10:35 AM (IST) Apr 13

India News Live 13th April: ಕನ್ನಡಿಗನ ಪಾಲಾದ ಪರ್ಪಲ್ ಕ್ಯಾಪ್; ಆರೆಂಜ್ ಕ್ಯಾಪ್ ಪಡೆಯುಲು ಶುರುವಾಯ್ತು ಬಿಗ್ ಫೈಟ್

ಐಪಿಎಲ್ ಸೂಪರ್ ಸಂಡೇ ಪಂದ್ಯಗಳಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಜಯಭೇರಿ ಬಾರಿಸಿವೆ. ಈ ಫಲಿತಾಂಶದಿಂದ ಅಂಕಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಗುಜರಾತ್‌ನ ಪ್ರಸಿದ್ಧ್ ಕೃಷ್ಣ ಪರ್ಪಲ್ ಕ್ಯಾಪ್ ಪಡೆದರೆ, ಆರೆಂಜ್ ಕ್ಯಾಪ್‌ಗಾಗಿ ಪೈಪೋಟಿ ತೀವ್ರಗೊಂಡಿದೆ.
Read Full Story
09:21 AM (IST) Apr 13

India News Live 13th April: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌; ಕನ್ನಡಿಗ ಆಯುಶ್ ಶೆಟ್ಟಿಗೆ ಐತಿಹಾಸಿಕ ಬೆಳ್ಳಿ!

ಚೀನಾದ ನಿಂಗ್ಬೊದಲ್ಲಿ ನಡೆದ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳದ ಆಯುಷ್ ಶೆಟ್ಟಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿದ್ದಾರೆ. ಫೈನಲ್‌ನಲ್ಲಿ ಚೀನಾದ ಶಿ ಯು ಕಿ ವಿರುದ್ಧ ಸೋತರೂ, ಈ ಕೂಟದಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ಶಟ್ಲರ್‌ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
Read Full Story
08:41 AM (IST) Apr 13

India News Live 13th April: ರಾಜಸ್ಥಾನ ರಾಯಲ್ಸ್‌ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಸನ್‌ರೈಸರ್ಸ್‌ ಹೈದರಾಬಾದ್?

ಈ ಬಾರಿಯ ಐಪಿಎಲ್‌ನಲ್ಲಿ ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಗೆದ್ದು ಅಜೇಯವಾಗಿರುವ ರಾಜಸ್ಥಾನ ರಾಯಲ್ಸ್, ಸೋಮವಾರ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೆಣಸಲಿದೆ. ಯುವ ಆಟಗಾರ ವೈಭವ್‌ ಸೂರ್ಯವಂಶಿ ಬ್ಯಾಟಿಂಗ್ ಹಾಗೂ ರವಿ ಬಿಷ್ಣೋಯ್ ಬೌಲಿಂಗ್ ರಾಯಲ್ಸ್‌ ತಂಡದ ಬಲವಾಗಿದ್ದರೆ, ಹೈದರಾಬಾದ್ ತಂಡವು ಬಲಿಷ್ಠ ಬ್ಯಾಟಿಂಗ್ ಹೊಂದಿದ್ದರೂ ಮಧ್ಯಮ ಕ್ರಮಾಂಕ ಹಾಗೂ ಬೌಲಿಂಗ್ ವೈಫಲ್ಯದಿಂದ ಸೋಲನುಭವಿಸುತ್ತಿದೆ.
Read Full Story
08:31 AM (IST) Apr 13

India News Live 13th April: IPL 2026 - ವಾಂಖೆಡೆಯಲ್ಲಿ ನಿನ್ನೆ ನಡೆದ ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆರ್‌ಸಿಬಿ, ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು. ಸಾಲ್ಟ್‌, ರಜತ್ ಮತ್ತು ಕೊಹ್ಲಿಯವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 240 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದ ಆರ್‌ಸಿಬಿ, ಮುಂಬೈ ತಂಡವನ್ನು 222 ರನ್‌ಗಳಿಗೆ ಕಟ್ಟಿಹಾಕಿ ಗೆಲುವಿನ ಹಳಿಗೆ ಮರಳಿತು.
Read Full Story
07:56 AM (IST) Apr 13

