- Home
- News
- India News
- India news live: India vs New Zealand - ಕೊಹ್ಲಿ ಕ್ಲಾಸಿಕ್ ಇನ್ನಿಂಗ್ಸ್, ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗೆಲುವು ಕಂಡ ಟೀಮ್ ಇಂಡಿಯಾ
India news live: India vs New Zealand - ಕೊಹ್ಲಿ ಕ್ಲಾಸಿಕ್ ಇನ್ನಿಂಗ್ಸ್, ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗೆಲುವು ಕಂಡ ಟೀಮ್ ಇಂಡಿಯಾ

ಬಿಜೆಪಿ ನಾಯಕ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸತತ ಪ್ರತಿಭಟೆಗಳನ್ನು ಮಾಡುತ್ತಿರುವ ಸುವೆಂದು ಅಧಿಕಾರಿ ಕಾರು ಅಡ್ಡಗಟ್ಟಿ ದಾಳಿ ನಡೆಸಿದ ಘಟನೆ ಚಂದ್ರಕೋನಾದಲ್ಲಿ ನಡೆದಿದೆ. ಸುವೆಂದು ಬೆಂಗಾವಲು ವಾಹನಗಳನ್ನು ಅಡ್ಡಗಟ್ಟಿ ದಾಳಿ ಮಾಡಲಾಗಿದೆ. ಇದು ಟಿಎಂಸಿ ಪಕ್ಷದ ಗೂಂಡಾಗಳ ಕೃತ್ಯ ಎಂದು ಸುವೆಂದು ಅದಿಕಾರಿ ಆರೋಪಿಸಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಸೋಮನಾಥ ಮಂದಿರಕ್ಕೆ ಬೇಟಿ ನೀಡಿದ್ದಾರೆ. ಸೋಮನಾಥ ಮಂದಿರ ಮೇಲೆ ಮೊದಲ ದಾಳಿಯಾಗಿ 1000 ವರ್ಷಗಳು ಸಂದಿದೆ. ಇದರ ಹಿನ್ನಲೆಯಲ್ಲಿ ಸೋಮನಾಥ ಸ್ವಾಭಿಮಾನ ಪರ್ವ ಆಚರಿಸಲಾಗುತ್ತಿದೆ.
India news live 10 Jan 2026India vs New Zealand - ಕೊಹ್ಲಿ ಕ್ಲಾಸಿಕ್ ಇನ್ನಿಂಗ್ಸ್, ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗೆಲುವು ಕಂಡ ಟೀಮ್ ಇಂಡಿಯಾ
India news live 10 Jan 2026ಯಶ್ ದಯಾಳ್ ಬಳಿಕ ಮತ್ತೊಬ್ಬ ಆರ್ಸಿಬಿ ಪ್ಲೇಯರ್ ಸೋಶಿಯಲ್ ಮೀಡಿಯಾ ರಂಗಿನಾಟ ಬಯಲು..!
ಆರ್ಸಿಬಿಯ ಸ್ಟಾರ್ ಆಟಗಾರ ಯಶ್ ದಯಾಳ್ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಬೆನ್ನಲ್ಲೇ, ಇದೀಗ ತಂಡದ ಮಾಜಿ ಆಟಗಾರ ಸ್ವಸ್ತಿಕ್ ಚಿಕಾರ ಕೂಡ ವಿವಾದದಲ್ಲಿ ಸಿಲುಕಿದ್ದಾರೆ. ಸ್ವಸ್ತಿಕ್ ಚಿಕಾರ ಹಲವು ಯುವತಿಯರೊಂದಿಗೆ ನಡೆಸಿದ್ದಾರೆ ಎನ್ನಲಾದ ಸೋಶಿಯಲ್ ಮೀಡಿಯಾ ಚಾಟ್ಗಳ ಸ್ಕ್ರೀನ್ಶಾಟ್ಗಳು ವೈರಲ್ ಆಗಿದೆ.
India news live 10 Jan 2026ಹೊಸ ಮನೆಗೆ 1 ಕೋಟಿಯ ಸ್ಟೌವ್, 14 ಲಕ್ಷದ ಫ್ರಿಜ್ - ಅನನ್ಯಾ ಪಾಂಡೆ ಸೋದರಸಂಬಂಧಿಯ ಐಷಾರಾಮಿ ಶಾಪಿಂಗ್ ವಿಡಿಯೋ ವೈರಲ್!
