ಭಾರತದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ತಮ್ಮ 93ನೇ ವಯಸ್ಸಿನಲ್ಲಿ ನಿಧನರಾದರು. ಆರ್ಥಿಕ ಉದಾರೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು, ಹಲವು ಜನಪ್ರಿಯ ಯೋಜನೆಗಳಿಗೆ ಕಾರಣರಾಗಿದ್ದರು.

ನವದೆಹಲಿ (ಡಿ.26): ದೇಶದ ಮಾಜಿ ಪ್ರಧಾನಿ ಹಾಗೂ ಭಾರತದ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಅವರು ತಮ್ಮ 93 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಏಮ್ಸ್‌ ಆಸ್ಪತ್ರೆ ಅಧಿಕೃತ ಬುಲೆಟನ್‌ ನೀಡುವ ಮೂಲಕ ಮನಮೋಹನ್ ಸಿಂಗ್ ಅವರ ಸಾವಿನ ಬಗ್ಗೆ ತಿಳಿಸಿದೆ. ಗುರುವಾರ ಸಂಜೆಯ ವೇಳೆ ಅವರ ಆರೋಗ್ಯ ಹದಗೆಟ್ಟ ಕಾರಣದಿಂದ ಏಮ್ಸ್‌ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು ಡಾ. ಮನಮೋಹನ್ ಸಿಂಗ್ ಅವರ ಹೆಸರಿಗೆ ಅನೇಕ ಸಾಧನೆಗಳಿವೆ. ಅವರು ಆರ್ಥಿಕ ಉದಾರೀಕರಣಕ್ಕೆ ವಿಶೇಷ ಕೊಡುಗೆ ನೀಡಿದ ನಾಯಕರು. ಹಣಕಾಸು ಸಚಿವರಾಗಿ ಸೇವೆ ಸಲ್ಲಿಸುತ್ತಿರುವಾಗ, ಡಾ. ಮನಮೋಹನ್ ಸಿಂಗ್ ಅವರು 1991 ರಲ್ಲಿ ಪ್ರಾರಂಭವಾದ ಆರ್ಥಿಕ ಉದಾರೀಕರಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಇದು ಸರ್ಕಾರದ ನಿಯಂತ್ರಣವನ್ನು ಕಡಿಮೆ ಮಾಡುವುದು, ವಿದೇಶಿ ನೇರ ಹೂಡಿಕೆಯನ್ನು (FDI) ಹೆಚ್ಚಿಸುವುದು ಮತ್ತು ಭಾರತದ ಆರ್ಥಿಕತೆಯನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆಯುವ ರಚನಾತ್ಮಕ ಸುಧಾರಣೆಗಳನ್ನು ಜಾರಿಗೆ ತರುವುದನ್ನು ಒಳಗೊಂಡಿತ್ತು. ಅದರೊಂದಿಗೆ ಜನರಲ್ಲಿ ಜನಪ್ರಿಯವಾಗಿರುವ ಐದು ಪ್ರಮುಖ ಯೋಜನೆಗಳು ಇಲ್ಲಿವೆ.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (NREGA): 2005 ರಲ್ಲಿ ಪರಿಚಯಿಸಲಾದ ಈ ಕಾಯಿದೆಯು ಪ್ರತಿ ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೂಲಿ ಉದ್ಯೋಗವನ್ನು ಖಾತರಿಪಡಿಸಿತು, ಲಕ್ಷಾಂತರ ಜನರ ಜೀವನೋಪಾಯವನ್ನು ಗಮನಾರ್ಹವಾಗಿ ಸುಧಾರಿಸುವ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಹೆಚ್ಚಿಸುವ ಉದ್ದೇಶ ಹೊಂದಿತ್ತು.

Add Asianetnews Kannada as a Preferred SourcegooglePreferred

ಮಾಹಿತಿ ಹಕ್ಕು ಕಾಯಿದೆ (RTI): 2005 ರಲ್ಲಿ ಅಂಗೀಕರಿಸಲ್ಪಟ್ಟ RTI ನಾಗರಿಕರಿಗೆ ಸಾರ್ವಜನಿಕ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುವ ಹಕ್ಕನ್ನು ನೀಡುತ್ತದೆ, ಇದರಿಂದಾಗಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸಿತ್ತು.

ಆಧಾರ್ ಸೌಲಭ್ಯ: ನಿವಾಸಿಗಳಿಗೆ ವಿಶಿಷ್ಟ ಗುರುತನ್ನು ಒದಗಿಸಲು, ವಿವಿಧ ಸೇವೆಗಳಿಗೆ ಪ್ರವೇಶವನ್ನು ಒದಗಿಸಲು ಆಧಾರ್ ಯೋಜನೆಯನ್ನು ಇವರ ಅವಧಿಯಲ್ಲಿಯೇ ಆರಂಭಿಸಲಾಗಿತ್ತು.

Breaking: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ನೇರ ಲಾಭ ವರ್ಗಾವಣೆ: ಡಾ. ಮನಮೋಹನ್ ಸಿಂಗ್ ಅವರ ಸರ್ಕಾರವು ನೇರ ಲಾಭ ವರ್ಗಾವಣೆ ವ್ಯವಸ್ಥೆಯನ್ನು ಜಾರಿಗೆ ತಂದಿತು, ಇದು ಕಲ್ಯಾಣ ನಿಧಿ ವಿತರಣೆಯನ್ನು ಸರಳೀಕರಿಸಿತು ಮತ್ತು ಅನೇಕ ಲೋಪದೋಷಗಳನ್ನು ತೆಗೆದುಹಾಕಿತು.

Breaking: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಏಮ್ಸ್‌ ಆಸ್ಪತ್ರೆಗೆ ದಾಖಲು!

ಕೃಷಿ ಸಾಲ ಮನ್ನಾ (2008): ಕೃಷಿ ಬಿಕ್ಕಟ್ಟು ನೀಗಿಸಲು 60,000 ಕೋಟಿ ರೂ.ಗಳ ಸಾಲ ಮನ್ನಾ ಮೂಲಕ ರೈತರಿಗೆ ಪರಿಹಾರ ಒದಗಿಸುವ ಕಾರ್ಯ ಮನಮೋಹನ್‌ ಸಿಂಗ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಆಗಿತ್ತು.