09:38 AM (IST) Aug 14

India News Live 14th August: Sukanta Majumdar - ಪ್ರತಿಪಕ್ಷಗಳಿಗೆ ಉತ್ತರ ಬೇಕು, ಸಂಸತ್ತಿನಲ್ಲಿ ಚರ್ಚೆ ಬೇಡ ವಿರೋಧಿಗಳ ಅಸಲಿ ಆಟ ಬಯಲು ಮಾಡಿದ ಕೇಂದ್ರ ಸಚಿವ!

ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು, ಪ್ರತಿಪಕ್ಷಗಳು ಸಂಸತ್ತಿನಲ್ಲಿ ಚರ್ಚೆಯಿಂದ ನುಣುಚಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ. ಚರ್ಚೆಗೆ ಸರ್ಕಾರ ಸಿದ್ಧವಿದ್ದು, ವಿಪಕ್ಷಗಳು ಭಾಗವಹಿಸಲಿ ಎಂದು ಸವಾಲು ಹಾಕಿದ್ದಾರೆ. ಆರ್‌ಜಿ ಕರ ಪ್ರಕರಣವನ್ನು ಪ್ರಸ್ತಾಪಿಸಿ ಸರ್ಕಾರದ ಕ್ರಮ ಪ್ರಶ್ನಿಸಿದ್ದಾರೆ.

Read Full Story
09:28 AM (IST) Aug 14

India News Live 14th August: ಹಾಕಿ ವಿಶ್ವಕಪ್‌ 2026 - 1975ರ ಬಳಿಕ ಮತ್ತೊಂದು ವಿಶ್ವಕಪ್‌ ಮೇಲೆ ಭಾರತದ ಕಣ್ಣು; ಭಾರತ-ಪಾಕ್‌ ಪಂದ್ಯ ಯಾವಾಗ?

16ನೇ ಆವೃತ್ತಿಯ ಪುರುಷರ ಹಾಗೂ ಮಹಿಳಾ ಹಾಕಿ ವಿಶ್ವಕಪ್‌ಗೆ ನೆದರ್‌ಲೆಂಡ್ಸ್‌ ಹಾಗೂ ಬೆಲ್ಜಿಯಂ ಜಂಟಿ ಆತಿಥ್ಯದಲ್ಲಿ ಚಾಲನೆ ಸಿಗಲಿದೆ. 1975ರ ಬಳಿಕ ಮತ್ತೊಂದು ವಿಶ್ವಕಪ್‌ ಗೆಲ್ಲುವ ಕನಸಿನಲ್ಲಿರುವ ಭಾರತ ತಂಡ, ಪಾಕಿಸ್ತಾನ ಸೇರಿದಂತೆ ಬಲಿಷ್ಠ ತಂಡಗಳನ್ನು ಎದುರಿಸಲಿದೆ. ಟೂರ್ನಿಯ ಸಂಪೂರ್ಣ ಮಾಹಿತಿ ಮತ್ತು ಭಾರತ ತಂಡದ ವೇಳಾಪಟ್ಟಿ ಇಲ್ಲಿದೆ.
Read Full Story
08:47 AM (IST) Aug 14

India News Live 14th August: ಚಂದ್ರಶೇಖರನ್‌ ರಾಜೀನಾಮೆ ಬೆನ್ನಲ್ಲೇ 'ಬಾಂಬೆ ಹೌಸ್' ಮುಂದಿನ ಸಾರಥಿ ಯಾರು? - ರೇಸ್‌ನಲ್ಲಿದ್ದಾರೆ ಟಾಟಾ ಸ್ಟೀಲ್ ಎಂಡಿ!

ಎನ್ ಚಂದ್ರಶೇಖರನ್ ಅವರ ರಾಜೀನಾಮೆ ಘೋಷಣೆಯ ನಂತರ ಟಾಟಾ ಸನ್ಸ್‌ನ ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುತೂಹಲ ಕೆರಳಿಸಿದೆ. ಕಾನೂನು ತೊಡಕುಗಳು ಮತ್ತು ನಿಯಮಾವಳಿಗಳ ಅಡ್ಡಿಗಳ ನಡುವೆ, ಟಾಟಾ ಸ್ಟೀಲ್‌ನ ಎಂಡಿ ಟಿ.ವಿ. ನರೇಂದ್ರನ್ ಅವರು ಈ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ.
Read Full Story
08:11 AM (IST) Aug 14

India News Live 14th August: ರಾಕೆಟ್‌ನಂತೆ ಚಲಿಸುತ್ತೆ ಚೀನಾದ ಹೊಸ ರೈಲು, ಗಂಟೆಗೆ 800 ಕಿ.ಮೀ ವೇಗ

ಚೀನಾದ ಮ್ಯಾಗ್ಲೇವ್‌ ಬುಲೆಟ್‌ ರೈಲು ಕೇವಲ 5.3 ಸೆಕೆಂಡುಗಳಲ್ಲಿ ಗಂಟೆಗೆ 800 ಕಿ.ಮೀ. ವೇಗವನ್ನು ತಲುಪುವ ಮೂಲಕ ವಿಶ್ವದಾಖಲೆ ಸೃಷ್ಟಿಸಿದೆ. ಈ ಕಾಂತೀಯ ತೇಲುವಿಕೆ ತಂತ್ರಜ್ಞಾನವನ್ನು ಸಾರ್ವಜನಿಕ ಸಾರಿಗೆಗೆ ಬಳಸಾಗೋದಿಲ್ಲ.

Read Full Story
08:00 AM (IST) Aug 14

India News Live 14th August: ಚರ್ಚೆಯೇ ನಡೆಯದೆ ಸಂಸತ್‌ನ ಮುಂಗಾರು ಅಧಿವೇಶನ ಅಂತ್ಯ, 175 ಕೋಟಿ ರೂಪಾಯಿ ನಷ್ಟ!

ವಿಪಕ್ಷಗಳ ತೀವ್ರ ಗದ್ದಲದ ನಡುವೆ ಸಂಸತ್ತಿನ ಮುಂಗಾರು ಅಧಿವೇಶನವು ಅತ್ಯಂತ ಕಳಪೆ ಉತ್ಪಾದಕತೆಯೊಂದಿಗೆ ಮುಕ್ತಾಯಗೊಂಡಿದೆ. ಚರ್ಚೆಯಿಲ್ಲದೆ 12 ಮಸೂದೆಗಳನ್ನು ಅಂಗೀಕರಿಸಲಾಗಿದ್ದು, ಅಧಿವೇಶನದ ಕೊನೆಯ ದಿನ ಉಭಯ ಸದನಗಳಲ್ಲಿ ಮೊದಲ ಬಾರಿಗೆ 'ವಂದೇ ಮಾತರಂ' ಗೀತೆಯನ್ನು ಪ್ರಸಾರ ಮಾಡಿ ಇತಿಹಾಸ ಬರೆಯಲಾಯಿತು.
Read Full Story