ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ, ಹೈದರಾಬಾದ್ನಲ್ಲಿ ಫುಟ್ಬಾಲ್ ದಿಗ್ಗಜ ಮೆಸ್ಸಿ ಜೊತೆ ಮುಖ್ಯಮಂತ್ರಿ ಫುಟ್ಬಾಲ್ ಆಡಿದ್ದಾರೆ. ಆದರೆ ವೈಡ್ ಪಾಸ್ ನೀಡಿದ ರೇವಂತ್ ರೆಡ್ಡಿ ವಿಡಿಯೋ ಭಾರಿ ವೈರಲ್ ಆಗಿದೆ.
- Home
- News
- India News
- India Latest News Live: ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
India Latest News Live: ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ

ತಿರುವನಂತಪುರ ಇತ್ತೀಚೆಗೆ ನಡೆದ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅತಿದೊಡ್ಡ ಮೈತ್ರಿಕೂಟವಾಗಿ ಹೊರಹೊಮ್ಮಿದೆ. ರಾಜ್ಯದ ಯಾವುದೇ ಮಹಾನಗರದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿರುವುದು ಇದೇ ಮೊದಲು. ಜತೆಗೆ ಎರ್ನಾಕುಲಂ ಜಿಲ್ಲೆಯ ತ್ರಿಪುನಿತುರ ನಗರಸಭೆಯಲ್ಲಿ ಮೊದಲ ಬಾರಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಪಾಲಕ್ಕಾಡ್ ನಗರಸಭೆಯಲ್ಲಿ ಸತತ 3ನೇ ಬಾರಿಗೆ ಗೆಲುವು ಸಾಧಿಸಿದೆ. 45 ವರ್ಷಗಳಲ್ಲಿ ತಿರುವನಂತಪುರದ ಅಭಿವೃದ್ಧಿಗೆ ಸಿಪಿಎಂ ಎನೂ ಮಾಡಿಲ್ಲ. ಹೀಗಾಗಿ ಜನ ನಮ್ಮನ್ನು ಸ್ವೀಕರಿಸಿದ್ದಾರೆ. ಶ್ರಮಕ್ಕೆ ಫಲ ಸಿಕ್ಕಿದೆ. ನಾನು ವೈಯಕ್ತಿಕವಾಗಿ ಪ್ರಚಾರದಲ್ಲಿ ತೊಡಗಿದ್ದ ಕಾರಣ ಚುನಾವಣಾ ಫಲಿತಾಂಶದ ಬಗ್ಗೆ ಸ್ಪಷ್ಟತೆ ಇತ್ತು ಎಂದು ಈ ಗೆಲುವಿನ ಬಗ್ಗೆ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
India Latest News Liveಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
India Latest News Liveಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ
ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ, ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ 3ನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗೆಲುವು ದಾಖಲಿಸಿದೆ.
India Latest News Liveಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!
ನಟ ಶಾರುಖ್ ಖಾನ್ ಹೆಸರಿನಲ್ಲಿ ದುಬೈನಲ್ಲಿನಲ್ಲಿ ನಿರ್ಮಿಸುತ್ತಿರುವ ವಾಣಿಜ್ಯ ಗೋಪುರವನ್ನು ಕೆಲವೇ ವಾರಗಳಲ್ಲಿ ₹5,000 ಕೋಟಿಗೆ ಸಂಪೂರ್ಣವಾಗಿ ಮಾರಾಟ ಮಾಡಿದೆ. ಈ ಯೋಜನೆಯು ವಾಣಿಜ್ಯ ದರ್ಜೆ-ಎ ಕಚೇರಿ ಸ್ಥಳಗಳ ಮೇಲಿನ, ಭಾರತೀಯ ಹೂಡಿಕೆದಾರರ ಅಗಾಧ ಬೇಡಿಕೆಯನ್ನು ಸಾಬೀತುಪಡಿಸಿದೆ.
India Latest News LiveU19 ಏಷ್ಯಾಕಪ್, 150 ರನ್ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು
U19 ಏಷ್ಯಾಕಪ್, ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಗೆ 90 ರನ್ ಗೆಲುವು, ದೀಪೇಶ್ ದೇವೇಂದ್ರನ್ ಹಾಕೂ ಕಾನಿಶ್ಕ್ ಚೌಹಾನ್ ಮಾರಕ ದಾಳಿಗೆ ಪಾಕಿಸ್ತಾನ ತಂಡ ಕೇವಲ 150 ರನ್ಗ ಆಲೌಟ್ ಆಗಿದೆ.
