- Home
- News
- India News
- India Latest News Live: ಭಾರತ ಮಾತ್ರವಲ್ಲ ನಮ್ಮಿಂದಲೂ ಜಾಗ ಅತಿಕ್ರಮಣ - ನೇಪಾಳ ಪ್ರಧಾನಿ ಬಾಲೇನ್ ಶಾ ಒಪ್ಪಿಗೆ
India Latest News Live: ಭಾರತ ಮಾತ್ರವಲ್ಲ ನಮ್ಮಿಂದಲೂ ಜಾಗ ಅತಿಕ್ರಮಣ - ನೇಪಾಳ ಪ್ರಧಾನಿ ಬಾಲೇನ್ ಶಾ ಒಪ್ಪಿಗೆ

ಕೋಲ್ಕತಾ: ಪಶ್ಚಿಮ ಬಂಗಾಳ ಚುನಾವಣಾ ಬಳಿಕ ಟಿಎಂಸಿಯಲ್ಲಿ ಒಡಕು ಮೂಡಿದೆ ಎನ್ನುವ ವದಂತಿ ನಡುವೆ ಅದನ್ನು ಪುಷ್ಟೀಕರಿಸುವಂತೆ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕರೆದಿದ್ದ ನೂತನ ಶಾಸಕರ ಸಭೆಗೆ 80 ಶಾಸಕರ ಪೈಕಿ ಕೇವಲ 20 ಮಂದಿ ಮಾತ್ರ ಹಾಜರಾಗಿದ್ದಾರೆ. ಮಮತಾ ಅವರ ಕಾಳಿಘಾಟ್ ನಿವಾಸದಲ್ಲಿ ಸಭೆ ಆಯೋಜಿಸಲಾಗಿತ್ತು. ಆದರೆ ಶಾಸಕರ ಸಭೆಗೆ ನಾಲ್ಕನೇ ಒಂದು ಭಾಗದಷ್ಟು ಶಾಸಕರು ಗೈರಾಗಿದ್ದ ಕಾರಣ ಸಭೆಯನ್ನೇ ರದ್ದುಗೊಳಿಸಲಾಯಿತು.
ಆದರೆ ಇದಕ್ಕೆ ಸ್ಪಷ್ಟನೆ ನೀಡಿದ ಟಿಎಂಸಿ ವಕ್ತಾರ ಕುನಾಲ್ ಘೋಷ್, ‘ನಮ್ಮ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಕಾರಣದಿಂದ ಆತಂಕಗೊಂಡಿರುವ ಶಾಸಕರು ಸಭೆಗೆ ಬಂದಿಲ್ಲ. ಗೈರಾದ ಶಾಸಕರ ವಿನಂತಿ ಮೇರೆಗೆ ಸಭೆ ಮುಂದೂಡಲಾಗಿದೆ. ಶೀಘ್ರದಲ್ಲಿ ಮುಂದಿನ ದಿನಾಂಕ ನಿಗದಿಪಡಿಸಲಾಗುವುದು’ ಎಂದರು.
India Latest News Live1 June 2026ಭಾರತ ಮಾತ್ರವಲ್ಲ ನಮ್ಮಿಂದಲೂ ಜಾಗ ಅತಿಕ್ರಮಣ - ನೇಪಾಳ ಪ್ರಧಾನಿ ಬಾಲೇನ್ ಶಾ ಒಪ್ಪಿಗೆ
India Latest News Live1 June 2026500 ಮೀ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಟ್ಯಾಕ್ಸಿ - 7 ಕನ್ನಡಿಗರು ಸೇರಿ 8 ಸಾವು
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಪ್ರವಾಸಿಗರ ಟ್ಯಾಕ್ಸಿಯೊಂದು 500 ಮೀಟರ್ ಆಳದ ಪ್ರಪಾತಕ್ಕೆ ಉರುಳಿ, ಬೆಂಗಳೂರಿನ ಎರಡು ಕುಟುಂಬಗಳಿಗೆ ಸೇರಿದ 7 ಕನ್ನಡಿಗರು ಸೇರಿದಂತೆ 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.