11:02 PM (IST) Dec 14

India Latest News Liveಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ

ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ, ಹೈದರಾಬಾದ್‌ನಲ್ಲಿ ಫುಟ್ಬಾಲ್ ದಿಗ್ಗಜ ಮೆಸ್ಸಿ ಜೊತೆ ಮುಖ್ಯಮಂತ್ರಿ ಫುಟ್ಬಾಲ್ ಆಡಿದ್ದಾರೆ. ಆದರೆ ವೈಡ್ ಪಾಸ್ ನೀಡಿದ ರೇವಂತ್ ರೆಡ್ಡಿ ವಿಡಿಯೋ ಭಾರಿ ವೈರಲ್ ಆಗಿದೆ.

Read Full Story
10:22 PM (IST) Dec 14

India Latest News Liveಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ

ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ, ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ 3ನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗೆಲುವು ದಾಖಲಿಸಿದೆ.

Read Full Story
09:09 PM (IST) Dec 14

India Latest News Liveಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!

 ನಟ ಶಾರುಖ್ ಖಾನ್ ಹೆಸರಿನಲ್ಲಿ ದುಬೈನಲ್ಲಿನಲ್ಲಿ ನಿರ್ಮಿಸುತ್ತಿರುವ ವಾಣಿಜ್ಯ ಗೋಪುರವನ್ನು ಕೆಲವೇ ವಾರಗಳಲ್ಲಿ ₹5,000 ಕೋಟಿಗೆ ಸಂಪೂರ್ಣವಾಗಿ ಮಾರಾಟ ಮಾಡಿದೆ. ಈ ಯೋಜನೆಯು ವಾಣಿಜ್ಯ ದರ್ಜೆ-ಎ ಕಚೇರಿ ಸ್ಥಳಗಳ ಮೇಲಿನ, ಭಾರತೀಯ ಹೂಡಿಕೆದಾರರ ಅಗಾಧ ಬೇಡಿಕೆಯನ್ನು ಸಾಬೀತುಪಡಿಸಿದೆ. 

Read Full Story
08:04 PM (IST) Dec 14

India Latest News LiveU19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು

U19 ಏಷ್ಯಾಕಪ್, ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಗೆ 90 ರನ್ ಗೆಲುವು, ದೀಪೇಶ್ ದೇವೇಂದ್ರನ್ ಹಾಕೂ ಕಾನಿಶ್ಕ್ ಚೌಹಾನ್ ಮಾರಕ ದಾಳಿಗೆ ಪಾಕಿಸ್ತಾನ ತಂಡ ಕೇವಲ 150 ರನ್‌ಗ ಆಲೌಟ್ ಆಗಿದೆ. 

Read Full Story
07:41 PM (IST) Dec 14

India Latest News Liveಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ, ಬಿಜೆಪಿಯ ಡೈನಾಮಿಕ್ ನಾಯಕ ಎಂದೇ ಗುರಿತಿಸಿಕೊಂಡಿರುವ ನಿತಿನ್ ನಬಿ ಆಯ್ಕೆಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಯಾರು ಈ ನಿತಿನ್ ನಬಿ?

Read Full Story
07:35 PM (IST) Dec 14

India Latest News Live2026ರಲ್ಲಿ ಚಿನ್ನದ ಬೆಲೆ ತೀವ್ರ ಏರಿಳಿತ, ಕಾರಣ ಬಿಚ್ಚಿಟ್ಟು ಹೂಡಿಕೆದಾರರಿಗೆ ಎಚ್ಚರಿಕೆ ಕೊಟ್ಟ ಪ್ರಮುಖ ಸಂಸ್ಥೆ!

ಜಾಗತಿಕ ಅನಿಶ್ಚಿತತೆಯಿಂದಾಗಿ ಲೋಹದ ಬೆಲೆ ಏರಿಕೆ 2026ರವರೆಗೂ ಮುಂದುವರೆಯಲಿದೆ. ಸುರಕ್ಷಿತ ಹೂಡಿಕೆ ಬೇಡಿಕೆ ಚಿನ್ನಕ್ಕೆ ಬಲ ನೀಡಿದರೆ, ಕೈಗಾರಿಕಾ ಬೇಡಿಕೆ ಬೆಳ್ಳಿಯ ಬೆಲೆ ಹೆಚ್ಚಿಸಲಿದೆ. ಆದ್ರೂ ಹೂಡಿಕೆದಾರರು ಸಂಭಾವ್ಯ ಅಪಾಯಗಳು ಮತ್ತು ಬೆಲೆ ಚಂಚಲತೆಯ ಬಗ್ಗೆ ಎಚ್ಚರದಿಂದಿರಬೇಕೆಂದು ವರದಿ ಸೂಚಿಸುತ್ತದೆ.

