ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು, ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ಸಂಭ್ರಮಾಚರಣೆ ನಡೆಸುತ್ತಿದ್ದರೆ ಇತ್ತ, ಭಾರಿ ಅಧಿಪತ್ಯ ಹೊಂದಿದ್ದ ಸೂರ್ಯವಂಶಿ ಕುಟುಂಬದ 6 ಸದಸ್ಯರು ಸೋಲುಂಡಿದ್ದಾರೆ.
- Home
- News
- India News
- India Latest News Live: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
India Latest News Live: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನೂತನವಾಗಿ ನೇಮಕವಾಗಿದ್ದ ಮಹಿಳಾ ವೈದ್ಯೆ ಡಾ। ನುಸ್ರತ್ರ ಹಿಜಾಬ್ ಎಳೆದಿದ್ದರು. ಅಂದಿನಿಮದ ತೀವ್ರ ಮಾನಸಿಕ ಒತ್ತಡದಲ್ಲಿ ಸಿಲುಕಿರುವ ನುಸ್ರತ್, ಕರ್ತವ್ಯಕ್ಕೆ ಹಾಜರಾಗಲು ಕೊನೆಯ ದಿನವಾಗಿದ್ದ ಶನಿವಾರ ಡ್ಯೂಟಿಗೆ ಗೈರಾಗಿದ್ದಾರೆ. ಈ ನಡುವೆ ನುಸ್ರತ್ಗೆ ಜಾರ್ಖಂಡ್ ಸರ್ಕಾರ ಆಫರ್ ನೀಡಿದೆ. ‘ನಮ್ಮಲ್ಲಿ ನುಸ್ರತ್ಗೆ 3 ಲಕ್ಷ ರು. ಮಾಸಿಕ ಸಂಬಳ, ಸರ್ಕಾರಿ ಫ್ಲಾಟ್ ಮತ್ತು ಅಪೇಕ್ಷಿತ ಹುದ್ದೆಯೊಂದಿಗೆ ಕೆಲಸ ನೀಡುತ್ತೇವೆ’ ಎಂದು ಜಾರ್ಖಂಡ್ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಹೇಳಿದ್ದಾರೆ.
India Latest News Live 21 December 2025 ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
India Latest News Live 21 December 2025 ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ, ಮೈಸಾ ಆ್ಯಕ್ಷನ್ ಸಿನಿಮಾ ರಿಲೀಸ್ ಅಪ್ಡೇಟ್ ಕೊಟ್ಟ ನಟಿ
ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ, ಮೈಸಾ ಆ್ಯಕ್ಷನ್ ಸಿನಿಮಾ ರಿಲೀಸ್ ಅಪ್ಡೇಟ್ ಕೊಟ್ಟ ನಟಿ, ಇದುವರೆಗೆ ತೆರೆ ಮೇಲೆ ನೋಡಿದ ರಶ್ಮಿಕಾ ಮಂದಣ್ಣಗಿಂತ ಮೈಸಾ ಸಿನಿಮಾದಲ್ಲಿನ ರಶ್ಮಿಕಾ ಭಾರಿ ಭಿನ್ನ. ಬುಡುಕಟ್ಟು ಸಮುದಾಯದ ಮಹಿಳೆಯ ಕತೆಯೊಂದಿಗೆ ರಶ್ಮಿಕಾ ಬರುತ್ತಿದ್ದಾರೆ.
India Latest News Live 21 December 2025 ಬಿಜೆಪಿ ಮಹಾಯುತಿ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ
ಬಿಜೆಪಿ ಮಹಾಯುತಿ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ, ಮಹಾರಾಷ್ಟ್ರದಲ್ಲಿ ಮಹಾಯುತಿ 214 ಸ್ಥಾನ ಗೆದ್ದಿದೆ. ಇದು ಇವಿಎಂ, ಚುನಾವಣಾ ಆಯೋಗದ ಕೃಪೆ ಎಂದು ಕಾಂಗ್ರೆಸ್ ಸೇರಿ ವಿಪಕ್ಷ ಆರೋಪಿಸಿದೆ.
India Latest News Live 21 December 2025 ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ
ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ, ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸೆಯಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗಿದೆ. ದೀಪು ಚಂದ್ರದಾಸ್ ಬಡಿದು ಕೊಂದ ಬೆನ್ನಲ್ಲೇ ಇದೀಗ ಮತ್ತೊಬ್ಬ ಹಿಂದೂ ಮೇಲೆ ದಾಳಿಯಾಗಿದೆ.
