25 ಜನರ ಬಲಿ ಪಡೆದ ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತ ನಡೆದ ಕೆಲವೇ ಗಂಟೆಗಳಲ್ಲಿ ಕ್ಲಬ್ನ ಮಾಲೀಕರಾದ ಗೌರವ್ ಮತ್ತು ಸೌರಭ್ ಲುತ್ರಾ ದೇಶ ಬಿಟ್ಟು ಥೈಲ್ಯಾಂಡ್ಗೆ ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
- Home
- News
- India News
- India Latest News Live: 25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್ಗೆ ಹಾರಿದ ಕ್ಲಬ್ ಮಾಲೀಕ
India Latest News Live: 25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್ಗೆ ಹಾರಿದ ಕ್ಲಬ್ ಮಾಲೀಕ

ನವದೆಹಲಿ : ‘ಜನರ ಹೃದಯದಲ್ಲಿ ನೆಲೆಸಿರುವ ರಾಷ್ಟ್ರೀಯ ಗೀತೆ ವಂದೇ ಮಾತರಂ ಬಗ್ಗೆ ಚರ್ಚೆ ಅಗತ್ಯವೇನಿತ್ತು? ಎಂದು ಪ್ರಶ್ನಿಸಿರುವ ಸಂಸದೆ ಪ್ರಿಯಾಂಕಾ ಗಾಂಧಿ, ‘ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಸರ್ಕಾರ ಈ ವಿಷಯದ ಚರ್ಚೆಗೆ ಮುಂದಾಗಿದೆ’ ಎಂದು ಆರೋಪಿಸಿದ್ದಾರೆ. ಮೋದಿಯವರ ಆತ್ಮಸ್ಥೈರ್ಯ ಈಗ ಮೊದಲಿನಂತಿಲ್ಲ. ಅವರು ರೂಪಿಸಿರುವ ನಿಯಮಗಳು ದೇಶವನ್ನು ದುರ್ಬಲಗೊಳಿಸುತ್ತಿವೆ. ಇದರ ಕಡೆ ಜನರ ಗಮನ ಹರಿಯದಂತೆ ಮಾಡಲು, ಅವರು ರಾಷ್ಟ್ರೀಯ ಗೀತೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಆ ನೆಪದಲ್ಲಿ ಬಿಜೆಪಿ, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ದೇಶಕ್ಕಾಗಿ ಹೋರಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡುತ್ತಿದೆ ಎಂದರು.
ಚರ್ಚೆಯೇ ಅನಗತ್ಯ:
‘ವಂದೇ ಮಾತರಂ ನಮ್ಮ ದೇಶದ ಆತ್ಮವಿದ್ದಂತೆ. ಅದರ ಬಗ್ಗೆ ಮಾತನಾಡಿದಾಗ ಸ್ವಾತಂತ್ರ್ಯ ಚಳವಳಿಯ ಇತಿಹಾಸ ನೆನಪಾಗುತ್ತದೆ. ದೇಶವಾಸಿಗಳ ಮನಸ್ಸಲ್ಲಿ ನೆಲೆಸಿರುವ ಗೀತೆಯ ಬಗ್ಗೆ ಚರ್ಚೆ ನಡೆಯುತ್ತಿರುವುದೇ ವಿಚಿತ್ರ. ರಾಷ್ಟ್ರೀಯ ಗೀತೆಯ ಬಗ್ಗೆ ಚರ್ಚೆ ಅಗತ್ಯವೇ?’ ಎಂದಿರುವ ಪ್ರಿಯಾಂಕಾ ಪ್ರಶ್ನಿಸಿದ್ದಾರೆ.
India Latest News Live 9 December 202525 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್ಗೆ ಹಾರಿದ ಕ್ಲಬ್ ಮಾಲೀಕ
India Latest News Live 9 December 2025ಐಸಿಸಿಗೆ ಬಿಗ್ ಶಾಕ್ ಕೊಟ್ಟ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್ಸ್ಟಾರ್!
ನವದೆಹಲಿ: ಭಾರತದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ, ಐಸಿಸಿಗೆ ಬಿಗ್ ಶಾಕ್ ನೀಡಿದ್ದಾರೆ. ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್ಸ್ಟಾರ್, ಐಸಿಸಿ ಜತೆಗಿನ ಭಾರತದಲ್ಲಿ ಕ್ರಿಕೆಟ್ ಪ್ರಸಾರ ಮಾಡುವ ಹಕ್ಕಿನಿಂದ ಹಿಂದೆ ಸರಿದಿದೆ. ಇದು ಐಸಿಸಿ ಪಾಲಿಗೆ ಬಿಗ್ ಶಾಕ್ ಎನಿಸಿಕೊಂಡಿದೆ.
India Latest News Live 9 December 2025Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್ - ಸಂಸದೆಯ ಮಾತು ವೈರಲ್
ಇಂದು ವಂದೇ ಮಾತರಂ ಗೀತೆಯನ್ನು ಮುಂದಿಟ್ಟುಕೊಂಡು ದೇಶದ ಮುಸ್ಲಿಮರನ್ನು ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನ ನಡೆಯುತ್ತಿದೆ. ಮುಸ್ಲಿಮರು ಆಯ್ಕೆಯಿಂದ ಭಾರತೀಯರಾಗಿದ್ದಾರೆರೇ ಹೊರತು ಆಕಸ್ಮಿಕವಾಗಿಲ್ಲ. ನಮ್ಮ ಪೂರ್ವಜರು ಪ್ರೀತಿಯಿಂದ ಈ ದೇಶವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
India Latest News Live 9 December 2025ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!
2026ರ ಟಿ20 ವಿಶ್ವಕಪ್ಗೆ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಸರಣಿಯೊಂದಿಗೆ ತನ್ನ ತಯಾರಿಯನ್ನು ಆರಂಭಿಸಲಿದೆ. ಗಾಯದಿಂದ ಚೇತರಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಮತ್ತು ಶುಭಮನ್ ಗಿಲ್ ತಂಡಕ್ಕೆ ಮರಳಿದ್ದು, ಅಭಿಷೇಕ್ ಶರ್ಮಾ ಅವರಂತಹ ಯುವ ಆಟಗಾರರ ಮೇಲೆ ಎಲ್ಲರ ಕಣ್ಣಿದೆ.