Read Full Story
06:44 PM (IST) Dec 14

India Latest News Liveಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ

ಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ ಬಿಚ್ಚಿಟ್ಟಿದ್ದಾರೆ. ಕೋಣೆ ಲಾಕ್ ಮಾಡಿ ಭಯದಿಂದ ಕಳೆದ ಪ್ರತಿ ಕ್ಷಣದ ಕುರಿತು ಮೈಕಲ್ ವಾನ್ ಹೇಳಿದ್ದಾರೆ.

Read Full Story
06:06 PM (IST) Dec 14

India Latest News LiveIPL 2026 ಮಿನಿ ಹರಾಜಿನಲ್ಲಿ ಈ 4 ಆಟಗಾರರ ಮೇಲೆ ಕಣ್ಣಿಟ್ಟಿವೆ ಎಲ್ಲಾ ಫ್ರಾಂಚೈಸಿಗಳು!

ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಶುರುವಾಗಿದೆ. ಈ ಹರಾಜಿನಲ್ಲಿ ಈ 4 ಆಟಗಾರರನ್ನು ಖರೀದಿಸಲು ಎಲ್ಲಾ ಫ್ರಾಂಚೈಸಿಗಳು ಕಣ್ಣಿಟ್ಟಿವೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.

Read Full Story
05:24 PM (IST) Dec 14

India Latest News Liveಕಾಂಗ್ರೆಸ್ ರ‍್ಯಾಲಿಯಲ್ಲಿ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ, ಈ ಭಾರಿಯ ಭರವಸೆ ಏನು?

ಕಾಂಗ್ರೆಸ್ ರ‍್ಯಾಲಿಯಲ್ಲಿ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ, ಈ ಭಾರಿಯ ಭರವಸೆ ಏನು? ವೋಟ್ ಚೋರಿ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ಆಯೋಜಿಸಿದ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ತಮ್ಮ ಗ್ಯಾರೆಂಟಿ ಭರವಸೆ ನೀಡಿದ್ದಾರೆ.

Read Full Story
05:02 PM (IST) Dec 14

India Latest News Liveವ್ಯವಹಾರದ ಬಗ್ಗೆ ಮಾತನಾಡುತ್ತಿದ್ದಾಗಲೇ ಉದ್ಯಮಿಗೆ ಹಠಾತ್ ಹೃದಯಾಘಾತ - ಸಿಪಿಆರ್ ಮಾಡಿ ಜೀವ ಉಳಿಸಿದ ಯುವಕ

ಇತ್ತೀಚೆಗೆ ಹಠಾತ್ ಹೃದಯ ಸ್ತಂಭನಕ್ಕೀಡಾಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗ್ತಿದೆ. ಕುಳಿತಲ್ಲೇ ನಿಂತಲ್ಲೇ ಡಾನ್ಸ್ ಮಾಡುತ್ತಲೇ, ನಿದ್ದೆಯಲ್ಲೇ ಅನೇಕರು ಕುಸಿದು ಬಿದ್ದು ಚಿರನಿದ್ರೆಗೆ ಜಾರಿದ್ದಾರೆ. ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಆದರೆ ಜೊತೆಗಿದ್ದವರ ಸಮಯಪ್ರಜ್ಞೆಯಿಂದಾಗಿ ಅವರ ಜೀವ ಉಳಿದಿದೆ.

Read Full Story
04:12 PM (IST) Dec 14

India Latest News Liveಬೊಂಡಿ ಬೀಚ್‌ ಗುಂಡಿನ ದಾಳಿಗೆ 10 ಸಾವು, ಬರಿಗೈಯಲ್ಲೇ ಶೂಟರ್ ಹಿಡಿದು ಗನ್ ಕಸಿದ ಸಾಹಸಿ ವಿಡಿಯೋ

ಬೊಂಡಿ ಬೀಚ್‌ ಗುಂಡಿನ ದಾಳಿಗೆ 10 ಸಾವು,ಬರಿಗೈಯಲ್ಲೇ ಶೂಟರ್ ಹಿಡಿದು ಗನ್ ಕಸಿದ ಸಾಹಸಿ ವಿಡಿಯೋ, ಯಹೂದಿಗಳ ಹಬ್ಬಕ್ಕೆ ಇಬ್ಬರು ಗನ್‌ಮ್ಯಾನ್ ಎಂಟ್ರಿಕೊಟ್ಟು ಅಮಾಯಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇಲ್ಲೇ ಇದ್ದ ಸಾಮಾನ್ಯನೊಬ್ಬ ಧೈರ್ಯದಿಂದ ಒರ್ವ ಶೂಟರ್ ಹಿಡಿದು ಕತೆ ಮುಗಿಸಿದ್ದಾನೆ.