India Latest News Live 21 December 2025 ನಿಧಿ ಅಗರ್ವಾಲ್ ಬೆನ್ನಲ್ಲೇ ನಟಿ ಸಮಂತಾಗೆ ಮೇಲೆ ಮುಗಿ ಬಿದ್ದ ಫ್ಯಾನ್ಸ್, ಹುಚ್ಚಾಟದ ದೃಶ್ಯ ಸೆರೆ
ನಿಧಿ ಅಗರ್ವಾಲ್ ಬೆನ್ನಲ್ಲೇ ನಟಿ ಸಮಂತಾಗೆ ಮೇಲೆ ಮುಗಿ ಬಿದ್ದ ಫ್ಯಾನ್ಸ್, ಹುಚ್ಚಾಟದ ದೃಶ್ಯ ಸೆರೆ, ಈ ಘಟನೆ ಕೂಡ ಹೈದರಾಬಾದ್ನಲ್ಲಿ ನಡೆದಿದೆ. ಬೌನ್ಸರ್, ಪೊಲೀಸರು ಇದ್ದರೂ ಅಭಿಮಾನಿಗಳು ಅತೀರೇಖದ ವರ್ತನೆಯಿಂದ ನಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
India Latest News Live 21 December 2025 ಅನ್ಯ ಧರ್ಮಿಯ ಜೊತೆ ಮದುವೆ - ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಪೋಷಕರ ಇಚ್ಛೆಗೆ ವಿರುದ್ಧವಾಗಿ ಅನ್ಯ ಧರ್ಮದವರನ್ನು ಮದುವೆಯಾದ ಮಗಳನ್ನು, ತಂದೆಯು ತನ್ನ ಸ್ವಯಾರ್ಜಿತ ಆಸ್ತಿಯಿಂದ ಹೊರಗಿಟ್ಟ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸ್ವಯಾರ್ಜಿತ ಆಸ್ತಿಯನ್ನು ಯಾರಿಗೆ ನೀಡಬೇಕೆಂಬುದು ತಂದೆಯ ಇಚ್ಛೆಗೆ ಬಿಟ್ಟ ವಿಚಾರವಾಗಿದೆ ಎಂದಿದೆ.
India Latest News Live 21 December 2025 ಸೋನಿಯಾ ಗಾಂಧಿ ತ್ಯಾಗದಿಂದ ಮಾತ್ರ ನಾವು ಕ್ರಿಸ್ಮಸ್ ಆಚರಿಸಲು ಸಾಧ್ಯವಾಗಿದೆ, ರೇವಂತ್ ರೆಡ್ಡಿ ವಿವಾದ
ಸೋನಿಯಾ ಗಾಂಧಿ ತ್ಯಾಗದಿಂದ ಮಾತ್ರ ನಾವು ಕ್ರಿಸ್ಮಸ್ ಆಚರಿಸಲು ಸಾಧ್ಯವಾಗಿದೆ, ರೇವಂತ್ ರೆಡ್ಡಿ ವಿವಾದ ಸೃಷ್ಟಿಸಿದ್ದಾರೆ. ಗಾಂಧಿ ಕುಟುಂಬ, ಕಾಂಗ್ರೆಸ್ ನಾಯಕರ ಮೆಚ್ಚಿಸಲು ನೀಡಿದ ಹೇಳಿಕೆ ಇದೀಗ ಭಾರಿ ಕೋಲಾಹಲ ಸೃಷ್ಟಿಸಿದೆ.
India Latest News Live 21 December 2025 ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA, 129 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಂಡಿದ್ದರೆ, ಮೈತ್ರಿಕೂಟ 200ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
India Latest News Live 21 December 2025 ಅಂಡರ್ 19 ಏಷ್ಯಾಕಪ್ ಫೈನಲ್ - ಪಾಕ್ ಎದುರು ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿ ಕನಸು ನುಚ್ಚುನೂರು!
2025ರ ಅಂಡರ್-19 ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನವು ಭಾರತವನ್ನು 191 ರನ್ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದಿದೆ. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, ಸಮೀರ್ ಮಿನ್ಹಾಸ್ ಅವರ 172 ರನ್ಗಳ ನೆರವಿನಿಂದ 347 ರನ್ ಗಳಿಸಿತು.
India Latest News Live 21 December 2025 ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ
ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ, ಕಾಂಗ್ರೆಸ್ ನಾಯಕಿ ಪೋಸ್ಟ್ ಮಾಡಿದ ಎಐ ವಿಡಿಯೋಗೆ ಇಷ್ಟು ದಿನ ಮೋದಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಏನಿದು ಏಟು ತಿರುಗೇಟಿನ ಕತೆ?