ನಟಿ ಅನನ್ಯಾ ಪಾಂಡೆ ಸೋದರಸಂಬಂಧಿ ಅಲನ್ನಾ ಪಾಂಡೆ ಮತ್ತು ಪತಿ ಐವರ್ ತಮ್ಮ ಹೊಸ 5BHK ಮನೆಗೆ ಶಾಪಿಂಗ್ ಮಾಡಿದ್ದಾರೆ. 1 ಕೋಟಿ ರೂ. ಮೌಲ್ಯದ ಸ್ಟೌವ್ ಮತ್ತು 63 ಲಕ್ಷ ರೂ. ಮೌಲ್ಯದ ಮಾರ್ಬಲ್ಗಳಂತಹ ಐಷಾರಾಮಿ ವಸ್ತುಗಳನ್ನು ನೋಡಿದ್ದು, ಅವುಗಳ ಬೆಲೆ ಕೇಳಿ ಜನ ದಂಗಾಗಿದ್ದಾರೆ.
India news live 10 Jan 2026ಕಿವೀಸ್ ತ್ರಿವಳಿಗಳ ಆರ್ಭಟ - ಮೊದಲ ಪಂದ್ಯದಲ್ಲೇ ಭಾರತಕ್ಕೆ ಕಠಿಣ ಗುರಿ!
India news live 10 Jan 2026'ಇಂಟರ್ನೆಟ್ ಇಲ್ಲ, ಮೊಬೈಲ್ ಫೋನ್ ಕೂಡ ಇಲ್ಲ..' ಸಂವಹನ ನಡೆಸುವ ಸೀಕ್ರೆಟ್ ಹೇಳಿದ ಅಜಿತ್ ದೋವಲ್!
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು 'ವಿಕಸಿತ್ ಭಾರತ್' ಸಂವಾದದಲ್ಲಿ ತಾವು ಅಧಿಕೃತ ಕೆಲಸಕ್ಕಾಗಿ ಮೊಬೈಲ್ ಫೋನ್ ಅಥವಾ ಇಂಟರ್ನೆಟ್ ಬಳಸುವುದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಕುಟುಂಬದ ಅಗತ್ಯಗಳಿಗೆ ಮಾತ್ರ ಫೋನ್ ಬಳಸುವುದಾಗಿ ಹೇಳಿದ್ದಾರೆ.
India news live 10 Jan 2026148 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ದಾಖಲೆ ಬರೆಯಲು ತುದಿಗಾಲಲ್ಲಿ ನಿಂತ ರೋಹಿತ್ ಶರ್ಮಾ!
ವಡೋದರ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು 2026ರಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿವೆ. ಹೀಗಿರುವಾಗಲೇ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, 148 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾಗಿದ್ದಾರೆ.
India news live 10 Jan 20262 ತಿಂಗಳು ರೈಲ್ವೆ ಮಾರ್ಗದಲ್ಲಿ ಭಾರಿ ಬದಲಾವಣೆ- ಈ ರೈಲ್ವೆ ಸ್ಟೇಷನ್ ತಾತ್ಕಾಲಿಕ ಬಂದ್ - ಡಿಟೇಲ್ಸ್ ಇಲ್ಲಿದೆ
ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಪಿಟ್ ಲೈನ್ ಪುನರ್ನಿರ್ಮಾಣ ಕಾರ್ಯದಿಂದಾಗಿ, ಜನವರಿ 16 ರಿಂದ ಮಾರ್ಚ್ 11 ರವರೆಗೆ ಹಲವು ರೈಲುಗಳ ಮೂಲ ಮತ್ತು ಅಂತ್ಯ ನಿಲ್ದಾಣಗಳನ್ನು ಬದಲಾಯಿಸಲಾಗಿದೆ. ಎರ್ನಾಕುಲಂ, ನಾಂದೇಡ್ ಮತ್ತು ಕಣ್ಣೂರು ಮಾರ್ಗದ ರೈಲುಗಳು ಸೇರಿದಂತೆ ಕೆಲವು ರೈಲು ಮಾರ್ಗಗಳ ಡಿಟೇಲ್ಸ್ ಇಲ್ಲಿದೆ.
