08:45 AM (IST) Aug 07

India News Live 7th August: ಎಸ್ಸಿ, ಎಸ್ಟಿಗೆ ಕೆನೆಪದರ ನೀತಿ ಅನ್ವಯವಿಲ್ಲ - ಕೇಂದ್ರ

ಎಸ್‌ಸಿ, ಎಸ್ಟಿ ಸಮುದಾಯದ ಮೀಸಲಾತಿಗೆ ಕೆನೆಪದರ ನೀತಿ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸ್ಪಷ್ಟಪಡಿಸಿದೆ. ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿರೋಧಿಸಿರುವ ಸರ್ಕಾರ, ತನ್ನ ವಾದಕ್ಕೆ ಪೂರಕವಾಗಿ ಹಿಂದಿನ ಸಾಂವಿಧಾನಿಕ ಪೀಠದ ತೀರ್ಪನ್ನು ಉಲ್ಲೇಖಿಸಿದೆ.
Read Full Story
08:30 AM (IST) Aug 07

India News Live 7th August: ಚಂದ್ರನ ಮೇಲೆ ಅಪ್ಪಳಿಸಿದ ಸ್ಪೇಸ್‌ ಎಕ್ಸ್‌ ರಾಕೆಟ್‌ - 60 ಅಡಿ ಅಗಲ ಕುಳಿ ನಿರ್ಮಾಣ

ಒಂದು ವರ್ಷದಿಂದ ಬಾಹ್ಯಾಕಾಶದಲ್ಲಿ ತೇಲುತ್ತಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9 ರಾಕೆಟ್‌ನ ಭಾಗವೊಂದು ಚಂದ್ರನ ಗುರುತ್ವಾಕರ್ಷಣೆಗೆ ಸಿಲುಕಿ ಅಪ್ಪಳಿಸಿದೆ. ಗಂಟೆಗೆ 5,400 ಮೈಲಿ ವೇಗದಲ್ಲಿ ಅಪ್ಪಳಿಸಿದ ಈ ರಾಕೆಟ್, ಚಂದ್ರನ ಮೇಲೆ ದೊಡ್ಡ ಕುಳಿಯನ್ನು ಸೃಷ್ಟಿಸಿರಬಹುದೆಂದು ಅಂದಾಜಿಸಲಾಗಿದೆ.

Read Full Story
08:08 AM (IST) Aug 07

India News Live 7th August: ಕಳೆದ ವರ್ಷ ಮೋದಿ ವಿದೇಶ ಪ್ರವಾಸಕ್ಕೆ ₹180 ಕೋಟಿ ವೆಚ್ಚ

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರ 23 ದೇಶಗಳ ಪ್ರವಾಸಕ್ಕೆ 180 ಕೋಟಿ ರೂ. ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ. 2021ಕ್ಕೆ ಹೋಲಿಸಿದರೆ ಈ ವೆಚ್ಚವು 5 ಪಟ್ಟು ಹೆಚ್ಚಾಗಿದ್ದು, ಕಳೆದ 5 ವರ್ಷಗಳಲ್ಲಿ ಒಟ್ಟು 557.5 ಕೋಟಿ ರೂ. ಖರ್ಚಾಗಿದೆ.
Read Full Story
07:57 AM (IST) Aug 07

India News Live 7th August: ಪ್ರಧಾನಿ ಮೋದಿ ಮತ್ತೊಂದು ವಿಡಿಯೋ ; ಈ ಬಾರಿ ಮನವಿ ಮಾಡಿದ್ದು ಏನೆಂದರೆ..

ಪ್ರಧಾನಿ ನರೇಂದ್ರ ಮೋದಿಯವರು, ಫ್ರೆಂಡ್‌ಶಿಪ್ ಡೇಯಷ್ಟೇ ಉತ್ಸಾಹದಿಂದ ಆಗಸ್ಟ್ 7ರ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲು ಯುವಜನರಿಗೆ ಕರೆ ನೀಡಿದ್ದಾರೆ. ವಿಡಿಯೋದಲ್ಲಿ ಏನೆಲ್ಲ ಮನವಿ ಮಾಡಿದರು ಅನ್ನೋ ವಿವರ ಇಲ್ಲಿದೆ..

Read Full Story
07:55 AM (IST) Aug 07

India News Live 7th August: ಮೀಸಲಾತಿ ಇರುವುದು ದಮನಿತರ ಸಬಲೀಕರಣಕ್ಕೆ, ಅದು ಶಾಶ್ವತವಲ್ಲ - ಮೋಹನ್‌ ಭಾಗ್ವತ್‌

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗ್ವತ್‌ ಅವರು, ಮೀಸಲಾತಿ ಶಾಶ್ವತವಲ್ಲ ಮತ್ತು ಪ್ರಗತಿ ಸಾಧಿಸಿದವರು ಇತರರಿಗೆ ಅವಕಾಶ ನೀಡಬೇಕು ಎಂದು ಕರೆ ನೀಡಿದ್ದಾರೆ. ಜೆನ್‌ ಝೀ ಪ್ರತಿಭಟನೆಗಳನ್ನು ದೇಶವಿರೋಧಿ ಎಂದು ಪರಿಗಣಿಸಬಾರದು ಎಂದಿದ್ದಾರೆ.

Read Full Story
07:42 AM (IST) Aug 07

India News Live 7th August: ಪರೀಕ್ಷಾ ಅಕ್ರಮ: ಪ್ರಧಾನ್‌ ರೀತಿಯಲ್ಲೇ ಜಾರ್ಖಂಡ್ ಸಿಎಂ ಸೊರೇನ್‌ ರಿಸೈನ್‌ಗೆ ಪಟ್ಟು!

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಜಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಎಂ ಹೇಮಂತ್ ಸೊರೇನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಪ್ರತಿಭಟನಾಕಾರರೊಂದಿಗೆ ಸರ್ಕಾರ ಮಾತುಕತೆಗೆ ಮುಂದಾಗಿದೆ.

Read Full Story