09:52 AM (IST) Mar 21

India Latest News Live 21 March 2026ಗೆಳತಿ ಮಹಿಳಾಗೆ ಕೋಟ್ಯಾಂತರ ಮೌಲ್ಯದ ಫೆರಾರಿ ಕಾರು ಗಿಫ್ಟ್ ಕೊಟ್ಟ ಹಾರ್ದಿಕ್ ಪಾಂಡ್ಯ! ಬೆಲೆ ಕೇಳಿ ಫ್ಯಾನ್ಸ್ ಶಾಕ್, ಏನಿದರ ಸ್ಪೆಷಾಲಿಟಿ?

ಟಿ20 ವಿಶ್ವಕಪ್ ಗೆದ್ದ ಸಂಭ್ರಮದಲ್ಲಿ, ಹಾರ್ದಿಕ್ ಪಾಂಡ್ಯ ತಮ್ಮ ಪಾರ್ಟ್ನರ್ ಮಹಿಕಾ ಶರ್ಮಾಗೆ 10 ಕೋಟಿ ರೂ. ಮೌಲ್ಯದ ಫೆರಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಹೊಸ ಕಾರಿಗೆ ಮಹಿಕಾ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಲೇಖನವು ಕಾರಿನ ವಿಶೇಷತೆಗಳೇನು ನೋಡೋಣ ಬನ್ನಿ.

Read Full Story
09:21 AM (IST) Mar 21

India Latest News Live 21 March 2026ಗುರೂಜಿ ರಾಸಲೀಲೆ ವಿಡಿಯೋ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ, ಮಹಿಳಾ ಆಯೋಗ ಮುಖ್ಯೆಸ್ಥೆ ರಾಜೀನಾಮೆ

ಗುರೂಜಿ ರಾಸಲೀಲೆ ವಿಡಿಯೋ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ, ಮಹಿಳಾ ಆಯೋಗ ಮುಖ್ಯೆಸ್ಥೆ ರಾಜೀನಾಮೆ, 35ರ ಮಹಿಳೆಯನ್ನು3 ವರ್ಷದಿಂದ ಬಳಸಿಕೊಂಡ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಗುರೂಜಿ ಪ್ರಕರಣ ಇದೀಗ ಕೆಲ ಟ್ವಿಸ್ಟ್ ಪಡೆದುಕೊಂಡಿದೆ.

Read Full Story
08:39 AM (IST) Mar 21

India Latest News Live 21 March 2026Dhurandhar - 'ಧುರಂಧರ್' ಸಿನಿಮಾ ನೋಡುವವರು ಬಿಜೆಪಿಗೆ ವೋಟ್ ಹಾಕ್ತಾರೆ, ಬಿರುಗಾಳಿ ಎಬ್ಬಿಸಿದ ಅಸ್ಸಾಂ ಸಿಎಂ ಹೇಳಿಕೆ!

‘ಧುರಂಧರ್’ ಚಿತ್ರದ ಯಶಸ್ಸು ಬಿಜೆಪಿಗೆ ಸಿಕ್ಕ ಬೆಂಬಲವನ್ನು ಸೂಚಿಸುತ್ತದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಇದು ದ್ವೇಷ ಹರಡಲು ಮತ್ತು ಬಿಜೆಪಿಯ ವಿಭಜಕ ಅಜೆಂಡಾಕ್ಕಾಗಿ ಮಾಡಿದ ಪ್ರಚಾರದ ಸಿನಿಮಾ ಎಂದು ಟೀಕಿಸಿದೆ.
Read Full Story
08:24 AM (IST) Mar 21

India Latest News Live 21 March 2026ಐಪಿಎಲ್ ಆರಂಭಕ್ಕೂ ಮುನ್ನವೇ ತಂಡಗಳಿಗೆ ಆಘಾತಕಾರಿ ಸುದ್ದಿ! ಹಲವು ತಂಡಗಳಿಗೆ ಗಾಯದ ಟೆನ್ಶನ್‌!