India news live 10 Jan 2026ಟ್ರಂಪ್ ಹೇಳಿಕೆ ಬೆನ್ನಲ್ಲೇ ಇರಾನ್ನಲ್ಲಿ ಪ್ರತಿಭಟನೆ ತೀವ್ರ, ಅಮೆರಿಕ ಸೇನಾ ನೆಲೆ, ಹಡಗಿನ ಮೇಲೆ ದಾಳಿಯ ಎಚ್ಚರಿಕೆ ನೀಡಿದ ಇರಾನ್!
ಇರಾನ್ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಿಲಿಟರಿ ದಾಳಿಯ ಆಯ್ಕೆಗಳನ್ನು ಪರಿಗಣಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ, ದಾಳಿ ನಡೆದರೆ ಅಮೆರಿಕದ ಸೇನಾನೆಲೆಗಳು ಮತ್ತು ಹಡಗುಗಳನ್ನು ಗುರಿಯಾಗಿಸುವುದಾಗಿ ಇರಾನ್ ಎಚ್ಚರಿಸಿದೆ.
India news live 10 Jan 2026ಕಣ್ಣು ತೆರೆ ಅಪ್ಪ, ಹೃದಯಾಘಾತದಿಂದ ಮೃತಪಟ್ಟ ಗಾಯಕ-ನಟ ಪ್ರಶಾಂತ್ ಮಗಳ ಆಕ್ರಂದನ
ಕಣ್ಣು ತೆರೆ ಅಪ್ಪ, ಹೃದಯಾಘಾತದಿಂದ ಮೃತಪಟ್ಟ ಗಾಯಕ-ನಟ ಪ್ರಶಾಂತ್ ಮಗಳ ಆಕ್ರಂದನ ಮುಗಿಲು ಮುಟ್ಟಿದೆ. ಬಿಡುವಿನ ವೇಳೆಯಲ್ಲಿ ಮಗಳ ಜೊತೆ ಮಗುವಾಗಿ ಆಟವಾಡುತ್ತಿದ್ದ ಪ್ರಶಾಂತ್ ತಮಂಗ್ ನಿಧನ ಪುಟ್ಟ ಅರಿಯಾಗೆ ಅರಗಿಸಿಕೊಳ್ಳಲಾಗುತ್ತಿಲ್ಲ.
India news live 10 Jan 2026ರಜಿನಿಕಾಂತ್ ಅಪ್ಪಟ ಅಭಿಮಾನಿ ಆದಿತ್ಯ ಅಶೋಕ್ ಈಗ ಭಾರತ ಎದುರಾಳಿ! ಯಾರು ಈ ಕಿವೀಸ್ ಲೆಗ್ಸ್ಪಿನ್ನರ್?
India news live 10 Jan 20263ನೇ ಮಹಾಯುದ್ಧಕ್ಕೆ ಮುನ್ನುಡಿ, ಗ್ರೀನ್ಲ್ಯಾಂಡ್ ಆಕ್ರಮಿಸಲು ಸಿದ್ಧರಾಗುವಂತೆ ಆರ್ಮಿ ಚೀಫ್ಗೆ ಸೂಚಿಸಿದ ಟ್ರಂಪ್!
ಗ್ರೀನ್ಲ್ಯಾಂಡ್ಗೆ ಆಕ್ರಮಣ ಯೋಜನೆಗಳನ್ನು ಸಿದ್ಧಪಡಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶೇಷ ಪಡೆಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಹಿರಿಯ ಮಿಲಿಟರಿ ನಾಯಕರು, ಕಾನೂನು ಹಾಗೂ ಯುಎಸ್ ಕಾಂಗ್ರೆಸ್ನ ಅಡೆತಡೆಯನ್ನು ಉಲ್ಲೇಖಿಸಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
India news live 10 Jan 2026ದಿಢೀರ್ ಕುಸಿದು ಬಿದ್ದು ಇಂಡಿಯನ್ ಐಡೋಲ್ ವಿನ್ನರ್, ಪಾತಾಳ ಲೋಕ ಖ್ಯಾತಿಯ ನಟ ಸಾವು
ದಿಢೀರ್ ಕುಸಿದು ಬಿದ್ದು ಇಂಡಿಯನ್ ಐಡೋಲ್ ವಿನ್ನರ್, ಗಾಯಕ ಹಾಗೂ ನಟ ಪ್ರಶಾಂತ್ ತಮಂಗ ಮೃತಪಟ್ಟಿದ್ದಾರೆ. ಅಪ್ಪನ ಸಾವಿನಿಂದ ಮುದ್ದಿನ ಮಗಳ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಿವುಡ್ ಸಿನಿಮಾದಲ್ಲೂ ಮಿಂಚಿದ್ದ ನಟ ಸಾವು ಹಲವರಿಗೆ ಶಾಕ್ ನೀಡಿದೆ.
