ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಮತಎಣಿಕೆಗೆ ಕೇಂದ್ರ ಸರ್ಕಾರಿ ನೌಕರರನ್ನು ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಕುರಿತು ಟಿಎಂಸಿ ಸರ್ಕಾರದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ, ಸಿಬ್ಬಂದಿ ನಿಯೋಜನೆ ಆಯೋಗದ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಎಂದು ಸ್ಪಷ್ಟಪಡಿಸಿದೆ.
- Home
- News
- India News
- National News Live: TMC - ಪಶ್ಚಿಮ ಬಂಗಾಳ ಮತಎಣಿಕೆಗೆ ಕೇಂದ್ರ ನೌಕರರ ನೇಮಕ ಪ್ರಶ್ನಿಸಿದ್ದ ಮಮತಾ ಅರ್ಜಿಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ, ಕೋರ್ಟ್ ಹೇಳಿದ್ದೇನು?
National News Live: TMC - ಪಶ್ಚಿಮ ಬಂಗಾಳ ಮತಎಣಿಕೆಗೆ ಕೇಂದ್ರ ನೌಕರರ ನೇಮಕ ಪ್ರಶ್ನಿಸಿದ್ದ ಮಮತಾ ಅರ್ಜಿಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ, ಕೋರ್ಟ್ ಹೇಳಿದ್ದೇನು?

ನಾಲ್ಕು ವರ್ಷದ ಬಾಲಕಿಯನ್ನು ಎತ್ತಿಕೊಂಡು ಹೋಗಿ ಅತ್ಯಾ**ರ ಎಸಗಿ ಕೊಲೆಗೈದ ಘಟನೆ ಪುಣೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ 65ರ ವೃದ್ಧನನ್ನು ಅರೆಸ್ಟ್ ಮಾಡಲಾಗಿದೆ. ಇತ್ತ ಕುಟುಂಬಸ್ಥರು, ಸ್ಥಳೀಯರು ಪುಣೆ ಹೆದ್ದಾರಿ ಬಂದ್ ಮಾಡಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇತ್ತ ಪಂಚ ರಾಜ್ಯಗಳ ಫಲಿತಾಂಶಕ್ಕೆ ಇಡೀ ದೇಶವೇ ಕಾಯುತ್ತಿದೆ. ಪಶ್ಚಿಮ ಬಂಗಾಳ, ತಮಿಳುನಾಡು ತೀವ್ರ ಕುತೂಹಲ ಕೆರಳಿಸಿದೆ. ಇಂದಿನ ಕ್ಷಣ ಕ್ಷಣದ ಸುದ್ದಿ ಅಪ್ಡೇಟ್ ಇಲ್ಲಿದೆ.
India News Live 3rd May: TMC - ಪಶ್ಚಿಮ ಬಂಗಾಳ ಮತಎಣಿಕೆಗೆ ಕೇಂದ್ರ ನೌಕರರ ನೇಮಕ ಪ್ರಶ್ನಿಸಿದ್ದ ಮಮತಾ ಅರ್ಜಿಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ, ಕೋರ್ಟ್ ಹೇಳಿದ್ದೇನು?
India News Live 3rd May: ಮನೆಯ ಬಾತ್ರೂಂನಲ್ಲಿ ಯುವ ಜಡ್ಜ್ ಶವ ಪತ್ತೆ, ಅನುಮಾನ ಮೂಡಿಸಿದ ಪ್ರಕರಣ
ಮನೆಯ ಬಾತ್ರೂಂನಲ್ಲಿ ಯುವ ಜಡ್ಜ್ ಶವ ಪತ್ತೆ, ಅನುಮಾನ ಮೂಡಿಸಿದ ಪ್ರಕರಣ, ದೆಹಲಿಯ ಮನೆಯಲ್ಲೇ ಘಟನೆ ನಡೆದಿದೆ. ಪೊಲೀಸರು ಕೆಲ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ.
India News Live 3rd May: ಸಿಸಿಟಿವಿಯಲ್ಲಿ ವೃದ್ಧನ ಕೃತ್ಯ ಸೆರೆ
ನಾಲ್ಕು ವರ್ಷದ ಬಾಲಕಿಯನ್ನು ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಸ್ಥಾನದ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಎತ್ತಿಕೊಂಡು ಹೋಗಿ ಕೃತ್ಯ ಎಸಗಲಾಗಿದೆ. ಬಾಲಕಿ ಕಾಣೆಯಾಗಿದ್ದ ಕಾರಣ ತೀವ್ರ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿತ್ತು.