- Home
- News
- India News
- India News Live: ವಿವಾದಗಳ ನಡುವೆ ಟಿ20 ವಿಶ್ವಕಪ್ ಸಮರ; ಇಂದಿನಿಂದ 10ನೇ ಆವೃತ್ತಿಯ ಚುಟುಕು ವಿಶ್ವಕಪ್ಗೆ ಚಾಲನೆ!
India News Live: ವಿವಾದಗಳ ನಡುವೆ ಟಿ20 ವಿಶ್ವಕಪ್ ಸಮರ; ಇಂದಿನಿಂದ 10ನೇ ಆವೃತ್ತಿಯ ಚುಟುಕು ವಿಶ್ವಕಪ್ಗೆ ಚಾಲನೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಬುಧವಾರ ಲೋಕಸಭೆಯೊಳಗೆ ದೈಹಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್ ಸದಸ್ಯರು ಯೋಜಿಸಿದ್ದರು. ಜೊತೆಗೆ ಈ ಕೃತ್ಯ ಮುಚ್ಚಿಡುವ ಸಲುವಾಗಿಯೇ ಮಹಿಳಾ ಸಂಸದೆಯರನ್ನು ಮೋದಿ ಕೂರುವ ಸ್ಥಳದ ಸುತ್ತಲೂ ಸುತ್ತುವರೆದು ನಿಲ್ಲಿಸುವ ಯೋಜನೆ ರೂಪಿಸಲಾಗಿತ್ತು ಎಂದು ಗಂಭೀರ ಆರೋಪವೊಂದು ಕೇಳಿಬಂದಿದೆ. ಮೂಲಗಳನ್ನು ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ಇಂಥದ್ದೊಂದು ಸುದ್ದಿ ಪ್ರಕಟಿಸಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಬುಧವಾರ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾ ಬೇಕಿತ್ತು. ಆದರೆ ಇದಕ್ಕೂ ಮುನ್ನ ವಿಪಕ್ಷದ ಮಹಿಳಾ ಸದಸ್ಯರು ಪ್ರಧಾನಿ ಕೂರುವ ಸ್ಥಳದತ್ತ ಧಾವಿಸಿ ಇಡೀ ಪ್ರದೇಶವನ್ನು ಸುತ್ತುವರೆದು, ಬಿಜೆಪಿಯ ಪುರುಷ ಸದಸ್ಯರ ಜೊತೆ ವಾಕ್ಸಮರಕ್ಕೆ ಇಳಿದಿದ್ದರು.
ಈ ಘಟನೆಯನ್ನು ಪುಷ್ಟಿಕರಿಸುವಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬುಧವಾರ ಲೋಕಸಭೆಯಲ್ಲಿ ವಿಪಕ್ಷದ ಮಹಿಳಾ ಸದಸ್ಯರು ಪ್ರಧಾನಿ ಕೂರುವ ಸ್ಥಳವನ್ನು ಸುತ್ತುವರೆದರು ಆ ಬಳಿಕ ಅನಿವಾರ್ಯವಾಗಿ ಮೋದಿ ಭಾಷಣ ರದ್ದುಪಡಿಸಿ ಕಲಾಪವನ್ನೇ ಮುಂದೂಡಿದ ಘಟನೆ ಬಗ್ಗೆ ಸ್ಪೀಕರ್ ಈ ಬಿರ್ಲಾ ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.
India News Liveವಿವಾದಗಳ ನಡುವೆ ಟಿ20 ವಿಶ್ವಕಪ್ ಸಮರ; ಇಂದಿನಿಂದ 10ನೇ ಆವೃತ್ತಿಯ ಚುಟುಕು ವಿಶ್ವಕಪ್ಗೆ ಚಾಲನೆ!