India Latest News Liveಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ, ಬಿಜೆಪಿಯ ಡೈನಾಮಿಕ್ ನಾಯಕ ಎಂದೇ ಗುರಿತಿಸಿಕೊಂಡಿರುವ ನಿತಿನ್ ನಬಿ ಆಯ್ಕೆಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಯಾರು ಈ ನಿತಿನ್ ನಬಿ?
India Latest News Live2026ರಲ್ಲಿ ಚಿನ್ನದ ಬೆಲೆ ತೀವ್ರ ಏರಿಳಿತ, ಕಾರಣ ಬಿಚ್ಚಿಟ್ಟು ಹೂಡಿಕೆದಾರರಿಗೆ ಎಚ್ಚರಿಕೆ ಕೊಟ್ಟ ಪ್ರಮುಖ ಸಂಸ್ಥೆ!
ಜಾಗತಿಕ ಅನಿಶ್ಚಿತತೆಯಿಂದಾಗಿ ಲೋಹದ ಬೆಲೆ ಏರಿಕೆ 2026ರವರೆಗೂ ಮುಂದುವರೆಯಲಿದೆ. ಸುರಕ್ಷಿತ ಹೂಡಿಕೆ ಬೇಡಿಕೆ ಚಿನ್ನಕ್ಕೆ ಬಲ ನೀಡಿದರೆ, ಕೈಗಾರಿಕಾ ಬೇಡಿಕೆ ಬೆಳ್ಳಿಯ ಬೆಲೆ ಹೆಚ್ಚಿಸಲಿದೆ. ಆದ್ರೂ ಹೂಡಿಕೆದಾರರು ಸಂಭಾವ್ಯ ಅಪಾಯಗಳು ಮತ್ತು ಬೆಲೆ ಚಂಚಲತೆಯ ಬಗ್ಗೆ ಎಚ್ಚರದಿಂದಿರಬೇಕೆಂದು ವರದಿ ಸೂಚಿಸುತ್ತದೆ.
India Latest News Liveಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ
ಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ ಬಿಚ್ಚಿಟ್ಟಿದ್ದಾರೆ. ಕೋಣೆ ಲಾಕ್ ಮಾಡಿ ಭಯದಿಂದ ಕಳೆದ ಪ್ರತಿ ಕ್ಷಣದ ಕುರಿತು ಮೈಕಲ್ ವಾನ್ ಹೇಳಿದ್ದಾರೆ.
India Latest News LiveIPL 2026 ಮಿನಿ ಹರಾಜಿನಲ್ಲಿ ಈ 4 ಆಟಗಾರರ ಮೇಲೆ ಕಣ್ಣಿಟ್ಟಿವೆ ಎಲ್ಲಾ ಫ್ರಾಂಚೈಸಿಗಳು!
ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಶುರುವಾಗಿದೆ. ಈ ಹರಾಜಿನಲ್ಲಿ ಈ 4 ಆಟಗಾರರನ್ನು ಖರೀದಿಸಲು ಎಲ್ಲಾ ಫ್ರಾಂಚೈಸಿಗಳು ಕಣ್ಣಿಟ್ಟಿವೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.
India Latest News Liveಕಾಂಗ್ರೆಸ್ ರ್ಯಾಲಿಯಲ್ಲಿ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ, ಈ ಭಾರಿಯ ಭರವಸೆ ಏನು?
ಕಾಂಗ್ರೆಸ್ ರ್ಯಾಲಿಯಲ್ಲಿ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ, ಈ ಭಾರಿಯ ಭರವಸೆ ಏನು? ವೋಟ್ ಚೋರಿ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ಆಯೋಜಿಸಿದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ತಮ್ಮ ಗ್ಯಾರೆಂಟಿ ಭರವಸೆ ನೀಡಿದ್ದಾರೆ.
