ಟೂರ್ನಿ ಮುಗಿಸಿ ರೈಲಿನಲ್ಲಿ ಮರಳುವಾಗ ದುರಂತ, 8 ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಆರ್ಚರ್ ಪಟು ಸಾವು, ಇತರರು ರೈಲು ನಿಲ್ಲುವ ಮೊದಲೇ ತುರ್ತಾಗಿ ಇಳಿಯಲು ಪ್ರಯತ್ನಿಸಿದ ಕಾರಣ ನೂಕು ನುಗ್ಗಲಿನಲ್ಲಿ ಕ್ರೀಡಾಪಟು ರೈಲಿನಿಂದ ಬಿದ್ದು ಮೃತಪಟ್ಟ ದುರಂತ ಘಟನೆ ನಡೆದಿದೆ.
- Home
- News
- India News
- India Latest News Live: ಟೂರ್ನಿ ಮುಗಿಸಿ ರೈಲಿನಲ್ಲಿ ಮರಳುವಾಗ ದುರಂತ, 8 ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಆರ್ಚರಿ ಪಟು ಸಾವು
India Latest News Live: ಟೂರ್ನಿ ಮುಗಿಸಿ ರೈಲಿನಲ್ಲಿ ಮರಳುವಾಗ ದುರಂತ, 8 ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಆರ್ಚರಿ ಪಟು ಸಾವು

ಕೋಲ್ಕತಾ: ‘ ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನದಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಂಗ್ಲಾದೇಶದ ಗಡಿ ಬೇಲಿಯನ್ನು ತೆಗೆದು ಹಾಕುತ್ತೇವೆ’ ಎಂದು ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸರ್ಕಾರ್ ಅವರ ಹೇಳಿಕೆಗೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕಿಡಿಕಾರಿದ್ದು, ‘ಬಿಜೆಪಿ ನಾಯಕರು ಬೂಟಾಟಿಕೆಯ ಹೊಸ ಆಳಕ್ಕೆ ಇಳಿದಿದ್ದಾರೆ.ಅಧಿಕಾರಕ್ಕೆ ಬಂದರೆ ಭಾರತ- ಬಾಂಗ್ಲಾ ನಡುವೆ ಯಾವುದೇ ಗಡಿ ಇರುವುದಿಲ್ಲ.ಎರಡು ದೇಶಗಳು ಒಂದಾಗುತ್ತದೆ ಎಂದು ಘೋಷಿಸುತ್ತಾರೆ. ಕೇಂದ್ರ ಸಚಿವ ಅಮಿತ್ ಶಾ ಅವರು, ತಮ್ಮದೇ ಸಂಸದರು ತೆಗೆದು ಹಾಕಲು ಬಯಸುವ ಗಡಿ ಬೇಲಿಗೆ ಜಾಗ ನೀಡಿದ್ದಕ್ಕೆ ಪಶ್ಚಿಮ ಬಂಗಾಳ ಸರ್ಕಾರವನ್ನು ದೂಷಿಸುತ್ತಾರೆ. ಸರ್ಕಾರ್ ಅವರ ಹೇಳಿಕೆ ರಾಷ್ಟ್ರೀಯತೆ ಅಲ್ಲ, ವಂಚನೆ’ ಎಂದು ಕಿಡಿ ಕಾರಿದರು.
India Latest News Live 2 November 2025ಟೂರ್ನಿ ಮುಗಿಸಿ ರೈಲಿನಲ್ಲಿ ಮರಳುವಾಗ ದುರಂತ, 8 ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಆರ್ಚರಿ ಪಟು ಸಾವು
India Latest News Live 2 November 2025Breaking News ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಅಪಘಾತ, 18 ಮಂದಿ ಸಾವು
Breaking News ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಅಪಘಾತ, 18 ಮಂದಿ ಸಾವು, ಮೂವರು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿಯಾಗಿದೆ. ಬಸ್ ಬಹುತೇಕ ನಜ್ಜು ಗುಜ್ಜಾಗಿದೆ.