India news live 10 Jan 2026ಬಾಂಗ್ಲಾದೇಶ ಮಾಜಿ ನಾಯಕನನ್ನು 'ಭಾರತದ ಏಜೆಂಟ್' ಎಂದು ಕರೆದ ನಜ್ರುಲ್ ಇಸ್ಲಾಂ! ಬಾಂಗ್ಲಾ ಮಂಡಳಿ ವಿರುದ್ದವೇ ತಿರುಗಿಬಿದ್ದ ಆಟಗಾರರು
ಢಾಕಾ: ಭಾರತ ಹಾಗೂ ಬಾಂಗ್ಲಾದೇಶ ನಡುವಿನ ತಿಕ್ಕಾಟ ಇದೀಗ ಮತ್ತೊಂದು ಹಂತ ತಲುಪಿದ್ದು, ಟಿ20 ವಿಶ್ವಕಪ್ ಟೂರ್ನಿಯಾಡಲು ನಾವು ಭಾರತಕ್ಕೆ ಬರುವುದಿಲ್ಲ ಎಂದು ಬಾಂಗ್ಲಾದೇಶ ಪಟ್ಟು ಹಿಡಿದಿದೆ. ಹೀಗಿರುವಾಗಲೇ ಬಾಂಗ್ಲಾದೇಶ ಮಾಜಿ ನಾಯಕನ ಮೇಲೆ ನಜ್ರುಲ್ ಇಸ್ಲಾಂ ಗಂಭೀರ ಆರೋಪ ಮಾಡಿದ್ದಾರೆ.
India news live 10 Jan 2026ಕಿವೀಸ್ ಎದುರು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ಆರು ಬೌಲರ್ಗಳೊಂದಿಗೆ ಕಣಕ್ಕೆ!
ವಡೋದರಾದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ, ಟಾಸ್ ಗೆದ್ದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆರು ಬೌಲರ್ಗಳೊಂದಿಗೆ ಕಣಕ್ಕಿಳಿದಿರುವ ಭಾರತ. ಕಿವೀಸ್ ಪರ ಕ್ರಿಸ್ಟಿನ್ ಕ್ಲಾರ್ಕ್ ಪಾದಾರ್ಪಣೆ ಮಾಡಿದ್ದಾರೆ.
India news live 10 Jan 2026ಸೋಮನಾಥ ಮಂದಿರದಲ್ಲಿ ಮೋದಿ ಶೌರ್ಯ ಯಾತ್ರೆ, 1000 ವರ್ಷದ ದಾಳಿ ಕತೆ ಹೇಳುತ್ತಿದೆ ಸ್ವಾಭಿಮಾನ ಪರ್ವ
ಸೋಮನಾಥ ಮಂದಿರದಲ್ಲಿ ಮೋದಿ ಶೌರ್ಯ ಯಾತ್ರೆ, ಮಂದಿರದ ಮೇಲೆ ಮೊದಲ ದಾಳಿಯಾಗಿ 1000 ವರ್ಷಗಳು ಉರುಳಿದೆ. ಸತತ ದಾಳಿಗೆ ಎದೆಯೊಡ್ಡಿ ನಿಂತ ಸೋಮನಾಥ ಮಂದಿರ ಭಾರತದ ಇತಿಹಾಸ ಹೇಳುತ್ತಿದೆ. ಈ ಸ್ವಾಭಿಮಾನ ಪರ್ವದಲ್ಲಿ ಮೋದಿ ಪಾಲ್ಗೊಂಡಿದ್ದಾರೆ.
