- Home
- News
- India News
- India Latest News Live: ರೈಲಿನಲ್ಲಿ ಹಿರಿಯ ನಾಗರಿಕರಿಗೆ ಮತ್ತೆ ಸಿಗುತ್ತಾ ಟಿಕೆಟ್ ರಿಯಾಯಿತಿ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್!
LIVE NOW
India Latest News Live: ರೈಲಿನಲ್ಲಿ ಹಿರಿಯ ನಾಗರಿಕರಿಗೆ ಮತ್ತೆ ಸಿಗುತ್ತಾ ಟಿಕೆಟ್ ರಿಯಾಯಿತಿ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್!

ಸಾರಾಂಶ
ಪ್ರಯಾಗ್ರಾಜ್: ಬಾಲಕರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಗಳ ತನಿಖೆಗಾಗಿ ಬದರಿ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಇಲ್ಲಿನ ವಿಶೇಷ ಪೋಕ್ಸೋ ನ್ಯಾಯಾಲಯವು ಝುನ್ಸಿ ಪೊಲೀಸರಿಗೆ ಆದೇಶಿಸಿದೆ. ವಿದ್ಯಾಮಠ ಎಂಬ ಆಶ್ರಮದಲ್ಲಿರುವ ವೇದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಮತ್ತು ಇತರರು ದೂರು ಸಲ್ಲಿಸಿದ್ದರು. ನ್ಯಾಯಾಲಯವು ಅರ್ಜಿಯನ್ನು ಸ್ವೀಕರಿಸಿ ಪೊಲೀಸರಿಗೆ ತನಿಖೆ ನಡೆಸುವಂತೆ ಆದೇಶಿಸಿದೆ. ‘ಇದರ ಬೆನ್ನಲ್ಲೇ ಸತ್ಯ ಗೆದ್ದಿದೆ’ ಎಂದು ಮಹಾರಾಜ್ ಪ್ರತಿಕ್ರಿಯಿಸಿದ್ದಾರೆ.
09:01 AM (IST) Feb 23
India Latest News Live 23 February 2026ರೈಲಿನಲ್ಲಿ ಹಿರಿಯ ನಾಗರಿಕರಿಗೆ ಮತ್ತೆ ಸಿಗುತ್ತಾ ಟಿಕೆಟ್ ರಿಯಾಯಿತಿ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್!
ಕೊರೊನಾ ಸಾಂಕ್ರಾಮಿಕಕ್ಕೂ ಮುನ್ನ, ಭಾರತೀಯ ರೈಲ್ವೆಯು ಹಿರಿಯ ನಾಗರಿಕರಿಗೆ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುತ್ತಿತ್ತು. ಆದರೆ, ಕೊರೊನಾ ಬಂದಾಗ ದೇಶದಲ್ಲಿದ್ದ ಆರ್ಥಿಕ ಸಂಕಷ್ಟದಿಂದಾಗಿ ಈ ಸೌಲಭ್ಯವನ್ನು ನಿಲ್ಲಿಸಲಾಗಿತ್ತು.
Read Full Story 08:35 AM (IST) Feb 23
India Latest News Live 23 February 2026Video - ಪೈಲಟ್ ಪತಿಯ ಕ್ಯೂಟ್ ವಿಡಿಯೋ ನೋಡಿ ಗಂಡ ಅಂದ್ರೆ ಹಿಂಗಿರಬೇಕು ಅಂದ್ರು ಮಹಿಳೆಯರು
ಪ್ರತಿ ಬಾರಿ ವಿದೇಶ ಪ್ರವಾಸ ಮುಗಿಸಿ ಬಂದಾಗಲೂ, ಪತ್ನಿಗಾಗಿ ಪ್ರೀತಿಯಿಂದ ಹೂವು ತರುವ ಇಂಡಿಗೋ ಪೈಲಟ್ ಒಬ್ಬರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಕ್ಯೂಟ್ ವಿಡಿಯೋವನ್ನು ಅವರ ಪತ್ನಿಯೇ ಶೇರ್ ಮಾಡಿಕೊಂಡಿದ್ದಾರೆ.
Read Full Story 07:35 AM (IST) Feb 23
India Latest News Live 23 February 2026ಜೆನ್ ಝೀಗಳು ಕುಡಿಯೋದು ಕಡಿಮೆ ಮಾಡಿದ್ದಕ್ಕೆ ₹75 ಲಕ್ಷ ಕೋಟಿ ಲಾಸ್; ಮಿಲೇನಿಯಲ್ಸ್ಗೆ ಹೋಲಿಸಿದ್ರೆ 20% ಕಮ್ಮಿ
ಜೆನ್ ಝೀ ಪೀಳಿಗೆಯವರು ಮದ್ಯಪಾನವನ್ನು ಕಡಿಮೆ ಮಾಡಿರುವುದರಿಂದ ಜಾಗತಿಕ ಮದ್ಯೋದ್ಯಮವು ಕಳೆದ 4 ವರ್ಷಗಳಲ್ಲಿ 75 ಲಕ್ಷ ಕೋಟಿ ರೂಪಾಯಿಗಳಷ್ಟು ಭಾರಿ ನಷ್ಟವನ್ನು ಅನುಭವಿಸಿದೆ. ಮಿಲೇನಿಯಲ್ಗಳಿಗೆ ಹೋಲಿಸಿದರೆ ಜೆನ್ ಝೀಗಳು ಶೇ.20ರಷ್ಟು ಕಡಿಮೆ ಕುಡಿಯುತ್ತಿದ್ದಾರೆ.