- Home
- News
- India News
- India Latest News Live: ಒಡಿಶಾದ ರಕ್ಷಕ, ವಿಶ್ವಕ್ಕೆ ಮಾದರಿಯಾದ ಭಾರತದ ವಿಕೆ ಪಾಂಡಿಯನ್ ಗೆ ವೆನಿಜುವೆಲಾ ವಿಪತ್ತು ನಿರ್ವಹಣೆಗೆ ಕರೆ!
India Latest News Live: ಒಡಿಶಾದ ರಕ್ಷಕ, ವಿಶ್ವಕ್ಕೆ ಮಾದರಿಯಾದ ಭಾರತದ ವಿಕೆ ಪಾಂಡಿಯನ್ ಗೆ ವೆನಿಜುವೆಲಾ ವಿಪತ್ತು ನಿರ್ವಹಣೆಗೆ ಕರೆ!

ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ನೀಟ್ ಸೋರಿಕೆ ವಿವಾದ ತಣ್ಣಗಾಗುವ ಮುನ್ನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸಿದ ಯುಜಿಸಿ-ನೆಟ್ ಪ್ರಶ್ನೆಪತ್ರಿಕೆಯೂ ಸೋರಿಕೆಯಾದ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಆರೋಪದ ಕುರಿತು ಕೂಲಕಂಷವಾಗಿ ಪರಿಶೀಲನೆ ನಡೆಸುವಂತೆ ಶಿಕ್ಷಣ ಸಚಿವಾಲಯವು ಎನ್ಟಿಎಗೆ ಸೂಚನೆ ನೀಡಿದೆ.
ಪ್ರಧಾನಿ ಮೋದಿ ಆಸ್ಟ್ರೇಲಿಯಾ ಪ್ರವಾಸದ ಫಲಶ್ರುತಿಯಾಗಿ, ಅಲ್ಲಿನ ಫ್ಲಿಂಡರ್ಸ್ ವಿವಿಗೆ ಬೆಂಗಳೂರಿನಲ್ಲಿ ಕ್ಯಾಂಪಸ್ ತೆರೆಯಲು ಅನುಮೋದನೆ ದೊರಕಿದೆ. ಭಾರತ-ಆಸ್ಟ್ರೇಲಿಯಾ ಶೈಕ್ಷಣಿಕ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ, ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ, ವಿಕ್ಟೋರಿಯಾ ವಿವಿಗೆ ಹರ್ಯಾಣದ ಗುರುಗ್ರಾಮದಲ್ಲಿ ಕ್ಯಾಂಪಸ್ ತೆರೆಯಲು ಅನುಮೋದನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಸತತ 2ನೇ ದಿನವೂ ಅಮೆರಿಕ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆದಿದ್ದು, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಉಲ್ಬಣವಾಗುವಂತೆ ಮಾಡಿದೆ. ಬುಧವಾರ ಇರಾನ್ನ 80ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ಮಾಡಿದ್ದ ಅಮೆರಿಕ ಸೇನೆ, ಅಧ್ಯಕ್ಷ ಟ್ರಂಪ್ ಎಚ್ಚರಿಕೆ ನೀಡಿದಂತೆ ಗುರುವಾರ ಇರಾನ್ನ 90ಕ್ಕೂ ಹೆಚ್ಚು ಆಯಕಟ್ಟಿನ ಪ್ರದೇಶಗಳ ಮೇಲೆ ಭೀಕರ ದಾಳಿ ನಡೆಸಿದೆ.