LIVE NOW
| Updated : Aug 20 2026, 07:52 AM IST India Live News: ದೇಶದಲ್ಲಿ ಜೆನ್ಝೀಗಳನ್ನು ಸೆಳೆಯಲು ಎನ್ಡಿಎ-ಇಂಡಿಯಾ ಒಕ್ಕೂಟಗಳ ಪೈಪೋಟಿ, ಇಲ್ಲಿವೆ ಮಾಸ್ಟರ್ ಪ್ಲಾನ್!
ಸಾರಾಂಶ
ದೇಶದಲ್ಲಿ ಆಡಳಿತ ಪಕ್ಷ ಎನ್ಡಿಎ ಮತ್ತು ವಿಪಕ್ಷಗಳಾದ ಇಂಡಿಯಾ ಒಕ್ಕೂಟಗಳು ಜೆನ್ಝೀಗಳನ್ನು ತಮ್ಮತ್ತ ಸೆಳೆಯುವ ಪ್ರಯತ್ನಕ್ಕೆ ಕೈಹಾಕಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜೆನ್ಝೀಗಳ ಬಳಿಯೇ ಹೋಗಲು ನಿರ್ಧರಿಸಿದ್ದು, ಪ್ರತಿದಿನ ಒಬ್ಬ ಕೇಂದ್ರ ಸಚಿವರನ್ನು ಒಂದು ವಿಶ್ವವಿದ್ಯಾಲಯಕ್ಕೆ ಕಳಿಸುವ ಚಿಂತನೆಯನ್ನು ಮಾಡಿದೆ. ಈ ಮೂಲಕ ಯುವಕರೊಂದಿಗೆ ನೇರವಾಗಿ ಸಂವಹನ ನಡೆಸಿ ಅವರ ಬೇಡಿಕೆಗಳನ್ನು ಅರಿಯುವ ಕಾರ್ಯಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್ಲೈನ್ ಕೋಚಿಂಗ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಜೊತೆಗೆ, 'ಒಂದು ದಿನ, ಒಂದು ವಿಶ್ವವಿದ್ಯಾಲಯ' ಕಾರ್ಯಕ್ರಮದಡಿ ಸಚಿವರು ವಿದ್ಯಾರ್ಥಿಗಳೊಂದಿಗೆ ಸಂವಾದ, ಯುವಜನರನ್ನು ತಲುಪಲು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮತ್ತೊಂದೆಡೆ ಇಂಡಿಯಾ ಒಕ್ಕೂಟದ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಜೆನ್ಝೀ ಯುವ ಸಮುದಾಯವನ್ನು ತಮ್ಮತ್ತ ಸೆಳೆಯಲು ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಮುಂದಾಗಿದೆ. ದೆಹಲಿ, ಜಾರ್ಖಂಡ್ ಜೆನ್ಝೀ ಹೋರಾಟದ ಎಫೆಕ್ಟ್ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಎಲ್ಲ ಕಾಂಗ್ರೆಸ್ ಆಡಳಿತಾರೂಢ ರಾಜ್ಯಗಳ ಮುಖ್ಯಮಮಂತ್ರಿಗಳಿಗೆ ಆದೇಶ ನೀಡಿದ್ದಾರೆ. ಶಿಕ್ಷಣ ತಜ್ಞರ ಜತೆ ಚರ್ಚೆ ನಡೆಸಿ ವರದಿ ಸಲ್ಲಿಸಲು 1 ತಿಂಗಳ ಗಡುವು ನೀಡಿದ್ದಾರೆ.
India News Liveಕೇಂದ್ರದಿಂದ ಜೆನ್ಝೀ ಸೆಳೆಯಲು ಕೇಂದ್ರದ ಹೊಸ ಪ್ಲಾನ್! ನಿತ್ಯ ಒಂದು ವಿವಿಗೆ ಒಬ್ಬ ಕೇಂದ್ರ ಸಚಿವ, ಯುವಕರ ಜತೆ ನೇರ ಸಂವಹನ
ನವದೆಹಲಿ(ಆ.20): ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಯುವಕರಿಗೆ ಉಚಿತ ಆನ್ಲೈನ್ ಕೋಚಿಂಗ್ ಕ್ಲಾಸ್ ಆರಂಭಿಸುವ ಬಗ್ಗೆ ಪ್ರಧಾನಿ ಮೋದಿ(PM Narendra Modi) ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ(Pralhad joshi) ಅವರು ಈ ಕುರಿತು ಅಧಿಕಾರಿಗಳ ಜತೆ ಸಮಾಲೋಚನಾ ಸಭೆ ನಡೆಸಿದ್ದಾರೆ. ಯೋಜನೆಯ ಅನುಷ್ಠಾನ, ರೂಪುರೇಷೆ ಮತ್ತಿತರ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಸಿ ತ್ವರಿತ ಚಾಲನೆಗೆ ಕ್ರಮ ಕೈಗೊಂಡಿದ್ದಾರೆ.
ಜೆನ್ ಝೀ ಹೋರಾಟದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ
ಜೆನ್ ಝೀ ಹೋರಾಟದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ, ಯುವಜನತೆಯನ್ನು ತಲುಪುವ ಬೃಹತ್ ಕಾರ್ಯಾಚರಣೆಯ ಭಾಗವಾಗಿ ಪ್ರತಿದಿನ ಒಬ್ಬ ಕೇಂದ್ರ ಸಚಿವರನ್ನು ಒಂದು ವಿಶ್ವವಿದ್ಯಾಲಯಕ್ಕೆ ಕಳುಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಯುವಕರೊಂದಿಗೆ ನೇರವಾಗಿ ಸಂವಹನ ನಡೆಸಿ, ಅವರ ಕಳಕಳಿಗಳನ್ನು ಆಲಿಸಲು ಮತ್ತು ದೇಶ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.
Read Full Story