ಐಪಿಎಲ್ 2024 ಆರಂಭಕ್ಕೆ ಮುನ್ನವೇ ಹಲವು ಫ್ರಾಂಚೈಸಿಗಳು ಆಟಗಾರರ ಗಾಯದ ಸಮಸ್ಯೆಯಿಂದ ಕಂಗೆಟ್ಟಿವೆ. ಜೋಶ್ ಹೇಜಲ್‌ವುಡ್‌, ಪ್ಯಾಟ್‌ ಕಮಿನ್ಸ್‌ರಂತಹ ಪ್ರಮುಖರು ಆರಂಭಿಕ ಪಂದ್ಯಗಳಿಗೆ ಗೈರಾದರೆ, ಸ್ಯಾಮ್ ಕರನ್, ನೇಥನ್ ಎಲ್ಲಿಸ್‌ರಂತಹ ಆಟಗಾರರು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

Read Full Story
08:22 AM (IST) Mar 21

India Latest News Live 21 March 2026Dhruv Rathee - 'ಧುರಂಧರ್ 2' ಕಳಪೆ ಪ್ರೊಪಗಾಂಡ ಸಿನಿಮಾ, ಆದಿತ್ಯ ಧರ್ ಬಿಜೆಪಿಯ ಪ್ರಚಾರಕ; ಧ್ರುವ್ ರಾಠಿ ಕಿಡಿ

ಯೂಟ್ಯೂಬರ್ ಧ್ರುವ್ ರಾಥಿ ಅವರು 'ಧುರಂಧರ್ 2' ಚಿತ್ರವನ್ನು ಕಳಪೆ 'ಪ್ರೊಪಗಾಂಡ' ಎಂದು ಟೀಕಿಸಿದ್ದಾರೆ. ನಿರ್ದೇಶಕ ಆದಿತ್ಯ ಧರ್ ಅವರನ್ನು 'ಬಿಜೆಪಿ ಪ್ರಚಾರಕ' ಎಂದು ಕರೆದಿದ್ದು, ಈ ಚಿತ್ರದ ಮೂಲಕ ಅದು ಎಲ್ಲರಿಗೂ ತಿಳಿಯಲಿದೆ ಎಂದಿದ್ದಾರೆ.

Read Full Story
08:12 AM (IST) Mar 21

India Latest News Live 21 March 2026Iran War - ಅಬ್ಬಾ ಕೊನೆಗೂ ಯುದ್ಧ ಮುಗೀತಾ? ವಾರ್ ನಿಲ್ಲಿಸುವ ಸುಳಿವು ಕೊಟ್ಟ ಟ್ರಂಪ್! ಹೇಳಿದ್ದೇನು?

ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗಳು ಬಹುತೇಕ ಗುರಿ ತಲುಪಿವೆ ಮತ್ತು ಅಲ್ಲಿನ ಸರ್ಕಾರವನ್ನು ಬದಲಿಸುವ ಪ್ರಯತ್ನ ಯಶಸ್ವಿಯಾಗುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕದನ ವಿರಾಮದ ಸಾಧ್ಯತೆಯನ್ನು ತಳ್ಳಿಹಾಕಿದ ಅವರು, ಹಾರ್ಮುಜ್ ವಿಚಾರದಲ್ಲಿ ನ್ಯಾಟೋವನ್ನು ಟೀಕಿಸಿದ್ದಾರೆ.

Read Full Story
07:18 AM (IST) Mar 21

India Latest News Live 21 March 2026ಕೆನಡಾ ಪ್ರವೇಶಕ್ಕೆ ಅನುಮತಿ ಇಲ್ಲದ ವಿಮಾನ

ಅಧಿಕಾರಿಗಳು ಬೋಯಿಂಗ್ 77-300 ER ವಿಮಾನದ ಬದಲು ಬೋಯಿಂಗ್ 777 ವಿಮಾನ AI185ವನ್ನು ಕೆನಡಾಗೆ ರೂಟ್ ಮಾಡಿದ್ದಾರೆ. ಪ್ರಯಾಣಿಕರ ಹೊತ್ತು ವಿಮಾನ ಚೀನಾ ಗಡಿ ದಾಟಿ ಸಾಗುತ್ತಿದ್ದಂತೆ ಅಧಿಕಾರಿಗಳಿಗೆ ತಪ್ಪಿನ ಅರಿವಾಗಿದೆ. ಬೋಯಿಂಗ್ 777 ವಿಮಾನಕ್ಕೆ ಕೆನಾಡ ಪ್ರವೇಶಿಸುವ ಅನುಮತಿ ಇರಲಿಲ್ಲ.