ವಡೋದರಾ: 2026ನೇ ಸಾಲಿನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ಬೆನ್ನಲ್ಲೇ ಸ್ಮೃತಿ ಮಂಧನಾ ಆರ್ಸಿಬಿ ಅಭಿಮಾನಿಗಳು ಹೃದಯ ಗೆಲ್ಲುವಂತ ಮಾತುಗಳನ್ನಾಡಿದ್ದಾರೆ.
- Home
- News
- India News
- India News Live: WPL 2026 - ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್ಸಿಬಿ ಫ್ಯಾನ್ಸ್ ದಿಲ್ ಖುಷ್!
India News Live: WPL 2026 - ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್ಸಿಬಿ ಫ್ಯಾನ್ಸ್ ದಿಲ್ ಖುಷ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಬುಧವಾರ ಲೋಕಸಭೆಯೊಳಗೆ ದೈಹಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್ ಸದಸ್ಯರು ಯೋಜಿಸಿದ್ದರು. ಜೊತೆಗೆ ಈ ಕೃತ್ಯ ಮುಚ್ಚಿಡುವ ಸಲುವಾಗಿಯೇ ಮಹಿಳಾ ಸಂಸದೆಯರನ್ನು ಮೋದಿ ಕೂರುವ ಸ್ಥಳದ ಸುತ್ತಲೂ ಸುತ್ತುವರೆದು ನಿಲ್ಲಿಸುವ ಯೋಜನೆ ರೂಪಿಸಲಾಗಿತ್ತು ಎಂದು ಗಂಭೀರ ಆರೋಪವೊಂದು ಕೇಳಿಬಂದಿದೆ. ಮೂಲಗಳನ್ನು ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ಇಂಥದ್ದೊಂದು ಸುದ್ದಿ ಪ್ರಕಟಿಸಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಬುಧವಾರ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾ ಬೇಕಿತ್ತು. ಆದರೆ ಇದಕ್ಕೂ ಮುನ್ನ ವಿಪಕ್ಷದ ಮಹಿಳಾ ಸದಸ್ಯರು ಪ್ರಧಾನಿ ಕೂರುವ ಸ್ಥಳದತ್ತ ಧಾವಿಸಿ ಇಡೀ ಪ್ರದೇಶವನ್ನು ಸುತ್ತುವರೆದು, ಬಿಜೆಪಿಯ ಪುರುಷ ಸದಸ್ಯರ ಜೊತೆ ವಾಕ್ಸಮರಕ್ಕೆ ಇಳಿದಿದ್ದರು.
ಈ ಘಟನೆಯನ್ನು ಪುಷ್ಟಿಕರಿಸುವಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬುಧವಾರ ಲೋಕಸಭೆಯಲ್ಲಿ ವಿಪಕ್ಷದ ಮಹಿಳಾ ಸದಸ್ಯರು ಪ್ರಧಾನಿ ಕೂರುವ ಸ್ಥಳವನ್ನು ಸುತ್ತುವರೆದರು ಆ ಬಳಿಕ ಅನಿವಾರ್ಯವಾಗಿ ಮೋದಿ ಭಾಷಣ ರದ್ದುಪಡಿಸಿ ಕಲಾಪವನ್ನೇ ಮುಂದೂಡಿದ ಘಟನೆ ಬಗ್ಗೆ ಸ್ಪೀಕರ್ ಈ ಬಿರ್ಲಾ ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.