ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ ಮಾಡಲಾಗಿದೆ. ಹಲವು ಮಹಡಿಗಳು ಹೊತ್ತಿ ಉರಿದಿದೆ. ಕೆಲ ಮಹಡಿಯ ನಿವಾಸಿಗಳು ದಟ್ಟ ಹೊಗೆಯಿಂದ ಅಸ್ವಸ್ಥರಾಗಿದ್ದಾರೆ.
- Home
- News
- India News
- India Latest News Live: ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
India Latest News Live: ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ

ಉತ್ತರ ಪ್ರದೇಶದ ರಾಜಧಾನಿ ಲಖನೌನ ಗೋಮತಿ ನದಿ ತೀರದಲ್ಲಿ ನಿರ್ಮಿಸಲಾದ ಭವ್ಯ 'ರಾಷ್ಟ್ರೀಯ ಪ್ರೇರಣಾ ಸ್ಥಳ'ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿಯ ನೆನಪಿಗಾಗಿ ಈ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಲಾಗುತ್ತಿದೆ.
ಈ ಹಿಂದೆ ತ್ಯಾಜ್ಯ ವಿಲೇವಾರಿ ಕೇಂದ್ರವಾಗಿದ್ದ (ಲಗಸಿ ವೇಸ್ಟ್ ಡಂಪ್) 65 ಎಕರೆ ಪ್ರದೇಶವನ್ನು ಇಂದು ₹230 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಉದ್ಯಾನವನ್ನಾಗಿ ಪರಿವರ್ತಿಸಲಾಗಿದೆ. ಈ ಇಡೀ ಸಂಕೀರ್ಣವನ್ನು 'ಕಮಲ'ದ ಆಕೃತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ರಾಷ್ಟ್ರೀಯತೆಯ ಸಂಕೇತವಾಗಿ ನಿರ್ಮಿಸಲಾಗಿದೆ.
India Latest News Liveಮುಂಬೈ ಹೌಸಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
India Latest News Liveಶಶಿ ತರೂರ್ ಬರೆದ 'ನಳಂದ' ಕವಿತೆ ವೈರಲ್ - ಇತಿಹಾಸ ಸುಡಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್ ಸಂಸದ!
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು 'ನಳಂದ ಸಾಹಿತ್ಯ ಉತ್ಸವ'ದಲ್ಲಿ ಭಾಗವಹಿಸಿ, ನಳಂದ ವಿಶ್ವವಿದ್ಯಾಲಯದ ಇತಿಹಾಸದ ಕುರಿತು ಭಾವನಾತ್ಮಕ ಕವಿತೆ ಬರೆದಿದ್ದಾರೆ. ತಮ್ಮ ಕವಿತೆಯಲ್ಲಿ ನಳಂದದ ವಿನಾಶ ಮತ್ತು ಪುನರುತ್ಥಾನವನ್ನು ಉಲ್ಲೇಖಿಸಿದ ಅವರು, ಬಿಹಾರದ ಅಭಿವೃದ್ಧಿಯನ್ನು ಶ್ಲಾಘಿಸಿದ್ದಾರೆ.
India Latest News Liveಗಡೀಪಾರದ ತಾರೀಖ್ ಬಾಂಗ್ಲಾಗೆ ಮರಳಿದ ದಿನವೇ ಮತ್ತೊಬ್ಬ ಹಿಂದೂ ಹತ್ಯೈಗೆದ ಉದ್ರಿಕ್ತರ ಗುಂಪು
ಗಡೀಪಾರದ ತಾರೀಖ್ ಬಾಂಗ್ಲಾಗೆ ಮರಳಿದ ದಿನವೇ ಮತ್ತೊಬ್ಬ ಹಿಂದೂ ಹತ್ಯೈಗೆದ ಉದ್ರಿಕ್ತರ ಗುಂಪು, ದೀಪು ಚಂದ್ರದಾಸ್ ಬಳಿಕ ಇದೀಗ ಅಮೃತ್ ಮೊಂಡಾಲ್ ಹತ್ಯೆಯಾಗಿದೆ. ದಾಳಿ ನಡೆಸಿ ಹಿಂದೂ ಹತ್ಯೆಗೈದ ಗುಂಪು ದೇಹಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದೆ.
India Latest News Liveಪೋಷಕರು ಮನೆಯಲ್ಲಿ, ಮಕ್ಕಳು ರೈಲ್ವೇ ಟ್ರಾಕ್ ಬಳಿ ಶವವಾಗಿ ಪತ್ತೆ, ಅನುಮಾನ ಮೂಡಿಸಿದ 4 ಸಾವು
ಪೋಷಕರು ಮನೆಯಲ್ಲಿ, ಮಕ್ಕಳು ರೈಲ್ವೇ ಟ್ರಾಕ್ ಬಳಿ ಶವವಾಗಿ ಪತ್ತೆ, ಅನುಮಾನ ಮೂಡಿಸಿದ 4 ಸಾವು, ಮೊದಲು ಇಬ್ಬರು ಮಕ್ಕಳ ಶವ ಪತ್ತೆಗೆ ಕಾರಣ ಹುಡುಕುತ್ತಿದ್ದ ಪೊಲೀಸರಿಗೆ ದಿಢೀರ್ ಪೋಷಕರ ಸಾವಿನ ಮಾಹಿತಿ ತಿಳಿದಿದೆ.
India Latest News Liveಟಿ20 ವಿಶ್ವಕಪ್ ತಂಡದಲ್ಲಿ ಸಂಚಲನ - ಸಂಜು ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು?
ಟಿ20 ವಿಶ್ವಕಪ್ಗೆ ಭಾರತೀಯ ತಂಡದಿಂದ ಶುಭಮನ್ ಗಿಲ್ ಅವರನ್ನು ಕೈಬಿಡಲಾಗಿದ್ದು, ಸಂಜು ಸ್ಯಾಮ್ಸನ್ ಮುಖ್ಯ ವಿಕೆಟ್ ಕೀಪರ್-ಆರಂಭಿಕರಾಗಿದ್ದಾರೆ. ಆದರೆ, ಇಶಾನ್ ಕಿಶನ್ ಅವರ ಬಾಲ್ಯದ ಕೋಚ್, ಅಭಿಷೇಕ್ ಶರ್ಮಾ ಜೊತೆ ಕಿಶನ್ ಇನ್ನಿಂಗ್ಸ್ ಆರಂಭಿಸುವುದು ಹೆಚ್ಚು ಸೂಕ್ತ ಎಂದು ವಾದಿಸಿದ್ದಾರೆ.
India Latest News Liveಇನ್ಫೋಸಿಸ್ನಿಂದ ಭರ್ಜರಿ ಗುಡ್ ನ್ಯೂಸ್, ಹೊಸಬರ ಸ್ಯಾಲರಿ 21 ಲಕ್ಷ ರೂಪಾಯಿಗೆ ಏರಿಕೆ
ಇನ್ಫೋಸಿಸ್ನಿಂದ ಭರ್ಜರಿ ಗುಡ್ ನ್ಯೂಸ್, ಫ್ರೆಶರ್ ಸ್ಯಾಲರಿ 21 ಲಕ್ಷ ರೂಪಾಯಿಗೆ ಏರಿಕೆ, ಕಾಲೇಜು , ಕೋರ್ಸ್ ಮುಗಿಸಿ ವೃತ್ತಿಗೆ ಕಾಲಿಡುವ ಹೊಸಬರಿಗೆ ಅತ್ಯುತ್ತಮ ಅವಕಾಶವನ್ನು ಇನ್ಫೋಸಿಸ್ ನೀಡುತ್ತಿದೆ.
India Latest News Liveಕೊಹ್ಲಿ-ರೋಹಿತ್ ಮುಂದಿನ ವಿಜಯ್ ಹಜಾರೆ ಟ್ರೋಫಿ ಮ್ಯಾಚ್ ಆಡೋದು ಯಾವಾಗ? ಲೈವ್ ಸ್ಟ್ರೀಮ್ ಇರುತ್ತಾ?
ಬೆಂಗಳೂರು: 2025-26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದು, ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಇದೀಗ ರೋ-ಕೋ ಜೋಡಿಯ ಮುಂದಿನ ಪಂದ್ಯ ಯಾವಾಗ ನೋಡೋಣ ಬನ್ನಿ.
India Latest News Liveಜೈಲರ್ ಸಿನಿಮಾ ವರ್ಮನ್ ಕುತ್ತಿಗೆ ನರ ಕಟ್; ಕರ್ಮಫಲವೆಂದವರಿಗೆ ನಾನಿನ್ನೂ ಸತ್ತಿಲ್ಲವೆಂದ ವಿನಾಯಕನ್!
India Latest News Liveಕಾಶಿ ವಿಶ್ವನಾಥ ಭಕ್ತರೇ ಗಮನಿಸಿ - ಇಂದಿನಿಂದ ಹೊಸ ನಿಯಮ ಜಾರಿ! ದರ್ಶನಕ್ಕೆ ತೆರಳುವ ಮುನ್ನ ಈ ಬದಲಾವಣೆಗಳನ್ನು ತಪ್ಪದೇ ತಿಳ್ಕೊಳ್ಳಿ!
Kashi Vishwanath Temple New Rules ಹೊಸ ವರ್ಷದ ಜನದಟ್ಟಣೆ ಹಿನ್ನೆಲೆ ಕಾಶಿ ವಿಶ್ವನಾಥ ದೇಗುಲದಲ್ಲಿ ಸ್ಪರ್ಶ ದರ್ಶನಕ್ಕೆ ನಿರ್ಬಂಧ.. ಈ ನಿರ್ಬಂಧ ಡಿಸೆಂಬರ್ 25ರಿಂದ ಜನವರಿ 3ರವರೆಗೆ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ವಿಐಪಿ ದರ್ಶನವನ್ನೂ ನಿಲ್ಲಿಸಲಾಗಿದ್ದು, ಎಲ್ಲರಿಗೂ ಸುಲಭ ದರ್ಶನ ಸಿಗಲಿದೆ.
India Latest News Liveಬೆಂಗಳೂರಿನಿಂದ ಆಯೋಧ್ಯೆ ತಲುಪಿದ ಬರೋಬ್ಬರಿ 2.5 ಕೋಟಿ ರೂ ಮೌಲ್ಯದ ಶ್ರೀರಾಮ ಕಲಾಚಿತ್ರ
ಬೆಂಗಳೂರಿನಿಂದ ಆಯೋಧ್ಯೆ ತಲುಪಿದ ಬರೋಬ್ಬರಿ 2.5 ಕೋಟಿ ರೂ ಮೌಲ್ಯದ ಶ್ರೀರಾಮ ಕಲಾಚಿತ್ರ, ಭಾರಿ ಭದ್ರತೆ, ಹಲವು ಅಂತರದ ಸುರಕ್ಷತೆಯೊಂದಿಗೆ ಶ್ರೀರಾಮನ ಅದ್ಭುತ ಕಲಾಚಿತ್ರ ಆಯೋಧ್ಯೆ ರಾಮ ಮಂದಿರ ತಲುಪಿದೆ.
India Latest News Liveಮದುವೆ ಮುರಿದ ಬಳಿಕ ದೊಡ್ಡ ನಿರ್ಧಾರ ಮಾಡಿದ ಸ್ಮೃತಿ ಮಂಧನಾ, ಇಡೀ ತಂಡ ಬಂದ್ರೂ ಕಾಣಿಸಿಕೊಳ್ಳದ ಸ್ಮೃತಿ..
Smriti Mandhana Skips Kapil Sharma Show After Personal Setback ಕಳೆದ ಕೆಲವು ದಿನಗಳಿಂದ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧಾನ ಅವರ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ. ಸ್ಮೃತಿ ಸಂಗೀತಗಾರ ಪಲಾಶ್ ಮುಚ್ಚಲ್ ಅವರನ್ನು ಮದುವೆಯಾಗಬೇಕಿತ್ತು.
India Latest News Liveಟಿ20 ರ್ಯಾಂಕಿಂಗ್ - ಐಸಿಸಿ ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ಗೆ ಶಾಕ್; ಟಾಪ್ 10 ಪಟ್ಟಿಯಿಂದ ಔಟ್!
ನೂತನ ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಪ್ 10ರಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ಸರಣಿಯಲ್ಲಿನ ಕಳಪೆ ಪ್ರದರ್ಶನದಿಂದಾಗಿ ಅವರು 13ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದೇ ವೇಳೆ, ತಿಲಕ್ ವರ್ಮಾ, ಅಭಿಷೇಕ್ ಶರ್ಮಾ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ.
India Latest News LiveBreaking ಪಿಕ್ನಿಕ್ ಹೊರಟ ಶಾಲಾ ವಿದ್ಯಾರ್ಥಿಗಳ ಬಸ್ ಅಪಘಾತ, ಹಲವರಿಗೆ ಗಾಯ
Breaking ಪಿಕ್ನಿಕ್ ಹೊರಟ ಶಾಲಾ ವಿದ್ಯಾರ್ಥಿಗಳ ಬಸ್ ಅಪಘಾತ, ಹಲವರಿಗೆ ಗಾಯ, ಖಾಸಗಿ ಶಾಲೆ ವಿದ್ಯಾರ್ಥಿಗಳ ಪ್ರವಾಸದ ವೇಳೆ ಈ ದುರ್ಘಟನೆ ನಡೆದಿದೆ. 60 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಬಸ್ ಪಲ್ಟಿಯಾಗಿದೆ.
India Latest News Liveಶನಿಯ ಪ್ರಭಾವ - 18 ತಿಂಗಳು 3 ರಾಶಿಗಳಿಗೆ ಅಗ್ನಿ ಪರೀಕ್ಷೆ- ಸುಲಭದ ಪರಿಹಾರವೇನು? ಇಲ್ಲಿದೆ ವಿವರ
ವೈದಿಕ ಜ್ಯೋತಿಷ್ಯದ ಪ್ರಕಾರ, ಶನಿಯು 2026 ರವರೆಗೆ ಮೀನ ರಾಶಿಯಲ್ಲಿದ್ದು, ಮೇಷ, ಮೀನ ಮತ್ತು ಕುಂಭ ರಾಶಿಯ ಮೇಲೆ ಸಾಡೇ ಸಾತಿಯ ಪ್ರಭಾವ ಬೀರುತ್ತಾನೆ. ಅದರಲ್ಲೂ, ಮುಂಬರುವ 18 ತಿಂಗಳುಗಳು ಮೇಷ ಮತ್ತು ಮೀನ ರಾಶಿಯವರಿಗೆ ಹೇಗಿದೆ, ಪರಿಹಾರವೇನು?
India Latest News Liveರೋಹಿತ್ ಬಾಯ್ ವಡಾ ಪಾವ್ ತಿನ್ತೀರಾ? ಹಿಟ್ಮ್ಯಾನ್ ಕೊಟ್ಟ ರಿಪ್ಲೆ ವಿಡಿಯೋ ವೈರಲ್
ಬರೋಬ್ಬರಿ 8 ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ ರೋಹಿತ್ ಶರ್ಮಾ, ಸಿಕ್ಕಿಂ ವಿರುದ್ಧ ಸ್ಪೋಟಕ ಶತಕ ಸಿಡಿಸಿದರು. ಪಂದ್ಯದ ವೇಳೆ ಅಭಿಮಾನಿಯೊಬ್ಬರು ವಡಾ ಪಾವ್ ಆಫರ್ ಮಾಡಿದಾಗ, 2027ರ ವಿಶ್ವಕಪ್ಗಾಗಿ ಫಿಟ್ನೆಸ್ ಕಡೆ ಗಮನ ಹರಿಸುತ್ತಿರುವ ಅವರು ನಯವಾಗಿ ನಿರಾಕರಿಸಿದ ಘಟನೆ ವೈರಲ್ ಆಗಿದೆ.
India Latest News Live'ತೆರಿಗೆ ಶೇ.50 ರಿಂದ 15ಕ್ಕೆ ಇಳಿಸಿ..'ಅಮೆರಿಕದ ಜೊತೆಗಿನ ಒಪ್ಪಂದಕ್ಕೆ ಕೊನೇ ಆಫರ್ ನೀಡಿದ ಭಾರತ!
ವ್ಯಾಪಾರ ಮಾತುಕತೆಗಳಲ್ಲಿ ಭಾರತವು ಅಮೆರಿಕಕ್ಕೆ ತನ್ನ ಅಂತಿಮ ಪ್ರಸ್ತಾವನೆಯನ್ನು ಮುಂದಿಟ್ಟಿದೆ. ಒಟ್ಟು 50% ಸುಂಕವನ್ನು 15%ಕ್ಕೆ ಇಳಿಸುವುದು ಮತ್ತು ರಷ್ಯಾದ ಕಚ್ಚಾ ತೈಲ ಖರೀದಿಯ ಮೇಲಿನ 25% ದಂಡವನ್ನು ಸಂಪೂರ್ಣವಾಗಿ ತೆಗೆದುಹಾಕಬೇಕೆಂದು ಭಾರತ ಒತ್ತಾಯಿಸಿದೆ.
India Latest News LiveViral Video - ಬೈಕ್ ಸೀಟ್ನಲ್ಲಿ 57 ಲಕ್ಷ ಹವಾಲಾ ಹಣ ಸಾಗಿಸ್ತಿದ್ದ ಸ್ಮಗ್ಲರ್, ದಾಳಿ ಮಾಡಿದ ಪೊಲೀಸ್!