India News Liveಪಕ್ಷಿಗೂ ಗೊತ್ತಾಗಿದೆ ಚಿನ್ನ ದುಬಾರಿ, ಜ್ಯೂವೆಲ್ಲರಿ ಶಾಪ್ನಿಂದ ₹1 ಲಕ್ಷ ಮೌಲ್ಯದ ಸರ ಎಗರಿಸಿದ ಪಾರಿವಾಳ
ಪಕ್ಷಿಗೂ ಗೊತ್ತಾಗಿದೆ ಚಿನ್ನ ದುಬಾರಿ, ಜ್ಯೂವೆಲ್ಲರಿ ಶಾಪ್ನಿಂದ ₹1 ಲಕ್ಷ ಮೌಲ್ಯದ ಸರ ಎಗರಿಸಿದ ಪಾರಿವಾಳ, ಪಾರಿವಾಳದ ದೃಶ್ಯಗಳು ಸೆರೆಯಾಗಿದೆ. ಇದು ಅಚ್ಚರಿಯಾದರೂ ಸತ್ಯ, ಕೊನೆಗೆ ಏನಾಯ್ತು
India News Liveಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು, 17 ಫ್ಲೋರ್ನಿಂದ ಜಿಗಿದ ಮುಲ್ತಾನಿ ಬೇಕರಿ ಮಾಲೀಕ
ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು, ಜನಪ್ರಿಯ ಮುಲ್ತಾನಿ ಬೇಕರಿ ಮಾಲೀಕ, ಶ್ರೀಮಂತ ಉದ್ಯಮಿ ಸುನಿಲ್ ಮೋತಿಲಾಲ್ ಬದುಕು ಅಂತ್ಯಗೊಳಿಸಿದ್ದಾರೆ. ಕೆಲವೇ ದಿನಗಳ ಅಂತರದಲ್ಲಿ ಉದ್ಯಮ ಜಗತ್ತು ಬೆಚ್ಚಿ ಬಿದ್ದಿದೆ.
India News Liveಭಾರತಕ್ಕೆ 6ನೇ ಅ19 ವಿಶ್ವಕಪ್ ಟ್ರೋಫಿ, 1988ರಿಂದ 2026ರ ವರೆಗೆ ಕಪ್ ಗೆದ್ದ ತಂಡಗಳ ಫುಲ್ ಲಿಸ್ಟ್
ಭಾರತಕ್ಕೆ 6ನೇ ಅ19 ವಿಶ್ವಕಪ್ ಟ್ರೋಫಿ, 1988ರಿಂದ 2026ರ ವರೆಗೆ ಕಪ್ ಗೆದ್ದ ತಂಡಗಳ ಫುಲ್ ಲಿಸ್ಟ್ ಇಲ್ಲಿದೆ. ಗರಿಷ್ಠ ಟ್ರೋಫಿ ಗೆದ್ದ ತಂಡ ಯಾವುದು? ಯಾರೆಲ್ಲಾ ಟ್ರೋಫಿ ಗೆದ್ದಿದ್ದಾರೆ?
India News Liveತಿರುಪತಿ ತಿಮ್ಮಪ್ಪನ ಲಡ್ಡುಗೆ 'ಟಾಯ್ಲೆಟ್ ಕ್ಲೀನಿಂಗ್ ರಾಸಾಯನಿಕ'ದ ತುಪ್ಪ ಬಳಕೆ; ಸಿಎಂ ಚಂದ್ರಬಾಬು ನಾಯ್ಡು
ತಿರುಪತಿ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಬಾತ್ರೂಮ್ ಕ್ಲೀನಿಂಗ್ ರಾಸಾಯನಿಕ ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಹಿಂದಿನ ಜಗನ್ ಸರ್ಕಾರದ ಅವಧಿಯಲ್ಲಿ ಈ ಕಲಬೆರಕೆ ನಡೆದಿದ್ದು, ಇದು ದೇವರ ವಿರುದ್ಧದ ಮಹಾಪಾಪ ಎಂದು ಹೇಳಿದ್ದಾರೆ.
India News Liveಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್
ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್ ಸೂರ್ಯವಂಶಿ, ಅಂಡರ್ 19 ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 175 ರನ್ ಹಲವು ದಾಖಲೆಗಳನ್ನು ಪುಡಿ ಮಾಡಿದೆ. ದಾಖಲೆ ಆಟದಿಂದ ಭಾರತ ಟ್ರೋಫಿ ಗೆದ್ದುಕೊಂಡಿದೆ.