India Latest News Live 21 December 2025 ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ - ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ - ಬಂಧನ
ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿಯ 'ಜಾಗೋ ಮಾ' ಭಕ್ತಿಗೀತೆ ಹಾಡುತ್ತಿದ್ದ ಖ್ಯಾತ ಗಾಯಕಿ ಲಗ್ನಜಿತಾ ಚಕ್ರವರ್ತಿ ಅವರನ್ನು ಕಾರ್ಯಕ್ರಮದ ಸಂಘಟಕ ಮೆಹಬೂಬ್ ಮಲ್ಲಿಕ್ ತಡೆದು. ಜಾತ್ಯತೀತ ಗೀತೆ ಹಾಡುವಂತೆ ಒತ್ತಾಯಿಸಿ, ಹಲ್ಲೆಗೆ ಯತ್ನಿಸಿದ ಆರೋಪ ಕೇಳಿ ಬಂದಿದ್ದು, ಆತನನ್ನು ಬಂಧಿಸಲಾಗಿದೆ.
India Latest News Live 21 December 2025 2026ರ ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ಬದಲಾವಣೆ!
ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತ ತಂಡದಲ್ಲಿ ಕಳೆದ ವಿಶ್ವಕಪ್ಗೆ ಹೋಲಿಸಿದರೆ 7 ಬದಲಾವಣೆಗಳಾಗಿವೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.
India Latest News Live 21 December 2025 ಬೊಂಡಿ ಬೀಚ್ ರೀತಿಯಲ್ಲೇ ಮತ್ತೊಂದು ಉಗ್ರ ಕೃತ್ಯ, ಗುಂಡಿನ ದಾಳಿಯಲ್ಲಿ 10 ಸಾವು, ಹಲವರು ಗಂಭೀರ
ಬೊಂಡಿ ಬೀಚ್ ರೀತಿಯಲ್ಲೇ ಮತ್ತೊಂದು ಉಗ್ರ ಕೃತ್ಯ, ಗುಂಡಿನ ದಾಳಿಯಲ್ಲಿ 10 ಸಾವು, ಹಲವರು ಗಂಭೀರ, ಕಾರಿನಲ್ಲಿ ಆಗಮಿಸಿದ ಬಂದೂಕುದಾರಿಗಳು ಅಮಾಯಕರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
India Latest News Live 21 December 2025 1,2,5 ರೂ. ನಾಣ್ಯ ಇವೆಯಾ? ಹಾಗಿದ್ರೆ ರಿಸರ್ವ್ ಬ್ಯಾಂಕ್ ಕೊಟ್ಟಿರೋ ಬಿಗ್ ಅಪ್ಡೇಟ್ ಒಮ್ಮೆ ನೋಡಿ
ಸಾಮಾಜಿಕ ಜಾಲತಾಣಗಳಲ್ಲಿ 1 ರೂಪಾಯಿ ನಾಣ್ಯ ಬ್ಯಾನ್ ಆಗಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ವದಂತಿಗಳಿಗೆ ತೆರೆ ಎಳೆದಿರುವ ಭಾರತೀಯ ರಿಸರ್ವ್ ಬ್ಯಾಂಕ್ (RBI), 50 ಪೈಸೆ, 1, 2, 5, ಮತ್ತು 10 ರೂಪಾಯಿ ಸೇರಿದಂತೆ ಎಲ್ಲಾ ನಾಣ್ಯಗಳು ಕಾನೂನುಬದ್ಧವಾಗಿವೆ ಎಂದು ಸ್ಪಷ್ಟಪಡಿಸಿದೆ.
India Latest News Live 21 December 2025 ಟಿ20 ವಿಶ್ವಕಪ್ಗೆ ಟೀಂ ಇಂಡಿಯಾದಿಂದ ಹೊರಬಿದ್ದ ಟಾಪ್-5 ಆಟಗಾರರಿವರು! ಪಟ್ಟಿಯಲ್ಲಿವೆ ಅಚ್ಚರಿ ಹೆಸರು
ಮುಂಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಟಿ20 ತಂಡ ಪ್ರಕಟವಾಗಿದ್ದು, ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಈ ಟೂರ್ನಿಗೆ ಭಾರತ ತಂಡದಿಂದ ಹೊರಬಿದ್ದ ಐದು ಸ್ಟಾರ್ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ.
