08:37 AM (IST) Jul 03

India News Live 3rd July: ಅಯೋಧ್ಯ ಅಕ್ರಮ - ಬೀದಿಗಿಳಿದ ವಕೀಲರು; ಕನ್ನಡಿಗ ಗೋಪಾಲ್ ಸೇರಿ ಮೂವರ ವಿರುದ್ಧ ಎಫ್‌ಐಆರ್‌ಗೆ ಪಟ್ಟು! ಪ್ರತಿಭಟನೆ ವೇಳೆ ಜೈ ಶ್ರೀರಾಂ ಘೋಷಣೆ

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು ಆರೋಪಕ್ಕೆ ಸಂಬಂಧಿಸಿದಂತೆ, ಫೈಜಾಬಾದ್‌ ಜಿಲ್ಲಾ ವಕೀಲರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕನ್ನಡಿಗ ಗೋಪಾಲ್ ರಾವ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹ. ಪ್ರತಿಭಟನೆ ವೇಳೆ ಬ್ಯಾರಿಕೇಡ್ ಜಿಗಿದು ಜೈ ಶ್ರೀರಾಂ ಘೋಷಣೆ. 

Read Full Story
08:27 AM (IST) Jul 03

India News Live 3rd July: 'ಟೀಂ ಇಂಡಿಯಾ ಕೇವಲ...' - ಐರ್ಲೆಂಡ್ ಎದುರಿನ ಸೋಲಿನ ಬೆನ್ನಲ್ಲೇ ಭಾರತ ತಂಡದ ಬಗ್ಗೆ ಪಾಕ್ ಕೋಚ್ ಅಚ್ಚರಿಯ ಹೇಳಿಕೆ..!

ಬೆಂಗಳೂರು: ಇತ್ತೀಚೆಗಷ್ಟೇ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಟಿ20 ತಂಡವು ಕ್ರಿಕೆಟ್ ಶಿಶು ಐರ್ಲೆಂಡ್ ಎದುರು ಟಿ20 ಸರಣಿ ವೈಟ್‌ವಾಷ್ ಅನುಭವಿಸಿತ್ತು. ಇದರ ನಡುವೆ ಪಾಕಿಸ್ತಾನ ಕ್ರಿಕೆಟ್ ಹೆಡ್ ಕೋಚ್ ಮೈಕ್ ಹೆಸ್ಸನ್, ಟೀಂ ಇಂಡಿಯಾ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದಾರೆ.

Read Full Story
08:09 AM (IST) Jul 03

India News Live 3rd July: ಬೆಂಗಳೂರಿನ ನರ್ಸ್‌ ಸೇರಿ ಇಬ್ಬರಿಂದ ಹೃದಯಾಘಾತ ಆದವನ ರಕ್ಷಣೆ

ಕೇರಳದ ಎರ್ನಾಕುಲಂನಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯೊಬ್ಬರ ಜೀವವನ್ನು ಇಬ್ಬರು ದಾದಿಯರು ಸಮಯಪ್ರಜ್ಞೆಯಿಂದ ಉಳಿಸಿದ್ದಾರೆ. ಬೆಂಗಳೂರಿನ ನರ್ಸಿಂಗ್ ವಿದ್ಯಾರ್ಥಿನಿ ಮತ್ತು ಸ್ಥಳೀಯ ಆಸ್ಪತ್ರೆಯ ನರ್ಸ್, ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಬಂದು ಸಿಪಿಆರ್ ನೀಡಿ ವ್ಯಕ್ತಿಯ ಪ್ರಾಣ ರಕ್ಷಿಸಿದ್ದಾರೆ.
Read Full Story
07:56 AM (IST) Jul 03

India News Live 3rd July: FIFA World Cup 2026: 0-2ರಿಂದ 3-2ಕ್ಕೆ! ಸೆನೆಗಲ್‌ಗೆ ಶಾಕ್ ನೀಡಿ ಪ್ರಿ ಕ್ವಾರ್ಟರ್‌ಗೆ ಲಗ್ಗೆ ಇಟ್ಟ ಬೆಲ್ಜಿಯಂ

ಸೆನೆಗಲ್‌ ವಿರುದ್ಧ 0-2 ಗೋಲುಗಳಿಂದ ಹಿನ್ನಡೆಯಲ್ಲಿದ್ದ ಬೆಲ್ಜಿಯಂ, ಪಂದ್ಯದ ಕೊನೆಯ ನಿಮಿಷಗಳಲ್ಲಿ ಅದ್ಭುತವಾಗಿ ಕಮ್‌ಬ್ಯಾಕ್‌ ಮಾಡಿ 3-2 ಅಂತರದಲ್ಲಿ ಜಯಗಳಿಸಿ ಪ್ರಿ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿತು. ಇನ್ನೊಂದು ಪಂದ್ಯದಲ್ಲಿ, ಬೋಸ್ನಿಯಾ ವಿರುದ್ಧ 2-0 ಅಂತರದಲ್ಲಿ ಗೆದ್ದ ಅಮೆರಿಕ ಕೂಡ ಅಂತಿಮ 16ರ ಸುತ್ತಿಗೆ ಲಗ್ಗೆ ಇಟ್ಟಿದೆ.

Read Full Story