India News Live'ನಾನು ಹೀಗೆ ಹೇಳಿದ್ರೆ ಹಾಕ್ತೀರಾ, ಹಾಗಿದ್ರೆ ಮಾತ್ರ ಹೇಳ್ತೀನಿ' ಎಂದ ನಟ ಕಿಶೋರ್ ಮೋದಿ ಬಗ್ಗೆ ಏನಂದ್ರು ಕೇಳಿ!
ತಮ್ಮ 'ಮೆಲ್ಲಿಸೈ' ಚಿತ್ರದ ಪ್ರಚಾರದ ವೇಳೆ ಮಾತನಾಡಿದ ನಟ ಕಿಶೋರ್, ಜೀವನದಲ್ಲಿ ರಿವರ್ಸ್ ಹೋಗುವ ಅವಕಾಶ ಸಿಕ್ಕರೆ 2014ಕ್ಕೆ ಹೋಗುತ್ತಿದ್ದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನು ಹೇಳಿದ್ರು ಕೇಳಿ.
India News Live15ರ ಪೋರನ ವೈಭವದ ಆಟಕ್ಕ ಒಲಿದ ಕಿರೀಟ, ಭಾರತಕ್ಕೆ 6ನೇ U19 ವಿಶ್ವಕಪ್ ಟ್ರೋಫಿ
15ರ ಪೋರನ ವೈಭವದ ಆಟಕ್ಕ ಒಲಿದ ಕಿರೀಟ, ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂತಿ ದಾಖಲೆಯ ಆಟಕ್ಕೆ ಹಲವು ದಾಖಲೆ ಜೊತೆಗೆ ವಿಶ್ವಕಪ್ ಟ್ರೋಫಿ ಒಲಿದು ಬಂದಿದೆ. ಭಾರತ 6ನೇ ವಿಶ್ವಕಪ್ ಟ್ರೋಫಿ ಎತ್ತಿಹಿಡಿದಿದೆ.
India News Liveಹಳೇ ಸಿಮ್ ಕಾರ್ಡ್ ಬಿಸಾಡಿದ್ದೀರಾ? ಸಿಮ್ಗಳಿಂದ ಚಿನ್ನ ಹೊರತೆಗೆದು ₹27 ಲಕ್ಷ ಸಂಪಾದಿಸಿದ ಗುಜುರಿ ವ್ಯಾಪಾರಿ
ಹಳೇ ಸಿಮ್ ಕಾರ್ಡ್ ಬಿಸಾಡಿದ್ದೀರಾ? ನಿಷ್ಕ್ರೀಯಗೊಂಡ ಸಿಮ್ ಕಾರ್ಡ್ಗಳಿಂದ ಗುಜುರಿ ವ್ಯಾಪಾರಿ ಬರೋಬ್ಬರಿ 27 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹೊರತೆಗಿದಿದ್ದಾರೆ. ಇದೀಗ ಎಲ್ಲರೂ ಸಿಮ್ ಕಾರ್ಡ್ ಬ್ಯೂಸಿನೆಸ್ಗೆ ಇಳಿದಿದ್ದಾರೆ.
India News Liveರಾಷ್ಟ್ರಪತಿಗಳ ಅಂಗರಕ್ಷಕ ಪಡೆ ಪಿಬಿಜಿಗೆ ಸೇರಲು ಭಾರತದ 3 ಜಾತಿಗಳ ಸೈನಿಕರಿಗೆ ಮಾತ್ರ ಅವಕಾಶ - ಇದಕ್ಕೇನು ಕಾರಣ?
