ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ, ದೆಹಲಿ ಸೇರಿ 5 ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿ ಸ್ಫೋಟದ ಬೆನ್ನಲ್ಲೇ ಬೆದರಿಕೆ ಬಂದಿದ್ದು, ತನಿಖಾ ಎಜೆನ್ಸಿಗಳು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಿದೆ.

ನವದೆಹಲಿ (ನ.12) ದೆಹಲಿ ಕಾರು ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡ ಮಾತ್ರವಲ್ಲ, ಪಾಕಿಸ್ತಾನ ಪೋಷಿಸುತ್ತಿರುವ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ಕೈವಾಡಗಳು ವ್ಯಕ್ತವಾಗುತ್ತಿದೆ. ಭಾರತದಲ್ಲೇ ಇದ್ದು, ಭಾರತೀಯರ ವಿರುದ್ಧವೇ ಬಾಂಬ್ ಇಡಲು ವೈದ್ಯರ ಸೋಗಿನಲ್ಲಿ ಉಗ್ರರು ಸಜ್ಜಾಗಿದ್ದಾರೆ ಅನ್ನೋ ಭಯಾನಕ ಮಾಹಿತಿಯೂ ಬಯಲಾಗಿದೆ. ಈ ಬೆಳವಣಿಗೆ ನಡುವೆ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಗಳು ಬಂದಿವೆ. ಹಾರಾಟದ ವೇಳೆ ವಿಮಾನ ಸ್ಫೋಟಿಸುವ ಬೆದರಿಕೆ ಇಮೇಲ್‌ಗಳು ಬಂದಿದೆ. ಹೀಗಾಗಿ ದೆಹಲಿ-ಮುಂಬೈ ಸೇರಿದಂತೆ ಪ್ರಮುಖ 5 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಮೇಲ್ ಮೂಲಕ ಬಾಂಬ್ ಬೆದರಿಕೆ

ಇಂಡಿಗೋ ವಿಮಾನ ಸಂಸ್ಥೆಗೆ ಇಂದು (ನ.12) ಇಮೇಲ್ ಮೂಲಕ ಬೆದರಿಕೆ ಬಂದಿದೆ. ಸಂಜೆ 3.40 ಹಾಗೂ 3.45ರ ಸುಮಾರಿನಲ್ಲಿ ಇಮೇಲ್ ಬಂದಿದೆ. ಇಮೇಲ್ ಗಮನಕ್ಕೆ ಬಂದ ತಕ್ಷಣವೇ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ತಕ್ಷಣವೇ ದೆಹಲಿ , ಮುಂಬೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇತ್ತ ತನಿಖಾ ಎಜೆನ್ಸಿಳು ಇಮೇಲ್ ಮೂಲದ ತನಿಖೆ ಮಾಡುತ್ತಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್

ದೆಹಲಿ ಕಾರು ಸ್ಫೋಟ ಪ್ರಕರಣದ ಬೆನ್ನಲ್ಲೇ ದೇಶದ ಪ್ರಮುಖ ನಗರ, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಇದೀಗ ಸೋಮವಾರದಿಂದ ಸತತ ಬಾಂಬ್ ಬೆದರಿಕೆಗಳು ಬರುತ್ತಿರುವ ಕಾರಣ ದೆಹಲಿ, ಮುಂಬೈ, ಚೆನ್ನೈ, ತಿರುವನಂಪುರಂ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸದ್ಯ ಇಮೇಲ್ ಬೆದರಿಕೆ ಕುರಿತು ತನಿಖೆ ನಡೆಯುತ್ತಿದೆ, ಇದು ಹುಸಿ ಬಾಂಬ್ ಕರೆಯೇ ಅನ್ನೋದು ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ದೆಹಲಿ ಕಾರು ಸ್ಫೋಟದ ಬಳಿಕ ಪ್ರತಿ ಘಟನೆಯನ್ನು ಭದ್ರತಾ ಪಡೆಗಳು, ತನಿಖಾ ಎಜೆನ್ಸಿಗಳು ಗಂಭೀರವಾಗಿ ಪರಿಗಣಿಸಿದೆ.

ಬಾಂಬ್ ಬೆದರಿಕೆಯಿಂದ ಏರ್ ಇಂಡಿಯಾ ಎಮರ್ಜೆನ್ಸಿ ಲ್ಯಾಂಡಿಂಗ್

ಸೋಮವಾರ ಮುಂಬೈ ವಾರಾಣಾಸಿ ಏರ್ ಇಂಡಿಯಾ ವಿಮಾನ ಹಾರಾಟದಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಹೀಗಾಗಿ ವಿಮಾನವನ್ನು ತುರ್ತು ಭೂಸ್ವರ್ಶ ಮಾಡಲಾಗಿತ್ತು. ಬಳಿಕ ವಿಮಾನವನ್ನು ಪ್ರತ್ಯೇಕ ಬೇಯಲ್ಲಿ ನಿಲ್ಲಿಸಿ ಭದ್ರತಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತರಲಾಗಿತ್ತು. ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇದು ಹುಸಿ ಬಾಂಬ್ ಕರೆ ಎಂದು ಸ್ಪಷ್ಟವಾಗಿತ್ತು.