2007ರಲ್ಲಿ ತಮ್ಮ ಬರಹಗಳ ಕಾರಣದಿಂದ ಸೃಷ್ಟಿಯಾಗಿದ್ದ ವಿರೋಧದಿಂದ ಕೋಲ್ಕತಾ ತೊರೆದಿದ್ದ ಬಾಂಗ್ಲಾದೇಶದ ಲೇಖಕಿ 20 ತಸ್ಲೀಮಾ ನಸ್ರೀನ್(Taslima Nasrin) ವರ್ಷಗಳ ಬಳಿಕ ಮತ್ತೆ ಕೋಲ್ಕತಾಗೆ ಮರಳಲು ಸಜ್ಜಾಗಿದ್ದಾರೆ. ಆಗಸ್ಟ್ 1 ರಂದು ರವೀಂದ್ರ ಸದನದಲ್ಲಿ ನಡೆಯವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
- Home
- News
- India News
- India Latest News Live: 20 ವರ್ಷಗಳ ಬಳಿಕ ಕೋಲ್ಕತಾಗೆ ಬರಲು ತಸ್ಲೀಮಾ ನಸ್ರೀನ್ ಸಜ್ಜು! 2007ರ ಆ ಘಟನೆಯಿಂದ ಪಶ್ಚಿಮ ತೊರೆದಿದ್ದ ಲೇಖಕಿ!
India Latest News Live: 20 ವರ್ಷಗಳ ಬಳಿಕ ಕೋಲ್ಕತಾಗೆ ಬರಲು ತಸ್ಲೀಮಾ ನಸ್ರೀನ್ ಸಜ್ಜು! 2007ರ ಆ ಘಟನೆಯಿಂದ ಪಶ್ಚಿಮ ತೊರೆದಿದ್ದ ಲೇಖಕಿ!

ಕಾಶಿ ವಿಶ್ವನಾಥ ಮಂದಿರದ ಆವರಣದಲ್ಲಿರುವ ಜ್ಞಾನವಾಪಿ ಮಸೀದಿ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಗೊಳಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಸಲಹೆಯನ್ನು ಹಿಂದೂ, ಮುಸ್ಲಿಂ ಸಮುದಾಯದವರು ತಿರಸ್ಕರಿಸಿದ್ದಾರೆ. ನ್ಯಾಯಾಲಯಗಳೇ ಈ ವಿಷಯವನ್ನು ನಿರ್ಧರಿಸಬೇಕು ಎಂದು ಎರಡೂ ಕಡೆಯವರು ಕೋರಿದ್ದಾರೆ.
ಸುಪ್ರೀಂ ಕೋರ್ಟ್ ಪ್ರಕರಣಗಳ ಇತ್ಯರ್ಥಕ್ಕಾಗಿ ಆ.21-23ರ ತನಕ ವಿಶೇಷ ಲೋಕ ಅದಾಲತ್ ಆಯೋಜಿಸಿದೆ. ಅದಕ್ಕೂ ಮುಂಚಿತವಾಗಿ ‘ರಾಷ್ಟ್ರಾದ್ಯಂತ ಮಧ್ಯಸ್ಥಿಕೆ ತೀರ್ಪು ಮತ್ತು ವಿವಾದಗಳ ಸಾಮರಸ್ಯಕ್ಕಾಗಿ ಸುಪ್ರೀಂ ಕೋರ್ಟ್ ಕ್ರಮ’ ಎಂಬ ಕಾರ್ಯಕ್ರಮವನ್ನು ಕೋರ್ಟ್ಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅದರಂತೆ ಮಂಗಳವಾರ ಎರಡೂ ಕಡೆಯವರು ವಾರಾಣಸಿ ನ್ಯಾಯಾಲಯದಲ್ಲಿರುವ ಮಧ್ಯಸ್ಥಿಕೆ ಕೇಂದ್ರದ ಮುಂದೆ ಹಾಜರಾದರು.
ಈ ವೇಳೆ ಮುಸ್ಲಿಂ ಸಮುದಾಯದವರು, ‘ಇದೇ ರೀತಿಯ ಹಲವಾರು ವಿಷಯಗಳು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಉಳಿದಿವೆ. ನ್ಯಾಯಾಲಯದ ತೀರ್ಪನ್ನು ಪಾಲಿಸುತ್ತೇವೆ. ಆದರೆ ಮಧ್ಯಸ್ಥಿಕೆಯನ್ನು ಸ್ವೀಕರಿಸಲು ಸಿದ್ಧವಿಲ್ಲ’ ಎಂದರು. ಇತ್ತ ಹಿಂದೂ ಸಮುದಾಯವರು ‘ಮುಸ್ಲಿಂ ಕಡೆಯವರು ಜ್ಞಾನವಾಪಿಯಲ್ಲಿ ಅತಿಕ್ರಮಣಕಾರರು. ಜ್ಯೋತಿರ್ಲಿಂಗ ಸ್ಥಳದಲ್ಲಿ ಭವ್ಯ ಕಾಶಿ ವಿಶ್ವನಾಥ ದೇಗುಲ ನಿರ್ಮಿಸಲು ಸಾಧ್ಯವಾಗುವಂತೆ ಆವರಣ ಖಾಲಿ ಮಾಡಬೇಕು’ ಎಂದು ಕೋರಿದರು ಹಾಗೂ ಮಧ್ಯಸ್ಥಿಕೆಗೆ ನಿರಾಕರಿಸಿದರು,
India Latest News Live 15 July 202620 ವರ್ಷಗಳ ಬಳಿಕ ಕೋಲ್ಕತಾಗೆ ಬರಲು ತಸ್ಲೀಮಾ ನಸ್ರೀನ್ ಸಜ್ಜು! 2007ರ ಆ ಘಟನೆಯಿಂದ ಪಶ್ಚಿಮ ತೊರೆದಿದ್ದ ಲೇಖಕಿ!
India Latest News Live 15 July 2026ಭೋಜಶಾಲಾ ಸಮೀಪ ನಮಾಜ್ಗೆ ಪ್ರತ್ಯೇಕ ಸ್ಥಳವಕಾಶಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ
ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಮುಸ್ಲಿಮರಿಗೆ ಶುಕ್ರವಾರದ ನಮಾಜ್ಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಯಾವುದೇ ರಚನಾತ್ಮಕ ಬದಲಾವಣೆ ಮಾಡದಂತೆ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಿದೆ.