ಇಲ್ಲೊಂದು ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳೆಯರು ಗಂಡನನ್ನು ಬಾಡಿಗೆಗೆ ಪಡೆಯುತ್ತಾರೆ. ಹೌದು ಆ ದೇಶದಲ್ಲಿ ಲಿಂಗ ಅಸಮತೋಲನ ತೀವ್ರವಾಗಿದ್ದು, ಮಹಿಳೆಯರಿಗೆ ಹೋಲಿಸಿದರೆ ಪುರುಷರ ಸಂಖ್ಯೆ ತೀರ ಕಡಿಮೆ ಇದೆ. ಇದೇ ಕಾರಣಕ್ಕೆ ಇಲ್ಲಿ ಪುರುಷರನ್ನು ಮಹಿಳೆಯರು ದುಡ್ಡು ನೀಡಿ ಬಾಡಿಗೆಗೆ ಪಡೆದುಕೊಳ್ಳುತ್ತಾರೆ.
- Home
- News
- India News
- India Latest News Live: ಪುರುಷರ ಕೊರತೆ - ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು
India Latest News Live: ಪುರುಷರ ಕೊರತೆ - ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು

ಪೈಲಟ್ಗಳ ಕೊರತೆಯಿಂದ ಇಂಡಿಗೋ ವಿಮಾನಗಳ ರದ್ದು ಮತ್ತು ವಿಳಂಬ ಮುಂದುವರಿದಿದ್ದು, ಶುಕ್ರವಾರ 1000ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡವು. ಇಂಡಿಗೋ ನಿತ್ಯ ನಡೆಸುವ 2300 ಸಂಚಾರದ ಪೈಕಿ ಅರ್ಧಕ್ಕರ್ಧ ಸಂಚಾರ ರದ್ದಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆಯೇ ಹೀಗೆ ಸಾವಿರಾರು ಸಂಚಾರ ರದ್ದಾಗುತ್ತಿರುವ ಕಾರಣ ದೇಶವ್ಯಾಪಿ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇದರ ಬೆನ್ನಲ್ಲೇ ವಿಮಾನಗಳ ರದ್ದು ಮತ್ತು ವಿಳಂಬಕ್ಕೆ ಕೊನೆ ಹಾಡುವ ಉದ್ದೇಶದಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ತಾನೇ ಕಳೆದ ತಿಂಗಳು ಪೈಲಟ್ಗಳ ಕರ್ತವ್ಯದ ಅವಧಿಗೆ ಕಡಿವಾಣ ಹಾಕಿ ಹೊರಡಿಸಿದ್ದ ಕಠಿಣ ನಿಯಮಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪೈಲಟ್ಗಳ ಲಭ್ಯತೆ ಶನಿವಾರದಿಂದ ಹೆಚ್ಚಾಗುವ ನಿರೀಕ್ಷೆ ಇದೆ. ಇನ್ನೊಂದೆಡೆ ಬೆಳವಣಿಗೆ ಕುರಿತು ತನಿಖೆಗೆ ಕೇಂದ್ರ ಸರ್ಕಾರ ನಾಲ್ವರು ಸದಸ್ಯರ ಸಮಿತಿ ರಚಿಸಿದೆ.
India Latest News Liveಪುರುಷರ ಕೊರತೆ - ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು
India Latest News Liveದಕ್ಷಿಣ ಆಫ್ರಿಕಾ ಎದುರಿನ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಮೇಜರ್ ಚೇಂಜ್?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಮೂರನೇ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಬೌಲಿಂಗ್ ವಿಭಾಗದ ಬಗ್ಗೆ ಚಿಂತೆಯಲ್ಲಿರುವ ಟೀಂ ಇಂಡಿಯಾ, ಹ್ಯಾಟ್ರಿಕ್ ಶತಕದ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಲವನ್ನು ನೆಚ್ಚಿಕೊಂಡಿದೆ.
India Latest News LiveGold Silver Price Today - ಚಿನ್ನದ ದರದಲ್ಲಿ ಏರಿಕೆನಾ? ಇಳಿಕೆನಾ?
India Latest News Liveಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್ ಬಂಧನ
ಸುಮಾರು 10 ವರ್ಷಗಳಿಂದ ಭದ್ರತಾ ಪಡೆಗಳಿಂದ ತಪ್ಪಿಸಿಕೊಂಡಿದ್ದ ಅಂತಾರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆಗಾರ್ತಿ ಯಾಂಗ್ಚೆನ್ ಲಾಚುಂಗ್ಪಾಳನ್ನು ಇಂಡೋ-ಚೀನಾ ಗಡಿಯಲ್ಲಿ ಬಂಧಿಸಲಾಗಿದೆ. ಮಧ್ಯಪ್ರದೇಶ ಹುಲಿ ದಾಳಿ ಪಡೆ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಬಂಧನವಾಗಿದೆ.
India Latest News Liveಕೆಎಸ್ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹಲವು ನಕಲಿ ಹಾಗೂ ಅಸ್ತಿತ್ವದಲ್ಲಿಲ್ಲದ ಕ್ಲಬ್ಗಳಿವೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ, ಅಭ್ಯರ್ಥಿ ವಿಎಂ ಮಂಜುನಾಥ್ ಅವರು ಚುನಾವಣಾ ಅಕ್ರಮ ತಡೆಯಲು ಆಗ್ರಹಿಸಿ ದೂರು ನೀಡಿದ್ದಾರೆ.
India Latest News Liveಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ವಿಶಾಖಪಟ್ಟಣಂನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿ ಗೆಲುವಿಗಾಗಿ ಸೆಣಸಲಿವೆ. 1-1ರಿಂದ ಸಮಬಲಗೊಂಡಿರುವ ಸರಣಿಯಲ್ಲಿ, ಭಾರತದ ಬ್ಯಾಟಿಂಗ್ ಕೊಹ್ಲಿ-ರೋಹಿತ್ ಮೇಲೆ ಅವಲಂಬಿತವಾಗಿದ್ದರೆ, ಬೌಲಿಂಗ್ ವಿಭಾಗವು ದುಬಾರಿಯಾಗಿದೆ.