India Latest News Liveವ್ಯವಹಾರದ ಬಗ್ಗೆ ಮಾತನಾಡುತ್ತಿದ್ದಾಗಲೇ ಉದ್ಯಮಿಗೆ ಹಠಾತ್ ಹೃದಯಾಘಾತ - ಸಿಪಿಆರ್ ಮಾಡಿ ಜೀವ ಉಳಿಸಿದ ಯುವಕ
ಇತ್ತೀಚೆಗೆ ಹಠಾತ್ ಹೃದಯ ಸ್ತಂಭನಕ್ಕೀಡಾಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗ್ತಿದೆ. ಕುಳಿತಲ್ಲೇ ನಿಂತಲ್ಲೇ ಡಾನ್ಸ್ ಮಾಡುತ್ತಲೇ, ನಿದ್ದೆಯಲ್ಲೇ ಅನೇಕರು ಕುಸಿದು ಬಿದ್ದು ಚಿರನಿದ್ರೆಗೆ ಜಾರಿದ್ದಾರೆ. ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಆದರೆ ಜೊತೆಗಿದ್ದವರ ಸಮಯಪ್ರಜ್ಞೆಯಿಂದಾಗಿ ಅವರ ಜೀವ ಉಳಿದಿದೆ.
India Latest News Liveಬೊಂಡಿ ಬೀಚ್ ಗುಂಡಿನ ದಾಳಿಗೆ 10 ಸಾವು, ಬರಿಗೈಯಲ್ಲೇ ಶೂಟರ್ ಹಿಡಿದು ಗನ್ ಕಸಿದ ಸಾಹಸಿ ವಿಡಿಯೋ
ಬೊಂಡಿ ಬೀಚ್ ಗುಂಡಿನ ದಾಳಿಗೆ 10 ಸಾವು,ಬರಿಗೈಯಲ್ಲೇ ಶೂಟರ್ ಹಿಡಿದು ಗನ್ ಕಸಿದ ಸಾಹಸಿ ವಿಡಿಯೋ, ಯಹೂದಿಗಳ ಹಬ್ಬಕ್ಕೆ ಇಬ್ಬರು ಗನ್ಮ್ಯಾನ್ ಎಂಟ್ರಿಕೊಟ್ಟು ಅಮಾಯಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇಲ್ಲೇ ಇದ್ದ ಸಾಮಾನ್ಯನೊಬ್ಬ ಧೈರ್ಯದಿಂದ ಒರ್ವ ಶೂಟರ್ ಹಿಡಿದು ಕತೆ ಮುಗಿಸಿದ್ದಾನೆ.
India Latest News Liveಇವು ಕೆರೆಯಲ್ಲಿ ಅರಳಿದ ತಾವರೆಗಳಲ್ಲ - ಸಂಭಾರ್ ಸರೋವರದಲ್ಲಿ ಗುಲಾಬಿ ಚಿತ್ತಾರ ಬಿಡಿಸಿದ ಸಾವಿರಾರು ಫ್ಲೇಮಿಂಗೋಗಳು
ಕಾಲಕ್ಕೆ ತಕ್ಕಂತೆ ತನ್ನಲ್ಲಿ ಅಮೋಘ ಜೀವಕಳೆಯನ್ನು ತುಂಬುವ ಪ್ರಕೃತಿಯ ಸೌಂದರ್ಯ ವರ್ಣನಾತೀತ. ಹಾಗೆಯೇ ಪ್ರಕೃತಿಯ ಅಮೋಘ ಸೃಷ್ಟಿಗೆ ಉದಾಹರಣೆಯಾಗಿದೆ ಈಗ ರಾಜಸ್ಥಾನದ ಸಾಂಭಾರ್ ಸರೋವರ. ಹೌದು ಫ್ಲೇಮಿಂಗೋ ಹಕ್ಕಿಗಳ ವಲಸೆಯಿಂದಾಗಿ ಈ ಕೆರೆ ಗುಲಾಬಿ ಬಣ್ಣಕ್ಕೆ ತಿರುಗಿದೆ.
India Latest News Liveಮುಂಬೈನಲ್ಲಿ ಸಚಿನ್, ಛೆಟ್ರಿ ಭೇಟಿಯಾಗಲಿರುವ ಮೆಸ್ಸಿ; ಈ ಲಿಸ್ಟ್ನಲ್ಲಿದ್ದಾರೆ ಹಲವು ಸೆಲಿಬ್ರಿಟೀಸ್!