India Latest News Live 2 November 2025ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ದಾಖಲೆ ಬರೆದ ಭಾರತ, ಸೌತ್ ಆಫ್ರಿಕಾಗೆ 299 ರನ್ ಟಾರ್ಗೆಟ್
ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ದಾಖಲೆ ಬರೆದ ಭಾರತ, ಸೌತ್ ಆಫ್ರಿಕಾಗೆ 299 ರನ್ ಟಾರ್ಗೆಟ್, ಸ್ಫೋಟಕ ಬ್ಯಾಟಿಂಗ್ ಮೂಲಕ ಶೆಫಾಲಿ ವರ್ಮಾ ದಾಖಲೆ ಬರೆದರೆ, ಇತ್ತ ಭಾರತ 298 ರನ್ ಸಿಡಿಸುವಲ್ಲಿ ಯಶಸ್ವಿಯಾಗಿದೆ.
India Latest News Live 2 November 2025ಬಿಹಾರ ಚುನಾವಣೆ ಕಸರತ್ತು, ಮೀನುಗಾರರ ಜೊತೆ ಕೆರೆಗೆ ಜಿಗಿದು ಮೀನು ಹಿಡಿದ ರಾಹುಲ್ ಗಾಂಧಿ
ಬಿಹಾರ ಚುನಾವಣೆ ಕಸರತ್ತು, ಮೀನುಗಾರರ ಜೊತೆ ಕೆರೆಗೆ ಜಿಗಿದು ಮೀನು ಹಿಡಿದ ರಾಹುಲ್ ಗಾಂಧಿ, ಬೋಟಿನಲ್ಲಿದ್ದ ರಾಹುಲ್ ಗಾಂಧಿ ದಿಢೀರ್ ಕೆರೆಗೆ ಜಿಗಿದಿದ್ದಾರೆ. ಬಳಿಕ ಮೀನುಗಾರರ ಜೊತೆ ಬಲೆ ಹಾಕಿ ಮೀನು ಹಿಡಿದಿದ್ದಾರೆ. ಇದೇ ವೇಳೆ ಮೀನುಗಾರರ ಸಮಸ್ಯೆಗಳ ಕುರಿತು ಮಾತನಾಡಿದ್ದಾರೆ.
India Latest News Live 2 November 2025ನಿದ್ದೆಯಲ್ಲಿದ್ದ ಪತ್ನಿ ಮಗಳು ಅತ್ತಿಗೆಯನ್ನು ಕೊಂದು ಸಾವಿಗೆ ಶರಣಾದ ವ್ಯಕ್ತಿ
Vikarabad crime news: ವ್ಯಕ್ತಿಯೊಬ್ಬ ತನ್ನ ಪತ್ನಿ, ಕಿರಿಯ ಮಗಳು ಮತ್ತು ಅತ್ತಿಗೆಯನ್ನು ಕುಡುಗೋಲಿನಿಂದ ಕೊಂದು, ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಈ ದಾಳಿಯಿಂದ ಹಿರಿಯ ಮಗಳು ಗಾಯಗೊಂಡು ಬದುಕುಳಿದಿದ್ದು, ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
India Latest News Live 2 November 2025ನನ್ನಷ್ಟು ಖ್ಯಾತಿ ಯಾರಿಗೂ ಸಿಗಲ್ಲ, ನಾನೇ ಕೊನೆಯ ಸೂಪರ್ ಸ್ಟಾರ್ ಎಂದ Shah Rukh Khan- ಭಾರಿ ಚರ್ಚೆ
India Latest News Live 2 November 2025ಜಾನ್ ಸೀನಾ ವಿರುದ್ಧ ಸೆಣಸಾಡಿದ್ದ WWE ಸ್ಟಾರ್ ಈಗ ಪ್ರೇಮಾನಂದ್ ಜಿ ಬಳಿ ನೆಲ ಗುಡಿಸುತ್ತಿರುವುದೇಕೆ?
ಜಾನ್ ಸೀನಾ ವಿರುದ್ಧ ಸೆಣಸಾಡಿದ್ದ WWE ಸ್ಟಾರ್ ಈಗ ಪ್ರೇಮಾನಂದ್ ಜಿ ಬಳಿ ನೆಲ ಗುಡಿಸುತ್ತಿರುವುದೇಕೆ? ಅಮೇರಿಕನ್ ಬೇಸ್ ಬಾಲ್ ತಂಡದಲ್ಲಿ ಆಡಿದ್ದ ಈ ಸ್ಟಾರ್, ಐಷರಾಮಿ ಬದುಕಿನಿಂದ ಆಶ್ರಮದಲ್ಲಿ ಸನ್ಯಾಸಿಯಾಗಿ ಬದುಕುತ್ತಿರವುದೇಕೆ?