ಭಾರತದ ರಾಷ್ಟ್ರಪತಿಗಳಿಗೆ ರಕ್ಷಣೆ ನೀಡುವ ರಾಷ್ಟ್ರಪತಿಗಳ ಅಂಗರಕ್ಷಕರ (President's Bodyguard)ಪಡೆಗೆ ಆಯ್ಕೆಯಾಗುವುದಕ್ಕೆ ಕೇವಲ 3 ಜಾತಿಗಳಿಗೆ ಮಾತ್ರ ಅವಕಾಶವಿದೆ ಎಂಬ ವಿಚಾರ ನಿಮಗೆ ಗೊತ್ತಾ ಹಾಗೂ ಅದು ಯಾಕೆ? ಈ ಬಗ್ಗೆ ಇಲ್ಲಿದೆ ಡಿಟೇಲ್ ಸ್ಟೋರಿ…
India News Liveಪಾನಿಪೂರಿಗೆ 6000 ರೂ, ಉದ್ಯೋಗ ತೊರೆದು ಲಂಡನ್ನಲ್ಲಿ ಉದ್ಯಮ ಆರಂಭಿಸಿದ ಭಾರತದ ದಂಪತಿ
ಪಾನಿಪೂರಿಗೆ 6000 ರೂ, ಲಂಡನ್ನಲ್ಲಿ ಭಾರತದ ಪಾನಿಪೂರಿ ಬೆಲೆ ಇದು. ಭಾರತೀಯ ದಂಪತಿ ಲಂಡನ್ನಲ್ಲಿ ಇದೀಗ ಪಾನಿಪೂರಿ ಉದ್ಯಮ ಆರಂಭಿಸಿ ಯಶಸ್ವಿಯಾಗಿದ್ದಾರೆ. ಇದೀಗ ಈ ಟೆಕ್ಕಿ ದಂಪತಿಗಳ ರೆಸ್ಟೋರೆಂಟ್ ಭಾರಿ ಜನಪ್ರಿಯವಾಗಿದೆ.
India News Liveಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ಶತಕ ಚಚ್ಚಿದ ವೈಭವ್ ಸೂರ್ಯವಂಶಿ ಎಷ್ಟು ಶ್ರೀಮಂತ ಗೊತ್ತಾ? 14 ವರ್ಷದ ಆಟಗಾರನ ನೆಟ್ವರ್ತ್ ಎಷ್ಟು?
India News Live10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ, ಅಷ್ಟಕ್ಕೂ ಈ ದುರಂತ ನಡೆದಿದ್ದು ಹೇಗೆ, ಇತ್ತೀಚೆಗೆ ಟೆಕ್ಕಿ ದುರಂತ ಸಾವಿನ ಬಳಿಕ ಮತ್ತೊಂದು ಘಟನೆ ನಡೆದಿದೆ.
India News Liveಒಂದೇ ಇನ್ನಿಂಗ್ಸ್ನಲ್ಲಿ 7ನೇ ಸ್ಥಾನದಿಂದ ನಂ.1 ಸ್ಥಾನಕ್ಕೆ ಜಿಗಿದ ವೈಭವ್! 30 ಸಿಕ್ಸರ್, 41 ಬೌಂಡರಿ ಸಿಡಿಸಿದ ಸೂರ್ಯವಂಶಿ!
19 ವರ್ಷದೊಳಗಿನವರ ವಿಶ್ವಕಪ್ ಫೈನಲ್ನಲ್ಲಿ ಒಂದೇ ಒಂದು ಇನ್ನಿಂಗ್ಸ್ನಿಂದ ವೈಭವ್ ಸೂರ್ಯವಂಶಿ, ಟೂರ್ನಿಯ ಟಾಪ್ ರನ್ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. ಇಂಗ್ಲೆಂಡ್ ವಿರುದ್ಧ 175 ರನ್ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ.
India News Liveಗೌತಮ್ ಗಂಭೀರ್ ನೀಲಿಗಣ್ಣಿನ ಹುಡುಗ ಟಿ20 ವಿಶ್ವಕಪ್ನಿಂದ ಔಟ್! ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆ?
India News Liveಕಚ್ಚಾತೈಲ ಖರೀದಿಗೆ ಭಾರತದ ಬಳಿ ಇದೆ ಹಲವು ಆಯ್ಕೆ - ಯಾವುದೇ ದೇಶದಿಂದಲೂ ತೈಲ ಖರೀದಿಸಲು ಭಾರತ ಸ್ವತಂತ್ರವಾಗಿದೆ - ರಷ್ಯಾ
ರಷ್ಯಾದಿಂದ ಭಾರತದ ಕಚ್ಚಾ ತೈಲ ಆಮದು ಪ್ರಮಾಣವು 38 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಡಿಸೆಂಬರ್ 2025ರ ವರದಿಗಳ ಪ್ರಕಾರ, ರಷ್ಯಾದ ತೈಲದ ಪಾಲು ಗಣನೀಯವಾಗಿ ಕಡಿಮೆಯಾಗಿದ್ದು, ಅಮೆರಿಕದಿಂದ ಆಮದು ಹೆಚ್ಚಾಗಿದೆ. ಇದು ಭಾರತ ತನ್ನ ಇಂಧನ ಮೂಲಗಳನ್ನು ವೈವಿಧ್ಯಗೊಳಿಸುತ್ತಿರುವ ಸ್ಪಷ್ಟ ಸೂಚನೆಯಾಗಿದೆ.
