SIR ವಿಶೇಷ ಮತಪಟ್ಟಿ ಪರಿಷ್ಕರಣೆಗೆ (ಎಸ್ಐಆರ್) ಯಾವುದೇ ಅಡ್ಡಿ ಉಂಟಾಗಲು ಬಿಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಈ ಪ್ರಕ್ರಿಯೆಯನ್ನು ವಿರೋಧಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕಾನೂನು ಹೋರಾಟಕ್ಕೆ ಇದರಿಂದ ಹಿನ್ನಡೆಯಾಗಿದೆ.
- Home
- News
- India News
- India Latest News Live: SIR - ಮಮತಾ ಬ್ಯಾನರ್ಜಿ ಕಾನೂನು ಹೋರಾಟಕ್ಕೆ ಹಿನ್ನಡೆ; ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ!
India Latest News Live: SIR - ಮಮತಾ ಬ್ಯಾನರ್ಜಿ ಕಾನೂನು ಹೋರಾಟಕ್ಕೆ ಹಿನ್ನಡೆ; ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ!

ಹೈದರಾಬಾದ್: ‘ಬಿಜೆಪಿಯು ಮುಂದೊಂದು ದಿನ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಪ್ರಶಸ್ತಿಯನ್ನು ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಅವರಿಗೂ ನೀಡಲಿದೆ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಹಿಂದುತ್ವವಾದಿ ವಿ.ಡಿ. ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿಕೆ ಬೆನ್ನಲ್ಲೇ ಒವೈಸಿ ಈ ರೀತಿ ಹೇಳಿದ್ದಾರೆ.
ತೆಲಂಗಾಣದ ಮೆಹಬೂಬನಗರದಲ್ಲಿ ನಡೆದ ಚುನಾವಣಾ ರ್ಯಾಲಿ ವೇಳೆ ಮಾತನಾಡಿದ ಅವರು, ‘ಬ್ರಿಟಿಷರಿಗೆ 6 ಕ್ಷಮದಾನ ಅರ್ಜಿಗಳನ್ನು ಬರೆದವರಿಗೆ ಆರ್ಎಸ್ಎಸ್ ಭಾರತ ರತ್ನ ನೀಡಬೇಕೆಂದು ಹೇಳುತ್ತದೆ. ಗಾಂಧಿಯವರ ಹತ್ಯೆಯಲ್ಲಿ ಸಾವರ್ಕರ್ ಪಿತೂರಿಗಾರ ಎಂದು ನ್ಯಾ। ಕಪೂರ್ ಅವರ ವರದಿ ಹೇಳಿದೆ. ಗಾಂಧಿ ಹತ್ಯೆಗೆ ಸಂಚು ರೂಪಿಸಿದ ವ್ಯಕ್ತಿಗೆ ನೀವು ಭಾರತ ರತ್ನ ನೀಡಬೇಕೆಂದು ಕೇಳುತ್ತಿದ್ದೀರಿ. ಅಭಿನಂದನೆಗಳು. ಬಿಜೆಪಿ ಮುಂದೊಂದು ದಿನ ಮಹಾತ್ಮ ಗಾಂಧೀಜಿಯವರನ್ನು ಕೊಂದ ನಾಥೂರಾಮ್ ಗೋಡ್ಸೆ ಅವರಿಗೂ ಭಾರತ ರತ್ನ ನೀಡಬೇಕೆಂದು ಹೇಳುವ ಸಮಯ ಬರುತ್ತದೆ’ ಎಂದು ಕಿಡಿಕಾರಿದ್ದಾರೆ.