ಫುಟ್ಬಾಲ್ ದಂತಕತೆ ಲಿಯೋನೆಲ್ ಮೆಸ್ಸಿ ತಮ್ಮ ಮೂರು ದಿನಗಳ ಭಾರತ ಪ್ರವಾಸದ ಭಾಗವಾಗಿ ಮುಂಬೈಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಸಚಿನ್ ತೆಂಡೂಲ್ಕರ್, ಸುನಿಲ್ ಛೆಟ್ರಿ ಅವರಂತಹ ಕ್ರೀಡಾ ದಿಗ್ಗಜರನ್ನು ಭೇಟಿಯಾಗಲಿದ್ದು, ಚಾರಿಟಿ ಫ್ಯಾಷನ್ ಶೋ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
India Latest News Liveಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್ಗಳಲ್ಲಿ ಪಟಾಕಿ ಆಚರಣೆ ಬ್ಯಾನ್
ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸ ವರ್ಷಕ್ಕೆ ಕ್ಲಬ್, ಬಾರ್, ಪಬ್ಗಳಲ್ಲಿ ಪಟಾಕಿ ಆಚರಣೆ ಬ್ಯಾನ್ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಕಾರಣ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಕಠಿಣ ಮಾರ್ಗಸೂಚಿ ಹೊರಡಿಸಲಾಗಿದೆ.
India Latest News Liveಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ
ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಕ್ಯಾಬಿನ್ನಲ್ಲಿ ಮಾಲೀಕನ ಜೊತೆ ಸಾಕು ಪ್ರಾಣಿ ಪ್ರಯಾಣ ಮಾಡಬಹುದು. ಇನ್ನು 10 ಕೆಜಿಗಿಂತ ಮೇಲ್ಪಟ್ಟ ಸಾಕು ಪ್ರಾಣಿಗಳ ನಿಯಮದಲ್ಲೂ ಮಹತ್ತರ ಬದಲಾವಣೆ ಮಾಡಲಾಗಿದೆ.
India Latest News LiveU19 Asia Cup - ಪಾಕಿಸ್ತಾನ ಎದುರು ಮುಗ್ಗರಿಸಿದ 14 ವರ್ಷದ ವೈಭವ್ ಸೂರ್ಯವಂಶಿ; ಸ್ಪರ್ಧಾತ್ಮಕ ಮೊತ್ತದತ್ತ ಯುವ ಪಡೆ ದಾಪುಗಾಲು
India Latest News Liveಮೀನುಗಾರ ಬಲೆಗೆ ಸಿಲುಕಿ ತೀರಕ್ಕೆ ಬಂದ ಭಾರಿ ಗಾತ್ರದ ಶಾರ್ಕ್ - ವಾಪಸ್ ಸಮುದ್ರಕ್ಕೆ ಬಿಟ್ಟ ಕಡಲ ಮಕ್ಕಳು..
ಕೇರಳದ ವರ್ಕಲಾ ಬೀಚ್ನಲ್ಲಿ ಮೀನುಗಾರರ ಬಲೆಗೆ ಸಿಲುಕಿ ದಡಕ್ಕೆ ಬಂದಿದ್ದ ಬೃಹತ್ ಶಾರ್ಕ್ ಮೀನನ್ನು ಸ್ಥಳೀಯರು ಮತ್ತು ಪ್ರವಾಸಿಗರು ಸೇರಿ ರಕ್ಷಿಸಿದ್ದಾರೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್ಗಳ ಸಹಾಯದಿಂದ ಮೀನನ್ನು ಯಶಸ್ವಿಯಾಗಿ ಮರಳಿ ಸಮುದ್ರಕ್ಕೆ ಬಿಡಲಾಗಿದೆ.
India Latest News Liveಸಂಜು ಇನ್, ಗಿಲ್ ಔಟ್ - ಮೂರನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ; ಯಾರಿಗೆಲ್ಲಾ ಸಿಗಲಿದೆ ಚಾನ್ಸ್?
India Latest News Liveಆತಂಕಕಾರಿ ಹಂತಕ್ಕೆ ದೆಹಲಿ ಹವೆ - 430ರ ಗಡಿ ದಾಟಿದ ವಾಯು ಗುಣಮಟ್ಟ ಸೂಚ್ಯಂಕ - ವಾರದಲ್ಲಿ ಕೆಲವೇ ದಿನ ಮಕ್ಕಳಿಗೆ ಶಾಲೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಗುಣಮಟ್ಟ ಕಳವಳಕಾರಿ ಮಟ್ಟಕ್ಕೆ ಕುಸಿದಿರುವ ಕಾರಣ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆಯ (ಜಿಆರ್ಎಪಿ) 4ನೇ ಹಂತದ ಅಡಿಯಲ್ಲಿ ಮಾಲಿನ್ಯ ತಡೆ ನಿರ್ಬ೦ಧಗಳನ್ನು ಶನಿವಾರ ಜಾರಿಗೊಳಿಸಲಾಗಿದೆ.