India News Live 13th April: ಅರುಣಾಚಲದ 27 ಸ್ಥಳಗಳಿಗೆ ಚೀನಾದಿಂದ ಹೊಸ ಹೆಸರು - ಭಾರತದ ತೀಕ್ಷ್ಣ ತಿರುಗೇಟು

ಅರುಣಾಚಲ ಪ್ರದೇಶದ 27 ಸ್ಥಳಗಳಿಗೆ ಚೀನಾ ಹೊಸ ಹೆಸರುಗಳನ್ನು ಇಟ್ಟಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತ, ಅರುಣಾಚಲ ಪ್ರದೇಶವು ದೇಶದ ಅವಿಭಾಜ್ಯ ಅಂಗವಾಗಿದ್ದು, ಇಂತಹ ದುರುದ್ದೇಶಪೂರಿತ ಪ್ರಯತ್ನಗಳಿಂದ ವಾಸ್ತವ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Read Full Story
07:40 AM (IST) Apr 13

India News Live 13th April: ಇರಾನ್‌-ಅಮೆರಿಕ ಮಾತುಕತೆ ವಿಫಲವಾಗಿದ್ದು ಯಾಕೆ?

ಪಾಕಿಸ್ತಾನದಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಬಹುನಿರೀಕ್ಷಿತ ಸಂಧಾನ ಮಾತುಕತೆ ವಿಫಲಗೊಂಡಿದೆ. ಅಣ್ವಸ್ತ್ರ ಯೋಜನೆ, ಆಸ್ತಿ ಬಿಡುಗಡೆ, ಹೋರ್ಮುಜ್ ಜಲಸಂಧಿ ಮತ್ತು ಪರಸ್ಪರ ವಿಶ್ವಾಸದ ಕೊರತೆಯಂತಹ ಹಲವು ವಿಚಾರಗಳಲ್ಲಿನ ಭಿನ್ನಾಭಿಪ್ರಾಯಗಳು ಮಾತುಕತೆ ಮುರಿದುಬೀಳಲು ಕಾರಣವಾಗಿವೆ.
Read Full Story
07:27 AM (IST) Apr 13

India News Live 13th April: ಡಿಎಂಕೆ ಪರ ಡಿಕೆಶಿ ಪ್ರಚಾರ ಪ್ರಶ್ನಿಸಿದ ಪಳನಿಸ್ವಾಮಿ, ತಮಿಳುನಾಡು ಚುನಾವಣೆಲೂ ಮೇಕೆದಾಟು ಡ್ಯಾಂ ಗದ್ದಲ

ಎಐಎಡಿಎಂಕೆ ನಾಯಕ ಪಳನಿಸ್ವಾಮಿ ಅವರು ಡಿಎಂಕೆ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿಗೆ ಮಾರಕವಾದ ಮೇಕೆದಾಟು ಯೋಜನೆಗೆ ಮುಂದಾಗಿರುವ ಕರ್ನಾಟಕದ ಡಿಸಿಎಂ ಡಿಕೆಶಿ ಜೊತೆ ಡಿಎಂಕೆ ಜಂಟಿ ಪ್ರಚಾರ ನಡೆಸಿರುವುದು ಜನರ ಹಿತಕ್ಕೆ ವಿರುದ್ಧ ಎಂದಿದ್ದಾರೆ.

Read Full Story
07:12 AM (IST) Apr 13

India News Live 13th April: ಅಮೆರಿಕ-ಇರಾನ್‌ ಸಂಧಾನ ಮಾತುಕತೆ ವಿಫಲ: ಜಗತ್ತಿಗೆ ಮತ್ತೆ ಯುದ್ಧ ಭೀತಿ

ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಇರಾನ್‌-ಅಮೆರಿಕ ಸಂಧಾನ ಮಾತುಕತೆ ವಿಫಲಗೊಂಡಿದೆ. ಅಣ್ವಸ್ತ್ರ ಯೋಜನೆ ವಿಚಾರದಲ್ಲಿ ಉಭಯ ದೇಶಗಳು ಪಟ್ಟು ಸಡಿಲಿಸದ ಕಾರಣ ಮಾತುಕತೆ ಮುರಿದುಬಿದ್ದಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಭೀತಿ ಸೃಷ್ಟಿಸಿದೆ.

Read Full Story