- Home
- News
- India News
- India Latest News Live: ಶಬರಿಮಲೆ: ಚಿನ್ನದ ಬಳಿಕ ಪಡಿಪೂಜೆ ಕಾಣಿಕೆ ಹಂಚಿಕೆಯಲ್ಲಿಯೂ ಭ್ರಷ್ಟಾಚಾರದ ಶಂಕೆ?
LIVE NOW
India Latest News Live: ಶಬರಿಮಲೆ: ಚಿನ್ನದ ಬಳಿಕ ಪಡಿಪೂಜೆ ಕಾಣಿಕೆ ಹಂಚಿಕೆಯಲ್ಲಿಯೂ ಭ್ರಷ್ಟಾಚಾರದ ಶಂಕೆ?

ಸಾರಾಂಶ
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸಿರುವ ನಡುವೆಯೇ ಮತ್ತೊಂದು ಅಕ್ರಮದ ಶಂಕೆ ವ್ಯಕ್ತವಾಗಿದ್ದು, ಪಡೆ ಪೂಜೆ ಕಾಣಿಕೆ ಹಂಚಿಕೆಯಲ್ಲಿಯೂ ಭ್ರಷ್ಟಾಚಾರ, ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ದಳ( ವಿಎಸಿಬಿ)ಯ ಗುಪ್ತಚರ ವಿಭಾಗ ಬಹಿರಂಗ ಪಡಿಸಿದೆ. ಪವಿತ್ರ ಪಡಿಪೂಜೆಯ ಬುಕ್ಕಿಂಗ್, ಭಕ್ತರಿಗೆ ಟಿಕೆಟ್ ವಿತರಣೆಯಲ್ಲಿ ನಿಗದಿಗಿಂತ ಹಲವು ಪಟ್ಟು ಹೆಚ್ಚು ದರಕ್ಕೆ ಮಾರಾಟ, ಹಣ ನೀಡಿದವರಿಗೆ ಪೂಜೆಯಲ್ಲಿ ಆದ್ಯತೆ ಸೇರಿದಂತೆ ಅನೇಕ ಅಕ್ರಮ ನಡೆದಿರುವ ಸಾಧ್ಯತೆ ಬಗ್ಗೆ ವರದಿ ಮಾಡಿದೆ. ಮಾತ್ರವಲ್ಲದೇ ತಿರುವಾಂಕೂರು ದೇವಸ್ವಂ ಮಂಡಳಿ( ಟಿಡಿಬಿ) ಸಿಬ್ಬಂದಿ ಮತ್ತು ಇತರ ಏಜೆಂಟ್ಗಳು ಇದರಲ್ಲಿ ಭಾಗಿದಾರರು ಎಂದು ಉಲ್ಲೇಖಿಸಿದೆ.