India news live 10 Jan 2026ಕುಟುಂಬದ ಕಂಪೆನಿ, ಆಸ್ತಿ ತ್ಯಜಿಸಿ ಪ್ರೀತಿ ಆಯ್ಕೆ, ಮದುವೆಯಾಗಿ ₹3000 ಕೋಟಿ ಉದ್ಯಮ ಕಟ್ಟಿದ ಸಾಹಸಿ
ಕುಟುಂಬದ ಕಪಂನಿ, ಆಸ್ತಿ ತ್ಯಜಿಸಿ ಪ್ರೀತಿ ಆಯ್ಕೆ, ಹಳೇ ಸಿನಿಮಾಗಳಲ್ಲಿರುವಂತೆ ಪೋಷಕರು, ಕುಟುಂಬಸ್ಥರು ಆಫರ್ ಮುಂದಿಟ್ಟದ್ದರು. ಒಂದೋ ನಿನ್ನ ಪ್ರೀತಿ, ಇಲ್ಲಾ ಉದ್ಯಮ ಒಂದೇ ಆಯ್ಕೆ ಕೊಟ್ಟಿದ್ದರು. ಪ್ರೀತಿ ಆಯ್ಕೆಮಾಡಿಕೊಂಡು ಯಶಸ್ವಿ ಉದ್ಯಮ ಕಟ್ಟಿದ ಸಾಧಕನ ಕತೆ ಇದು
India news live 10 Jan 2026ಏಕದಿನ ಸರಣಿಯಿಂದ ಪಂತ್ ಔಟ್; ಸಂಜು, ಇಶಾನ್ ಕಿಶನ್ ಬದಲಿಗೆ ಈ ವಿಕೆಟ್ ಕೀಪರ್ಗೆ ಬಿಸಿಸಿಐ ಬುಲಾವ್!
ವಡೋದರಾ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಹೀಗಿರುವಾಗಲೇ ಭಾರತ ತಂಡದಿಂದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಗಾಯದ ಸಮಸ್ಯೆಯಿಂದಾಗಿ ಹೊರಬಿದ್ದಿದ್ದಾರೆ. ಹೀಗಾಗಿ ಮತ್ತೊಬ್ಬ ವಿಕೆಟ್ ಕೀಪರ್ ತಂಡ ಕೂಡಿಕೊಂಡಿದ್ದಾರೆ.
India news live 10 Jan 2026ವರ್ಷದ ಆರಂಭದಲ್ಲೇ ಜಿಯೋ ಗ್ರಾಹಕರಿಗೆ ಲಾಟರಿ! 450 ರೂ.ಗೆ ಹಬ್ಬದ ಭರ್ಜರಿ ಆಫರ್ ಕೊಟ್ಟ ಕಂಪೆನಿ
ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ರೂ.450 ರ ಹೊಸ ಹಬ್ಬದ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು 36 ದಿನಗಳ ವ್ಯಾಲಿಡಿಟಿಯೊಂದಿಗೆ ಪ್ರತಿದಿನ 2 GB ಡೇಟಾ, ಅನಿಯಮಿತ ಕರೆಗಳನ್ನು ನೀಡುತ್ತದೆ. ಇದರ ಜೊತೆಗೆ, ಇನ್ನಷ್ಟು ಪ್ರಯೋಜನಗಳಿದ್ದು, ಅವುಗಳ ಡಿಟೇಲ್ಸ್ ಇಲ್ಲಿದೆ.
India news live 10 Jan 2026ದಿಢೀರ್ ಎನ್ನುವಂತೆ ಜಾನ್ ಜೆಲೆಜ್ನಿ ಜತೆ ಕೋಚಿಂಗ್ ಒಪ್ಪಂದ ಕೊನೆಗೊಳಿಸಿದ ನೀರಜ್ ಚೋಪ್ರಾ!
ನವದೆಹಲಿ: ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಳಪೆ ಪ್ರದರ್ಶನ ಬೆನ್ನಲ್ಲೇ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ತಮ್ಮ ಕೋಚ್ ಬದಲಿಸಲು ನಿರ್ಧರಿಸಿದ್ದಾರೆ. ಈ ಕುರಿತಾದ ಮಹತ್ವದ ಅಪ್ಡೇಟ್ಸ್ ಇಲ್ಲಿದೆ ನೋಡಿ.