10:35 AM (IST) Jul 23

India Latest News Live 23 July 2026ಮತ್ತೆ ಬಂತು ಮಿನಿ ಒಲಿಂಪಿಕ್ಸ್‌; ಗ್ಲಾಸ್ಗೋ ಕಾಮನ್‌ವೆಲ್ತ್‌ ಗೇಮ್ಸ್‌ ಇಂದಿನಿಂದ ಆರಂಭ

ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ 23ನೇ ಕಾಮನ್‌ವೆಲ್ತ್‌ ಗೇಮ್ಸ್‌ ಆರಂಭವಾಗಲಿದ್ದು, 74 ದೇಶಗಳು ಪಾಲ್ಗೊಳ್ಳಲಿವೆ. ವೆಚ್ಚ ಕಡಿತದ ಕಾರಣ ಈ ಬಾರಿ ಕ್ರಿಕೆಟ್‌, ಶೂಟಿಂಗ್‌, ಹಾಕಿ ಸೇರಿದಂತೆ ಹಲವು ಪ್ರಮುಖ ಕ್ರೀಡೆಗಳನ್ನು ಕೈಬಿಡಲಾಗಿದ್ದು, ಇದು ಭಾರತದ ಪದಕ ಗಳಿಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
Read Full Story
09:48 AM (IST) Jul 23

India Latest News Live 23 July 2026ನೀಟ್ ವಿವಾದ - ಪ್ರತಿಭಟನಾಕಾರರ ಜತೆ ಮಾತನಾಡಲು ಇಷ್ಟು ವಿಳಂಬವೇಕೆ? ಕೇಂದ್ರದ ವಿರುದ್ಧ ಸಿಡಿದೆದ್ದ ಕೆ.ಅಣ್ಣಾಮಲೈ

ನೀಟ್ ಪರೀಕ್ಷಾ ಅಕ್ರಮ ಮತ್ತು ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ, ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಕೇಂದ್ರ ಸರ್ಕಾರದ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯ ವೈಫಲ್ಯಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಪ್ರತಿಭಟನೆಯನ್ನು ಸ್ವಾರ್ಥಿಗಳು ದುರುಪಯೋಗಪಡಿಸಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Read Full Story
09:42 AM (IST) Jul 23

India Latest News Live 23 July 2026ನೀಟ್ ಹಗರಣ - ಕೊನೆಗೂ ಮೌನ ಮುರಿದ ಮೋದಿ, ತಪ್ಪಿತಸ್ಥರಿಗೆ ಕಾದಿದೆ ಶಾಕ್..!

ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೊನೆಗೂ ಮೌನ ಮುರಿದಿದ್ದಾರೆ. ಯುವಕರ ಭವಿಷ್ಯವೇ ನಮಗೆ ಮುಖ್ಯವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಅವರು ಘೋಷಿಸಿದ್ದಾರೆ.
Read Full Story
09:23 AM (IST) Jul 23

India Latest News Live 23 July 2026ರಾಷ್ಟ್ರೀಯ ಹೆದ್ದಾರಿಗಳ ಮೃತ್ಯುಪಾಶ - 3 ವರ್ಷಗಳಲ್ಲಿ 37 ಸಾವಿರಕ್ಕೂ ಹೆಚ್ಚು ಜನರ ಬಲಿ; ಕರ್ನಾಟಕಕ್ಕೆ 3ನೇ ಸ್ಥಾನ!

ಕಳೆದ ಮೂರು ವರ್ಷಗಳಲ್ಲಿ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿನ 6,358 'ಬ್ಲ್ಯಾಕ್ ಕಾರಿಡಾರ್'ಗಳಲ್ಲಿ 37,000ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಅತಿ ಹೆಚ್ಚು ಅಪಘಾತ ಪೀಡಿತ ವಲಯಗಳನ್ನು ಹೊಂದಿರುವ ರಾಜ್ಯಗಳಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ಅಪಾಯಕಾರಿ ವಲಯಗಳನ್ನು ಸರಿಪಡಿಸಲು ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ.

Read Full Story
08:48 AM (IST) Jul 23

India Latest News Live 23 July 2026ದೆಹಲಿ ಸಿಜೆಪಿ ಪ್ರತಿಭಟನೆ - ರಾತ್ರಿ ಕನ್ನಾಟ ಪ್ಯಾಲೇಸ್ ಬಳಿ ನಡೆದಿದ್ದೇನು? ಪಿಎಸ್‌ಐಗೆ ಗಾಯ

ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಕನ್ನಾಟ ಪ್ಯಾಲೇಸ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಪಿಎಸ್‌ಐ ಒಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದ್ದು, ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.

Read Full Story
05:29 AM (IST) Jul 23

India Latest News Live 23 July 202610 ವರ್ಷದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಲೀಕ್‌, ಪ್ರಧಾನಿ ಮೋದಿ ಕ್ಷಮೆಯಾಚಿಸಲಿ - ರಾಹುಲ್ ಗಾಂಧಿ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, 7.5 ಕೋಟಿ ವಿದ್ಯಾರ್ಥಿಗಳು ಬಾಧಿತರಾಗಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಶಿಕ್ಷಣ ಸಚಿವ ಪ್ರಧಾನ್ ಪದಚ್ಯುತಿ ಹಾಗೂ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕೆಂದು ಅವರು ಆಗ್ರಹಿಸಿದ್ದು, ಇದುವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Read Full Story