Read Full Story
04:10 PM (IST) Dec 14

India Latest News Liveಇವು ಕೆರೆಯಲ್ಲಿ ಅರಳಿದ ತಾವರೆಗಳಲ್ಲ - ಸಂಭಾರ್ ಸರೋವರದಲ್ಲಿ ಗುಲಾಬಿ ಚಿತ್ತಾರ ಬಿಡಿಸಿದ ಸಾವಿರಾರು ಫ್ಲೇಮಿಂಗೋಗಳು

ಕಾಲಕ್ಕೆ ತಕ್ಕಂತೆ ತನ್ನಲ್ಲಿ ಅಮೋಘ ಜೀವಕಳೆಯನ್ನು ತುಂಬುವ ಪ್ರಕೃತಿಯ ಸೌಂದರ್ಯ ವರ್ಣನಾತೀತ. ಹಾಗೆಯೇ ಪ್ರಕೃತಿಯ ಅಮೋಘ ಸೃಷ್ಟಿಗೆ ಉದಾಹರಣೆಯಾಗಿದೆ ಈಗ ರಾಜಸ್ಥಾನದ ಸಾಂಭಾರ್ ಸರೋವರ. ಹೌದು ಫ್ಲೇಮಿಂಗೋ ಹಕ್ಕಿಗಳ ವಲಸೆಯಿಂದಾಗಿ ಈ ಕೆರೆ ಗುಲಾಬಿ ಬಣ್ಣಕ್ಕೆ ತಿರುಗಿದೆ. 

Read Full Story
03:48 PM (IST) Dec 14

India Latest News Liveಮುಂಬೈನಲ್ಲಿ ಸಚಿನ್, ಛೆಟ್ರಿ ಭೇಟಿಯಾಗಲಿರುವ ಮೆಸ್ಸಿ; ಈ ಲಿಸ್ಟ್‌ನಲ್ಲಿದ್ದಾರೆ ಹಲವು ಸೆಲಿಬ್ರಿಟೀಸ್!

ಫುಟ್ಬಾಲ್ ದಂತಕತೆ ಲಿಯೋನೆಲ್ ಮೆಸ್ಸಿ ತಮ್ಮ ಮೂರು ದಿನಗಳ ಭಾರತ ಪ್ರವಾಸದ ಭಾಗವಾಗಿ ಮುಂಬೈಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಸಚಿನ್ ತೆಂಡೂಲ್ಕರ್, ಸುನಿಲ್ ಛೆಟ್ರಿ ಅವರಂತಹ ಕ್ರೀಡಾ ದಿಗ್ಗಜರನ್ನು ಭೇಟಿಯಾಗಲಿದ್ದು, ಚಾರಿಟಿ ಫ್ಯಾಷನ್ ಶೋ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Read Full Story
03:30 PM (IST) Dec 14

India Latest News Liveಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸ ವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಕಾರಣ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಕಠಿಣ ಮಾರ್ಗಸೂಚಿ ಹೊರಡಿಸಲಾಗಿದೆ.

Read Full Story
02:57 PM (IST) Dec 14

India Latest News Liveಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ

ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಕ್ಯಾಬಿನ್‌ನಲ್ಲಿ ಮಾಲೀಕನ ಜೊತೆ ಸಾಕು ಪ್ರಾಣಿ ಪ್ರಯಾಣ ಮಾಡಬಹುದು. ಇನ್ನು 10 ಕೆಜಿಗಿಂತ ಮೇಲ್ಪಟ್ಟ ಸಾಕು ಪ್ರಾಣಿಗಳ ನಿಯಮದಲ್ಲೂ ಮಹತ್ತರ ಬದಲಾವಣೆ ಮಾಡಲಾಗಿದೆ.

Read Full Story
01:53 PM (IST) Dec 14

India Latest News LiveU19 Asia Cup - ಪಾಕಿಸ್ತಾನ ಎದುರು ಮುಗ್ಗರಿಸಿದ 14 ವರ್ಷದ ವೈಭವ್ ಸೂರ್ಯವಂಶಿ; ಸ್ಪರ್ಧಾತ್ಮಕ ಮೊತ್ತದತ್ತ ಯುವ ಪಡೆ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಅಂಡರ್ 19 ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆರಂಭಿಕ ಆಘಾತ ಅನುಭವಿಸಿತು. ಕಳೆದ ಪಂದ್ಯದ ಶತಕವೀರ ವೈಭವ್ ಸೂರ್ಯವಂಶಿ ಅಲ್ಪ ಮೊತ್ತಕ್ಕೆ ಔಟಾದರು, ಆದರೆ ಆರೋನ್ ಜಾರ್ಜ್‌ ಅವರ 85 ರನ್‌ಗಳ ನೆರವಿನಿಂದ ಭಾರತ ಚೇತರಿಸಿಕೊಂಡು ಸ್ಪರ್ಧಾತ್ಮಕ ಮೊತ್ತದತ್ತ ಸಾಗಿತು.
Read Full Story
01:07 PM (IST) Dec 14

