07:59 AM (IST) Aug 28

India News Live Flood: ಮೋದಿ ಜೀ ನಮ್ಮನ್ನು ಕಾಪಾಡಿ; ಟಿಬೆಟ್ ದುರಂತದ ನಡುವೆ ಕಣ್ಣೀರಿಡುತ್ತಾ ಭಾರತಕ್ಕೆ ವಿಡಿಯೋ ಸಂದೇಶ ಕಳುಹಿಸಿದ ಸುನೀತಾ!

ಚೀನಾ-ನೇಪಾಳ ಗಡಿಯ ಸಮೀಪ ಟಿಬೆಟ್‌ನಲ್ಲಿ ಸಂಭವಿಸಿದ ಭೂಕಂಪ ಮತ್ತು ಹಿಮಪಾತದಿಂದಾಗಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಭಾರತೀಯ ಯಾತ್ರಿಕರು ಪ್ರವಾಹದಲ್ಲಿ ಸಿಲುಕಿದ್ದಾರೆ. ಉಸಿರಾಟದ ತೊಂದರೆ, ಆಹಾರ-ನೀರಿನ ಕೊರತೆಯಿಂದ ಬಳಲುತ್ತಿರುವ ಯಾತ್ರಿಕರು, ತಮ್ಮನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಬೆಜಿಂಗ್; ಚೀನಾ-ನೇಪಾಳ ಗಡಿಯ ಸಮೀಪವಿರುವ ಟಿಬೆಟ್‌ನಲ್ಲಿ ಸಂಭವಿಸಿದ ಭಾರಿ ಭೂಕಂಪ ಹಾಗೂ ಹಿಮಪಾತದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಸದ್ಯ ಭಾರತೀಯ ಯಾತ್ರಿಕರು ಸಾವು-ಬದುಕಿನ ನಡುವೆ ಕಠಿಣ ಹೋರಾಟ ನಡೆಸುತ್ತಿದ್ದಾರೆ. ಪವಿತ್ರ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಅನೇಕ ಭಾರತೀಯ ಪ್ರವಾಸಿಗರು ಈ ವಿನಾಶಕಾರಿ ದುರಂತದಲ್ಲಿ ಸಿಲುಕಿಕೊಂಡಿದ್ದು, ಅವರ ಸುರಕ್ಷತೆ ಕುರಿತು ತೀವ್ರ ಆತಂಕ ಎದುರಾಗಿದೆ.

Read Full Story