ಭಗವದ್ಗೀತೆಯನ್ನು ಅಕ್ಕಿ ಕಾಳಿನ ಮೇಲೆ ರಚಿಸಿದ ಸಾಧಕಿ/ ಭಾರತದ ಮೊದಲ ಮೈಕ್ರೋ ಆರ್ಟಿಸ್ಟ್. ಹೈದರಾಬಾದಿನ ಕಾನೂನು ವಿದ್ಯಾರ್ಥಿನಿನಿ ಸಾಧನೆ/ 4,042 ಅಕ್ಕಿ ಕಾಳುಗಳ ಮೇಲೆ ಅರಳಿದ ಗೀತೆ

ಹೈದರಾಬಾದ್ ( ಅ. 20) ಹೊಸ ಹೊಸ ಸಾಧನೆಗಳು ಅನಾವರಣವಾಗುತ್ತಲೆ ಇರುತ್ತವೆ. ಭಾರತದ ಮೊದಲ ಮೈಕ್ರೊ ಆರ್ಟಿಸ್ಟ್ ಭಗವದ್ಗೀತೆಯನ್ನು 4,042 ಅಕ್ಕಿ ಕಾಳುಗಳ ಮೇಲೆ ಸೆರೆಹಿಡಿದಿದ್ದಾರೆ. ಈ ಮಹಾನ್ ಕಾರ್ಯ ಮುಗಿಸಲು ಅವರು 150 ಗಂಟೆಗಳನ್ನು ತೆಗೆದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾನೂನು ವಿದ್ಯಾರ್ಥಿ ಆಗಿರುವ ಹೈದರಾಬಾದ್‌ನ ರಾಮಗಿರಿ ಸ್ವರಿಕಾ, ಭೂತಗನ್ನಡಿಯನ್ನು ಬಳಸದೆ ವಿವಿಧ ರೀತಿಯ ಮೈಕೋ-ಕಲಾಕೃತಿ ರಚಿಸುತ್ತಾರೆ. ಅನೇಕ ಪ್ರಶ್ತಸ್ತಿಗಳು ಅವರಿಗೆ ಸಂದಿದ್ದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಸ್ವರಿಕಾರ ಕಲಾಕೆಲಸವನ್ನು ನೋಡಿಕೊಂಡು ಬನ್ನಿ

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸ್ವರಿಕಾ, ಭಗವದ್ಗೀತೆಯನ್ನು ಕಲಾಕೃತಿ ಒಳಗೆ ತರಬೇಕು ಎನ್ನುವ ನನ್ನ ಆಸೆ ಪೂರೈಸಿದೆ ಎಂದಿದ್ದಾರೆ. ಎರಡು ಸಾವಿರಕ್ಕೂ ಅಧಿಕ ವಿವಿಧ ಕಲಾಕೃತಿಯನ್ನು ಸ್ವರಿಕಾ ನಿರ್ಮಾಣ ಮಾಡಿದ್ದಾರೆ. ಮಿಲ್ಕ್ ಆರ್ಟ್, ಪೇಪರ್ ಆರ್ಟ್ ನಲ್ಲಿಯೂ ಸ್ವರಿಕಾ ಸಿದ್ಧಹಸ್ತೆ. ಎಳ್ಳು ಮತ್ತು ಕೂದಲಿನ ಮೇಲೆಯೂ ಮೈಕ್ರೋ ಆರ್ಟ್ ನಿರ್ಮಾಣದ ಗುರಿ ಹೊಂದಿದ್ದೇನೆ ಎಂದು ತಿಳಿಸುತ್ತಾರೆ. 

ಸಂವಿಧಾನದ ಪೀಠೀಕೆಯನ್ನು ಮೈಕ್ರೋ ಆರ್ಟ್ ನಲ್ಲಿ ಹೊರತಂದ ಸಾಧನೆಗೆ ತೆಲಂಗಾಣದ ರಾಜ್ಯಪಾಲರಿಂದ ಗೌರವ ಪಡೆದುಕೊಂಡಿದ್ದಾರೆ. ನನಗೆ ಮೊದಲಿನಿಂದಲೂ ಸಂಗೀತ ಮತ್ತು ಕಲೆಯಲ್ಲಿ ವಿಶೇಷ ಆಸಕ್ತಿ. ಕಳೆದ ನಾಲ್ಕು ವರ್ಷದಿಂದ ಮೈಕ್ರೋ ಆರ್ಟ್ ಆರಂಭಿಸಿದ್ದು ಒಂದೊಂದೆ ಹೆಜ್ಜೆ ಮುಂದೆ ಇಡುತ್ತಿದ್ದೇನೆ ಎನ್ನುತ್ತಾರೆ.

ಸ್ವರಿಕಾ ದೇಶದ ಮೊಟ್ಟ ಮೊದಲ ಮೈಕ್ರೋ ಆರ್ಟಿಸ್ಟ್ ಎಂದು ಹೆಸರು ಮಾಡಿದ್ದು ಕಳೆದ ವರ್ಷ ದೆಹಲಿಯ ಕಲ್ಚರಲ್ ಅಕಾಡೆಮಿ ಪುರಸ್ಕಾರ ನೀಡಿ ಗೌರವಿಸಿದೆ. 2017 ರಲ್ಲಿ ಇಂಟರ್ ನ್ಯಾಶನಲ್ ಆರ್ಡರ್ ಬುಕ್ ಆಫ್ ರೆಕಾರ್ಡ್ ನಲ್ಲಿಯೂ ಹೆಸರು ಸ್ಥಾಪನೆ ಮಾಡಿದ್ದಾರೆ. ನ್ಯಾಯಾಧೀಶೆಯಾಗುವ ಕನಸು ಹೊತ್ತಿರುವ ಸ್ವರಿಕಾಗೆ ನಮ್ಮ ಕಡೆಯಿಂದಲೂ ಗುಡ್ ಲಕ್..


.