ಯ ಸಚಿವಾಲಯ ಪ್ರಮಾಣಪತ್ರ ಸಲ್ಲಿಕೆ ಮಾಡಿದೆ.

Covid Third Wave: ಶಾಲೆಗಳಿಂದ ಸೋಂಕು ಹಬ್ಬುತ್ತೆ ಎಂಬುದು ನಿಜವಲ್ಲ: ವಿಶ್ವ ಬ್ಯಾಂಕ್‌

‘ಅಂಗವಿಕಲರಿಗೆ ಲಸಿಕಾಕರಣ ಪ್ರಮಾಣಪತ್ರ ಹಾಜರುಪಡಿಸುವುದರಿಂದ ವಿನಾಯಿತಿ ನೀಡಬೇಕು’ ಎಂಬ ವಿಷಯಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ‘ಯಾವುದೇ ಉದ್ದೇಶಕ್ಕಾಗಲಿ ಜತೆಯಲ್ಲಿ ಲಸಿಕೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಒಯ್ಯಬೇಕು ಎಂಬ ಯಾವುದೇ ಸೂಚನೆಯನ್ನು ನೀಡಿಲ್ಲ’ ಎಂದು ತಿಳಿಸಿದೆ.

Follow Us:
Download App:
  • android
  • ios