India Latest News Live 2 November 2025Celebration Ends - ದಿನದ ಯಾವುದೇ ಸಮಯದಲ್ಲೂ ಮದ್ಯ ಪೂರೈಸುತ್ತಿದ್ದ ಸೆಲೆಬ್ರೇಷನ್ ಸಾಬು ಅರೆಸ್ಟ್
Celebration Ends: ಕೇರಳದ ಕೊಟ್ಟಾಯಂನಲ್ಲಿ, ಗ್ರಾಹಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು ಅಕ್ರಮ ಮದ್ಯ ಮಾರಾಟದ ಕಿಂಗ್ಪಿನ್ 'ಸೆಲೆಬ್ರೇಷನ್ ಸಾಬು' ಅಲಿಯಾಸ್ ಚಾರ್ಲಿ ಥಾಮಸ್ನನ್ನು ಬಂಧಿಸಿದ್ದಾರೆ.
India Latest News Live 2 November 2025ಸ್ಮಾರ್ಟೂ ಇಲ್ಲ, ಟ್ಯಾಲೆಂಟೂ ಇಲ್ಲ ಫೇಮಸ್ ಆಗಿದ್ಹೇಗೆ? ಶಾರುಖ್ಗೆ ಎದುರಾಯ್ತು ಪ್ರಶ್ನೆ! ನಟನ ಉತ್ತರ ಕೇಳಿ
ತಮ್ಮ 60ನೇ ಹುಟ್ಟುಹಬ್ಬದ ಪ್ರಯುಕ್ತ ಶಾರುಖ್ ಖಾನ್ 'ಆಸ್ಕ್ ಮಿ ಎನಿಥಿಂಗ್' ಸೆಷನ್ ನಡೆಸಿದರು. ಈ ವೇಳೆ, ತಮ್ಮ ಪ್ರತಿಭೆ ಮತ್ತು ಸೌಂದರ್ಯವನ್ನು ಪ್ರಶ್ನಿಸಿದ ನೆಟ್ಟಿಗನಿಗೆ ಚಾಕಚಕ್ಯತೆಯಿಂದ ಉತ್ತರಿಸಿದರು. ಅಲ್ಲದೆ, ಮಗ ಆರ್ಯನ್ ಖಾನ್ ನಿರ್ದೇಶಿಸುವ ಸಾಧ್ಯತೆಯ ಬಗ್ಗೆಯೂ ಹಾಸ್ಯಮಯವಾಗಿ ಮಾತನಾಡಿದರು.
India Latest News Live 2 November 2025ಗುಡುಗಿದ ವಾಷಿಂಗ್ಟನ್ ಸುಂದರ್; ಆಸ್ಟ್ರೇಲಿಯಾ ಎದುರು ಭಾರತಕ್ಕೆ ರೋಚಕ ಜಯ!
India Latest News Live 2 November 2025ಎಲೆಕ್ಟ್ರಾನಿಕ್ ಸಿಟಿ ಅಲ್ಲಾವುದ್ದೀನ್ ಮ್ಯಾಜಿಕ್ಗೆ ಬೆಂಗಳೂರು ತುಂಬಾ ಬಾಂಗ್ಲಾದೇಶಿಗಳು, ಕೋರ್ಟ್ ಗರಂ
ಎಲೆಕ್ಟ್ರಾನಿಕ್ ಸಿಟಿ ಅಲ್ಲಾವುದ್ದೀನ್ ಮ್ಯಾಜಿಕ್ಗೆ ಬೆಂಗಳೂರು ತುಂಬಾ ಬಾಂಗ್ಲಾದೇಶಿಗಳು, ಕೋರ್ಟ್ ಗರಂ, ನಮ್ಮ ಅಣ್ಣ, ನಮ್ಮ ಅಕ್ಕ, ಚಿಕ್ಕಪ್ಪನ ಮಗ, ಎಂದು 400 ಮಂದಿಯನ್ನು ಬಾಂಗ್ಲಾದೇಶದಿಂದ ಅಕ್ರಮವಾಗಿ ಬೆಂಗಳೂರಿಗೆ ಕರೆತಂದು ಇಲ್ಲೇ ಕೆಲಸ ಕೊಡಿಸಿ ಮದುವೆಯಾಗಿ ಸೆಟ್ಲ್ ಆಗುವಂತೆ ಮಾಡಿದ್ದಾನೆ.