India Latest News Live 21 December 2025 ಸೆಲ್ಫಿ& ಶೇಕ್ಹ್ಯಾಂಡ್ಗೆ 10 ಲಕ್ಷ - ಇಂಡಿಯಾ ಟೂರ್ ಮಾಡಿದ ಮೆಸ್ಸಿಗೆ ಆಯೋಜಕರು ಕೊಟ್ಟಿದ್ದು ಎಷ್ಟು ಕೋಟಿ
ಫುಟ್ಬಾಲ್ ದಂತಕತೆ ಲಿಯೋನಲ್ ಮೆಸ್ಸಿ ಅವರ 'ದಿ ಗೋಟ್ ಇಂಡಿಯಾ ಟೂರ್' ಕೋಲ್ಕತ್ತಾದಲ್ಲಿ ಅವ್ಯವಸ್ಥೆಯಿಂದ ವಿವಾದಕ್ಕೆ ಕಾರಣವಾಯಿತು. ಈ ಪ್ರವಾಸಕ್ಕಾಗಿ ಮೆಸ್ಸಿಗೆ ಆಯೋಜಕರು ನೀಡಿದ್ದ ಹಣ ಎಷ್ಟು ಕೋಟಿ ಇಲ್ಲಿದೆ ಡಿಟೇಲ್ ಸ್ಟೋರಿ..
India Latest News Live 21 December 2025 ರೈಲು ಪ್ರಯಾಣಿಕರಿಗೆ ಶಾಕ್, ಡಿಸೆಂಬರ್ 26ರಿಂದ ಟಿಕೆಟ್ ದರ ಹೆಚ್ಚಳ ಘೋಷಿಸಿದ ಭಾರತೀಯ ರೈಲ್ವೇ
ರೈಲು ಪ್ರಯಾಣಿಕರಿಗೆ ಶಾಕ್, ಡಿಸೆಂಬರ್ 26ರಿಂದ ಟಿಕೆಟ್ ದರ ಹೆಚ್ಚಳ ಘೋಷಿಸಿದ ಭಾರತೀಯ ರೈಲ್ವೇ, ವಿಶೇಷ ಅಂದರೆ ಈ ಬಾರಿಯ ರೈಲು ಟಿಕೆಟ್ ದರ ಹೆಚ್ಚಳದಲ್ಲಿ ಪ್ರತಿ ನಿತ್ಯ ರೈಲಿನಲ್ಲಿ ಓಡಾಡುವವರಿಗೆ ಸೇರಿದಂತೆ ಹಲವರಿಗೆ ವಿನಾಯಿತಿ ನೀಡಲಾಗಿದೆ.
India Latest News Live 21 December 2025 60ರ ಹರೆಯದಲ್ಲಿ 3ನೇ ಹಿಂದೂ ಸ್ತ್ರೀ ಎಂಟ್ರಿ ಕೊಟ್ಟಾಗ ಆಮೀರ್ ಖಾನ್ಗೆ ಆಗಿದ್ದೇನು? ನಟನ ಬಾಯಲ್ಲೇ ಕೇಳಿ
India Latest News Live 21 December 2025 ಶುಭ್ಮನ್ ಗಿಲ್ ಕೈಬಿಟ್ಟಿಕ್ಕೇಕೆ? - ಫಾರ್ಮ್ ಅಲ್ಲ, ಬೇರೆಯೇ ಕಾರಣ ಎಂದ ಅಜಿತ್ ಅಗರ್ಕರ್!
ವಿಶ್ವಕಪ್ ತಂಡದಿಂದ ಶುಭಮನ್ ಗಿಲ್ರನ್ನು ಕೈಬಿಟ್ಟಿರುವುದು ಕೇವಲ ಫಾರ್ಮ್ ಕೊರತೆಯಿಂದಲ್ಲ, ಬದಲಿಗೆ ತಂಡದ ಸಂಯೋಜನೆಯ ಅಗತ್ಯತೆಗಳಿಂದ ಎಂದು ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಸ್ಪಷ್ಟಪಡಿಸಿದ್ದಾರೆ.
India Latest News Live 21 December 2025 ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ - ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು
ಉತ್ತರ ಪ್ರದೇಶದ ಬರೇಲಿಯಲ್ಲಿ, 8ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಅಪ್ರಾಪ್ತ ಬಾಲಕರ ಕೃತ್ಯಕ್ಕಾಗಿ ಅವರ ತಾಯಂದಿರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಗೆ ಸರಿಯಾದ ಸಂಸ್ಕಾರ ನೀಡದ ಕಾರಣಕ್ಕೆ ಪೋಷಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದು, ಈ ಪ್ರಕರಣ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.