India Latest News Liveಮೀನುಗಾರ ಬಲೆಗೆ ಸಿಲುಕಿ ತೀರಕ್ಕೆ ಬಂದ ಭಾರಿ ಗಾತ್ರದ ಶಾರ್ಕ್‌ - ವಾಪಸ್ ಸಮುದ್ರಕ್ಕೆ ಬಿಟ್ಟ ಕಡಲ ಮಕ್ಕಳು..

ಕೇರಳದ ವರ್ಕಲಾ ಬೀಚ್‌ನಲ್ಲಿ ಮೀನುಗಾರರ ಬಲೆಗೆ ಸಿಲುಕಿ ದಡಕ್ಕೆ ಬಂದಿದ್ದ ಬೃಹತ್ ಶಾರ್ಕ್ ಮೀನನ್ನು ಸ್ಥಳೀಯರು ಮತ್ತು ಪ್ರವಾಸಿಗರು ಸೇರಿ ರಕ್ಷಿಸಿದ್ದಾರೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್‌ಗಳ ಸಹಾಯದಿಂದ ಮೀನನ್ನು ಯಶಸ್ವಿಯಾಗಿ ಮರಳಿ ಸಮುದ್ರಕ್ಕೆ ಬಿಡಲಾಗಿದೆ.

Read Full Story
12:50 PM (IST) Dec 14

India Latest News Liveಸಂಜು ಇನ್, ಗಿಲ್ ಔಟ್ - ಮೂರನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ; ಯಾರಿಗೆಲ್ಲಾ ಸಿಗಲಿದೆ ಚಾನ್ಸ್?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು, ಸರಣಿ 1-1 ಸಮಬಲಗೊಂಡಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು, ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವ ನಿರೀಕ್ಷೆಯಿದೆ.
Read Full Story
11:53 AM (IST) Dec 14

India Latest News Liveಆತಂಕಕಾರಿ ಹಂತಕ್ಕೆ ದೆಹಲಿ ಹವೆ - 430ರ ಗಡಿ ದಾಟಿದ ವಾಯು ಗುಣಮಟ್ಟ ಸೂಚ್ಯಂಕ - ವಾರದಲ್ಲಿ ಕೆಲವೇ ದಿನ ಮಕ್ಕಳಿಗೆ ಶಾಲೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಗುಣಮಟ್ಟ ಕಳವಳಕಾರಿ ಮಟ್ಟಕ್ಕೆ ಕುಸಿದಿರುವ ಕಾರಣ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆಯ (ಜಿಆರ್‌ಎಪಿ) 4ನೇ ಹಂತದ ಅಡಿಯಲ್ಲಿ ಮಾಲಿನ್ಯ ತಡೆ ನಿರ್ಬ೦ಧಗಳನ್ನು ಶನಿವಾರ ಜಾರಿಗೊಳಿಸಲಾಗಿದೆ.

Read Full Story
11:37 AM (IST) Dec 14

India Latest News Liveಒಂದು ಕಾಲದಲ್ಲಿ ಮನೆ ಬಾಡಿಗೆ ಕಟ್ಟಲೂ ಹಣಕ್ಕಾಗಿ ಪರದಾಡುತ್ತಿದ್ದ WWE ರೆಸ್ಲರ್ ಜಾನ್ ಸಿನಾ ಸಂಪತ್ತು ಇಷ್ಟೊಂದಾ?

WWE ಸೂಪರ್‌ಸ್ಟಾರ್ ಜಾನ್ ಸಿನಾ ತಮ್ಮ 23 ವರ್ಷಗಳ ವೃತ್ತಿಪರ ರೆಸ್ಲಿಂಗ್ ಬದುಕಿಗೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ತಮ್ಮ ಕೊನೆಯ ಪಂದ್ಯದಲ್ಲಿ ಗುಂಟರ್ ವಿರುದ್ಧ ಸೋತರೂ, ಕುಸ್ತಿ ಮತ್ತು ಸಿನಿಮಾಗಳ ಮೂಲಕ ಸುಮಾರು 664 ಕೋಟಿ ರುಪಾಯಿ ಆಸ್ತಿಯನ್ನು ಗಳಿಸಿ ಯಶಸ್ವಿ ಪಯಣವನ್ನು ಪೂರ್ಣಗೊಳಿಸಿದ್ದಾರೆ.
Read Full Story