Asianet Suvarna News Asianet Suvarna News

ದೇಗುಲದಲ್ಲಿ ಇದೆಂಥಾ ಅವಾಂತರ: ಪುಳಿಯೊಗರೆ ಪ್ರಸಾದದಲ್ಲಿ ಸತ್ತ ಇಲಿ ಪತ್ತೆ!

 ದೇಗುಲವೊಂದರ ಪ್ರಸಾದದಲ್ಲಿ ಸತ್ತ ಇಲ್ಲಿ ಪತ್ತೆಯಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. 

Is dead rat found in Pulyogare Prasada at Yadadri Temple what is the truth akb
Author
First Published Mar 18, 2024, 2:19 PM IST

ಹೈದರಾಬಾದ್: ದೇಗುಲವೊಂದರ ಪ್ರಸಾದದಲ್ಲಿ ಸತ್ತ ಇಲ್ಲಿ ಪತ್ತೆಯಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ತೆಲಂಗಾಣದ ಯಾದಾದ್ರಿಯಲ್ಲಿ ಭಕ್ತರಿಗೆ ನೀಡಿದ ಪ್ರಸಾದದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದೆ.  ಆದರೆ ದೇಗುಲ ಸಮಿತಿ ಈ ಆರೋಪವನ್ನು ನಿರಾಕರಿಸಿದ್ದು, ವೀಡಿಯೋದ ಸತ್ಯಾಸತ್ಯತೆಯನ್ನು ಪ್ರಶ್ನಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಯಾರೋ ತೆಲಂಗಾಣದ ಪ್ರಸಿದ್ಧ ತೀರ್ಥಕ್ಷೇತ್ರ ಯಾದಾದ್ರಿ ದೇಗುಲದಲ್ಲಿ ಪ್ರಸಾದವಾಗಿ ನೀಡಿದ ಪುಳಿಯೊಗರೆಯಲ್ಲಿ ಇಲಿ ಇತ್ತು ಎಂದು ಬರೆದು  ವೀಡಿಯೋವೊಂದನ್ನು ಪೊಸ್ಟ್ ಮಾಡಿದ್ದಾರೆ ಎನ್ನಲಾಗಿದೆ.  

ತನಗೆ ಕಡಿದ ಇಲಿಯನ್ನ ಹಿಡಿದು ಕಚ್ಚಿ ಸಾಯಿಸಿದ ಯುವತಿ ಆಸ್ಪತ್ರೆಗೆ!

ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆಯ ಕಮೀಷನರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಘಟನೆಯನ್ನು ಖಂಡಿಸುವುದಾಗಿ ಹೇಳಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ನಾವು ವಿಚಾರಣೆ ನಡೆಸಿದ್ದು, ಈ ವೀಡಿಯೋದಲ್ಲಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯವಿಲ್ಲ, ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೇಗುಲದ ಆಡಳಿತ ಮಂಡಳಿಯನ್ನು ಸಂಪರ್ಕಿಸಿದ್ದೇವೆ. ಅಲ್ಲಿ ಯಾವುದೇ ಭಕ್ತರು ದೂರು ನೀಡಿಲ್ಲ,  ದೇಗುಲದ ಸುತ್ತಮುತ್ತಲ ವಾತಾವರಣವೂ ಸ್ವಚ್ಛತೆಯಿಂದ ಕೂಡಿದೆ, ಜೊತೆಗೆ ಪ್ರಸಾದವನ್ನು ತಯಾರು ಮಾಡುವ ಪ್ರದೇಶವೂ ಸ್ವಚ್ಛತೆಯಿಂದ ಇದ್ದು ಬಹಳ ಶುದ್ಧತೆಯಿಂದ ಮಾಡಿದ್ದಾರೆ. ಕೆಲವು ದುರುದ್ದೇಶ ಪೂರಿತ ಜನರು ಉದ್ದೇಶಪೂರ್ವಕವಾಗಿ ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾದ ಈ ವೀಡಿಯೋ  ಬಗ್ಗೆ ದೇಗುಲ ಆಡಳಿತ ಸಿಬ್ಬಂದಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆ ಶವಾಗಾರದಲ್ಲಿ ಇಲಿಗಳ ದಾಳಿಯಿಂದ ವಿರೂಪಗೊಂಡ ಸರ್ಕಾರಿ ಅಧಿಕಾರಿ ಮೃತದೇಹ: ಕುಟುಂಬಸ್ಥರ ಆಕ್ರೋಶ

Follow Us:
Download App:
  • android
  • ios