India Latest News Live 2 November 2025ಮಹಿಳಾ ವಿಶ್ವಕಪ್ ಫೈನಲ್ - ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ! ಬಲಿಷ್ಠ ತಂಡಗಳು ಕಣಕ್ಕೆ
2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಮಳೆಯಿಂದಾಗಿ ತಡವಾಗಿ ಪಂದ್ಯ ಆರಂಭವಾದರೂ, ಉಭಯ ತಂಡಗಳು ಚೊಚ್ಚಲ ವಿಶ್ವಕಪ್ ಪ್ರಶಸ್ತಿಗಾಗಿ ಕಾದಾಡಲಿವೆ.
India Latest News Live 2 November 2025ಪಿಂಚಣಿ ಪಡೆಯಲು ಲೈಫ್ ಸರ್ಟಿಫಿಕೇಟ್ ಕಡ್ಡಾಯ, ಆನ್ಲೈನ್-ಆಫ್ಲೈನ್ ಮೂಲಕ ಸಲ್ಲಿಕೆ ಹೇಗೆ?
ಪಿಂಚಣಿ ಪಡೆಯಲು ಲೈಫ್ ಸರ್ಟಿಫಿಕೇಟ್ ಕಡ್ಡಾಯ, ಆನ್ಲೈನ್-ಆಫ್ಲೈನ್ ಮೂಲಕ ಸಲ್ಲಿಕೆ ಹೇಗೆ? ಜೀವನ್ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಪಿಂಚಣಿ ಪಡೆಯಲು ಸಮಸ್ಯೆಗಳು ಎದುರಾಗಲಿದೆ. ಸುಲಭವಾಗಿ ಈ ಪ್ರಕ್ರಿಯೆ ಮುಗಿಸುವುದು ಹೇಗೆ?
India Latest News Live 2 November 2025ಮಹಿಳಾ ವಿಶ್ವಕಪ್ - ಟಾಸ್ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟ ಐಸಿಸಿ!
ನವಿ ಮುಂಬೈ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಟಾಸ್ ಯಾವಾಗ ಎಂದು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.
India Latest News Live 2 November 2025ರಾಜಸ್ಥಾನದ ಪುಷ್ಕರ್ ಮೇಳದಲ್ಲಿ 21 ಕೋಟಿ ಮೌಲ್ಯದ ಕೋಣ ಹಠಾತ್ ಸಾವು
21 crore buffalo death: ರಾಜಸ್ತಾನದ ಪ್ರಸಿದ್ಧ ಪುಷ್ಕರ್ ಮೇಳದಲ್ಲಿ, 21 ಕೋಟಿ ಮೌಲ್ಯದ ಕೋಣವೊಂದು ಕುಸಿದು ಬಿದ್ದು ಸಾವನ್ನಪ್ಪಿದೆ. ಈ ಘಟನೆಯು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದ್ದು, ನಿರ್ಲಕ್ಷ್ಯ ಮತ್ತು ಕೊಲೆ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿವೆ.
India Latest News Live 2 November 2025ಮಹಿಳಾ ವಿಶ್ವಕಪ್ ಫೈನಲ್ - ಮಳೆ ತಂದಿಟ್ಟ ಹೊಸ ಟ್ವಿಸ್ಟ್! ಆಯೋಜಕರಿಂದ ಮಹತ್ವದ ಅಪ್ಡೇಟ್
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಪಂದ್ಯಕ್ಕೆ ಮೀಸಲು ದಿನವಿದ್ದು, ಎರಡೂ ದಿನ ಆಟ ಸಾಧ್ಯವಾಗದಿದ್ದರೆ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸುವ ನಿಯಮವಿದೆ.
