ಕೊರೋನಾತಂಕ ನಡುವೆಯೇ 74ನೇ ಸ್ವಾತಂತ್ರ್ಯೋತ್ಸವ| ಕೆಂಪು ಕೋಟೆಯಲ್ಲಿ ಪಿಎತ್ರಿವರ್ಣ ಧ್ವಜ ಹಾರಿಸಿದ ಪಿಎಂ ಮೋದಿ| ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ

ನವದೆಹಲಿ(ಆ.15): ಕೊರೋನಾತಂಕ ನಡುವೆಯೇ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.

"

Scroll to load tweet…

ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿದ ಪಿಎಂ ಮೋದಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. 

Scroll to load tweet…

ಇದಾದ ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು. ಲೆಫ್ಟಿನೆಂಟ್​ ಕರ್ನರ್​ ಗೌರವ್ ಎಸ್​ ಯೆವಾಲ್ಕರ್ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗಾರ್ಡ್​ ಆಫ್​ ಹಾನರ್ ಸಲ್ಲಿಸಲಾಯ್ತು.

Scroll to load tweet…

ಇನ್ನು ಕೊರೋನಾತಂಕ ಹಿನ್ನೆಲೆ ಕೆಂಪುಕೋಟೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೆಲವೇ ಗಣ್ಯರಿಗೆ ಪ್ರವೇಶ ನೀಡಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. 

"