India Latest News Liveತಮಿಳುನಾಡು ಹೆದ್ದಾರಿಯಲ್ಲೂ ಚಿತ್ರದುರ್ಗ ಮಾದರಿ ದುರಂತ, ಸರ್ಕಾರಿ ಬಸ್ ಪಂಚರ್ ಆಗಿ 9 ಮಂದಿ ಸಾವು!
ತಮಿಳುನಾಡಿನ ಕಡಲೂರು ಬಳಿ ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್ಇಟಿಸಿ ಬಸ್ಸಿನ ಟೈರ್ ಸ್ಫೋಟಗೊಂಡು ಭೀಕರ ಅಪಘಾತ ಸಂಭವಿಸಿದೆ. ಬಸ್ ಡಿವೈಡರ್ ದಾಟಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಮಗು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
India Latest News Liveವಿಜಯ್ ಹಜಾರೆ ಟ್ರೋಫಿ - ದೇಶಿ ಕ್ರಿಕೆಟಲ್ಲಿ ರನ್ ಮಳೆ, ದಾಖಲೆಗಳ ಪ್ರವಾಸ; ಮೊದಲ ದಿನವೇ 22 ಶತಕ ದಾಖಲು!
India Latest News Liveಇಸ್ರೋ ಹೊಸ ಮೈಲುಗಲ್ಲು- 6100 ಕೆಜಿ ತೂಕದ ಉಪಗ್ರಹ 15 ನಿಮಿಷದಲ್ಲಿ ಕಕ್ಷೆಗೆ
ಶ್ರೀಹರಿಕೋಟಾ: ಅಮೆರಿಕದ ಎಎಸ್ಟಿ ಸ್ಪೇಸ್ ಮೊಬೈಲ್ ಕಂಪನಿಗೆ ಸೇರಿದ ಬ್ಲ್ಯೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಇಸ್ರೋದ ಎಲ್ವಿಎಂ3- ಎಂ6 ರಾಕೆಟ್ ಬುಧವಾರ ಯಶಸ್ವಿಯಾಗಿ ಕಕ್ಷೆ ಸೇರಿಸಿದೆ. ಇದು, ಇಸ್ರೋ ಇದುವರೆಗೆ ಕೆಳಕಕ್ಷೆಗೆ ಸೇರಿಸಿದ ಅತ್ಯಂತ ಭಾರದ ಉಪಗ್ರಹವಾಗಿದೆ. ಮುಂಬರುವ ಮಾನವ ಸಹಿತ ಗಗನಯಾನಕ್ಕೆ ಕೂಡಾ ಇಸ್ರೋ, ಇದೇ ರಾಕೆಟ್ ಬಳಕೆ ಮಾಡಲು ಉದ್ದೇಶಿಸಿರುವ ಕಾರಣ, ಬುಧವಾರ ಸಾಧನೆ ಇಸ್ರೋದ ಕನಸಿಗೆ ಮತ್ತಷ್ಟು ಬೆಂಬಲ ನೀಡಿದೆ.
ಬ್ಲ್ಯೂಬರ್ಡ್ ಬ್ಲಾಕ್-2 ಉಪಗ್ರಹ ಹೊತ್ತ ಬಾಹುಬಲಿ ಖ್ಯಾತಿಯ ಎಲ್ವಿಎಂ3-ಎಂಸಿ ರಾಕೆಟ್ ಬುಧವಾರ ಬೆಳಗ್ಗೆ 9.55ಕ್ಕೆ ನಭಕ್ಕೆ ನೆಗೆದು, 15 ನಿಮಿಷಗಳ ಬಳಿಕ ಉಪಗ್ರಹವನ್ನು ಯಶಸ್ವಿಯಾಗಿ ಕೆಳಹಂತದ ಕಕ್ಷೆಗೆ ಸೇರಿಸಿತು.
ಇಸ್ರೋದ ಈ ಸಾಧನೆಗೆ, ಬೆಂಗಳೂರು ಮೂಲದ ಸಂಸ್ಥೆಯ ಅಧ್ಯಕ್ಷ ನಾರಾಯಣನ್ ಮತ್ತು ಪ್ರಧಾನಿ ನರೇಂದ್ರ ಮೋದಯಾಗಿ ಗಣ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.