- Home
- News
- India News
- India News Live: 300 ಅಡಿ ಕುಸಿದ ಏರ್ ಇಂಡಿಯಾ, ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಗಾಯ, ಪೈಲಟ್ ಡ್ರಗ್ ಸೇವಿಸಿದ್ದು ಪತ್ತೆ!
India News Live: 300 ಅಡಿ ಕುಸಿದ ಏರ್ ಇಂಡಿಯಾ, ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಗಾಯ, ಪೈಲಟ್ ಡ್ರಗ್ ಸೇವಿಸಿದ್ದು ಪತ್ತೆ!

ದೇಶಾದ್ಯಂತ ಜೆನರೇಷನ್ ಝೀಗಳ ಹೋರಾಟದ್ದೇ ಸದ್ದು ಆವರಿಸಿದೆ. ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಡೆಸಿದ ತೀವ್ರ ಹೋರಾಟದ ಫಲದಿಂದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ರ ರಾಜೀನಾಮೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲಿಯೇ ಜಾರ್ಖಂಡ್ನಲ್ಲಿಯೂ ಜೆನ್ ಝೀ ಹೋರಾಟ ಕೂಡ ಯಶಸ್ವಿಯಾಗಿದೆ. ಬಂಗಾಳದ ಸಿಎಂ ಸುವೇಂದು ಅಧಿಕಾರಿ ಕೂಡ ಜೆನ್ ಝೀ ಹೋರಾಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೀಗ ಹಾಲಿ ಶಿಕ್ಷಣ ಸಚಿವರಾದ ಪ್ರಹ್ಲಾದ್ ಜೋಶಿ ಅವರು ವಿಶ್ವಾಸಾರ್ಹವಾದ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕೆ ಕ್ರಮವಹಿಸಿದ್ದಾರೆ.
India News Live300 ಅಡಿ ಕುಸಿದ ಏರ್ ಇಂಡಿಯಾ, ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಗಾಯ, ಪೈಲಟ್ ಡ್ರಗ್ ಸೇವಿಸಿದ್ದು ಪತ್ತೆ!
India News Liveಆಟಗಾರರು ಮಷಿನ್ಗಳಲ್ಲ, ಹೀಗಂದಿದ್ದೇಕೆ VVS ಲಕ್ಷ್ಮಣ್?
India News LiveNALSAR students protest: ವಿವಿ ಘಟಿಕೋತ್ಸವಕ್ಕೆ ಸಿಜೆಐ ಸೂರ್ಯಕಾಂತ್ ಆಮಂತ್ರಣಕ್ಕೆ 450 ವಿದ್ಯಾರ್ಥಿಗಳ ವಿರೋಧ!
ಹೈದರಾಬಾದ್ (ಆ.10): ಇಲ್ಲಿನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್ ವಿವಿಯ ಘಟಿಕೋತ್ಸವಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಆಮಂತ್ರಿಸಿದ್ದಕ್ಕೆ ಕೆಲವು ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇತ್ತೀಚೆಗೆ ಕಾಕ್ರೋಚ್ ಪಾರ್ಟಿ (ಸಿಜೆಪಿ) ಪ್ರತಿಭಟನಾಕಾರರ ಮೇಲಿನ ಹಿಂಸೆಯ ಪ್ರಕರಣವನ್ನು ಸಿಜೆಐ ನಿರ್ವಹಿಸಿದ ರೀತಿ ಸರಿಯಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪಿಸಿದ್ದಾರೆ.
ಸಿಜೆಪಿ ಪ್ರಕರಣ ನಿಭಾಯಿಸಿದ ರೀತಿಗೆ ಅಸಮಾಧಾನ
ವಿವಿಯ 2026ನೇ ಸಾಲಿನ ಘಟಿಕೋತ್ಸವಕ್ಕೆ ಸಿಜೆಐ ಆಮಂತ್ರಣವನ್ನು ವಿರೋಧಿಸಿ 450ಕ್ಕೂ ಅಧಿಕ ವಿದ್ಯಾರ್ಥಿಗಳು ಸಹಿ ಸಂಗ್ರಹ ಮಾಡಿದ್ದಾರೆ. ಇದನ್ನು ಉಪಕುಲಪತಿ, ರಿಜಿಸ್ಟ್ರಾರ್, ಪ್ರಾಧ್ಯಾಪಕರು ಮತ್ತು ವಿವಿಯ ಇತರ ಅಧಿಕಾರಿಗಳಿಗೆ ಸಲ್ಲಿಸಿದ್ದು, ‘ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಡಿಯೋ ನೋಡುವಂತೆ ಮನವಿ ಮಾಡಿದಾಗ, ಅದಕ್ಕೆಲ್ಲ ಸಮಯವಿಲ್ಲ ಎಂದು ಸಿಜೆಐ ಹೇಳಿದ್ದರು. ಅಲ್ಲದೆ ಯುವಕರನ್ನು ಜಿರಳೆಗಳು ಎಂದು ಕರೆದಿದ್ದರು. ಹಾಗಾಗಿ ಅವರನ್ನು ಅತಿಥಿಯಾಗಿ ಕರೆಯಬಾರದು’ ಎಂದು ಒತ್ತಾಯಿಸಿದ್ದಾರೆ.