India News Liveಇಸ್ಲಾಮಾಬಾದ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಭೀಕರ ಬಾಂಬ್ ದಾಳಿ, 10ಕ್ಕೂ ಹೆಚ್ಚು ಮಂದಿ ಬಲಿ
ಪಾಕಿಸ್ತಾನದ ಇಸ್ಲಾಮಾಬಾದ್ನ ಶಿಯಾ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ನಡೆದ ಬಾಂಬ್ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಇದೊಂದು ಭಯೋತ್ಪಾದಕ ದಾಳಿ ಎಂದು ಪೊಲೀಸರು ಶಂಕಿಸಿದ್ದಾರೆ.
India News Live'ಬರೆದಿಟ್ಟುಕೊಳ್ಳಿ, ಪಾಕಿಸ್ತಾನ ಯೂ-ಟರ್ನ್ ಹೊಡೆಯುತ್ತೆ'; ಭಾರತ-ಪಾಕ್ ಪಂದ್ಯ ನಡೆಯೋದು ಪಕ್ಕಾ ಎಂದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!
ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ. ಆದರೆ, ಇದು ಬಾಂಗ್ಲಾದೇಶದ ಚುನಾವಣೆಗೆ ಸಂಬಂಧಿಸಿದ ರಾಜಕೀಯ ತಂತ್ರವಾಗಿದ್ದು, ಪಾಕಿಸ್ತಾನ ಶೀಘ್ರದಲ್ಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿದೆ ಎಂದು ಚೇತನ್ ಶರ್ಮಾ ಭವಿಷ್ಯ ನುಡಿದಿದ್ದಾರೆ.
India News Liveನೆರೆ ರಾಜ್ಯದಲ್ಲಿ ಕಾಗೆಗಳ ಸರಣಿ ಸಾವಿನ ಆಘಾತಕಾರಿ ಸತ್ಯ ಪರೀಕ್ಷೆಯಲ್ಲಿ ಬಯಲು, ಜನರಲ್ಲಿ ಆತಂಕ
ನೆರೆ ರಾಜ್ಯದಲ್ಲಿ ಕಾಗೆಗಳ ಸರಣಿ ಸಾವಿನ ಆಘಾತಕಾರಿ ಸತ್ಯ ಪರೀಕ್ಷೆಯಲ್ಲಿ ಬಯಲು, ನಗರದ ಹಲೆವೆಡೆ ಕಾಗೆಗಳು ಸತ್ತು ಬಿದ್ದಿದೆ. ಇದು ಆಪತ್ತಿನ ಸೂಚನೆ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದರೆ, ಪರೀಕ್ಷೆಯಲ್ಲಿ ಆಘಾತಕಾರಿ ಆಂಶ ಬಯಲಾಗಿದೆ.
India News Liveಕಾರಿನಲ್ಲಿ ಕುಳಿತಿದ್ದ ಒಬೆರಾಯ್ ಮೇಲೆ ಗುಂಡಿನ ದಾಳಿ, ಆಪ್ ನಾಯಕನ ದುರಂತ ಸಾವಿನ CCTV ದೃಶ್ಯ ಸೆರೆ
ಕಾರಿನಲ್ಲಿ ಕುಳಿತಿದ್ದ ಒಬೆರಾಯ್ ಮೇಲೆ ಗುಂಡಿನ ದಾಳಿ, ಮುಸುಕುದಾರಿ ಅಪರಿಚಿತ ವ್ಯಕ್ತಿಯಿಂದ ದಾಳಿ ನಡೆದಿದೆ. ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.