India Latest News Live 2 November 2025ಮಹಾಕುಂಭ ಮೇಳ ಯೂಸ್ಲೆಸ್ ಎಂದ ಲಾಲೂ ಯಾದವ್ ಅಸಲಿ ಮುಖ ಬಹಿರಂಗಪಡಿಸಿದ ಬಿಜೆಪಿ
ಮಹಾಕುಂಭ ಮೇಳ ಯೂಸ್ಲೆಸ್ ಎಂದ ಲಾಲೂ ಯಾದವ್ ಅಸಲಿ ಮುಖ ಬಹಿರಂಗಪಡಿಸಿದ ಬಿಜೆಪಿ, ಹಿಂದೂಗಳ ಪವಿತ್ರ ಹಬ್ಬ ಅನವಶ್ಯಕ ಎಂದಿರುವ ಲಾಲೂ ಪ್ರಸಾದ್ ಯಾದವ್ಗೆ, ಯಾವುದೋ ದೇಶದಲ್ಲಿ ಆಚರಿಸುವ ಕ್ರೈಸ್ತರ ಹ್ಯಾಲೋವಿನ್ ಪವಿತ್ರವಾಯಿತೇ? ಎಂದು ಬಿಜೆಪಿ ವಿಡಿಯೋ ಸಮೇತ ತಿರುಗೇಟು ನೀಡಿದೆ.
India Latest News Live 2 November 2025ಡೇವಿಡ್-ಸ್ಟೋನಿಸ್ ಸಿಡಿಲಬ್ಬರ - ಭಾರತಕ್ಕೆ ಮೂರನೇ ಟಿ20 ಪಂದ್ಯ ಗೆಲ್ಲಲು ಬೃಹತ್ ಗುರಿ!
ಮೂರನೇ ಟಿ20 ಪಂದ್ಯದಲ್ಲಿ, ಆರಂಭಿಕ ಕುಸಿತದ ಹೊರತಾಗಿಯೂ ಟಿಮ್ ಡೇವಿಡ್ (74) ಮತ್ತು ಮಾರ್ಕಸ್ ಸ್ಟೋನಿಸ್ (64) ಅವರ ಸ್ಪೋಟಕ ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಚೇತರಿಸಿಕೊಂಡಿತು. ಅಂತಿಮವಾಗಿ, ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗೆ 186 ರನ್ಗಳ ಬೃಹತ್ ಮೊತ್ತವನ್ನು ಕಲೆಹಾಕಿದೆ.
India Latest News Live 2 November 2025ಟ್ಯೂಷನ್ಗೆ ಬರ್ತಿದ್ದ ಪುಟ್ಟ ಮಕ್ಕಳಿಗೆ ಲೈಂ*ಗಿಕ ಕಿರುಕುಳ - ಟ್ಯೂಷನ್ ಶಿಕ್ಷಕನಿಗೆ ಜೈಲು
Tuition Teacher: ಥಾಣೆಯಲ್ಲಿ, ಟ್ಯೂಷನ್ ಸಮಯದಲ್ಲಿ ಮೂವರು ಅಪ್ರಾಪ್ತ ಬಾಲಕಿಯರಿಗೆ ಲೈಂ*ಗಿಕ ಕಿರುಕುಳ ನೀಡಿದ 35 ವರ್ಷದ ಶಿಕ್ಷಕನಿಗೆ ಪೋಕ್ಸೋ ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
India Latest News Live 2 November 2025ಬಾಲಂಗೋಚಿಗಳ ಪರಾಕ್ರಮ - ದಕ್ಷಿಣ ಆಫ್ರಿಕಾ 'ಎ' ಎದುರು ಭಾರತ 'ಎ'ಗೆ ಸ್ಮರಣೀಯ ಗೆಲುವು
ದಕ್ಷಿಣ ಆಫ್ರಿಕಾ ಎ ವಿರುದ್ಧದ ಮೊದಲ ಚತುರ್ದಿನ ಟೆಸ್ಟ್ನಲ್ಲಿ ಭಾರತ ಎ ತಂಡ 3 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ನಾಯಕ ರಿಷಭ್ ಪಂತ್ ಅವರ 90 ರನ್ಗಳ ಹೋರಾಟದ ನಂತರ, ಬಾಲಂಗೋಚಿಗಳಾದ ಅಂಶುಲ್ ಕಂಬೋಜ್ ಮತ್ತು ಮಾನವ್ ಸುತಾರ್ ಅವರ ಅಜೇಯ ಜೊತೆಯಾಟದಿಂದ ಭಾರತಕ್ಕೆ ಗೆಲುವು ದಕ್ಕಿತು.