seven terrorists were trapped in two separate encounters in Jammu and Kashmir ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೈನಿಕನೊಬ್ಬ ಗಾಯಗೊಂಡಿದ್ದು, ಎನ್‌ಕೌಂಟರ್‌ನಲ್ಲಿ ಮೂರರಿಂದ ನಾಲ್ಕು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. 

ನವದೆಹಲಿ (ಸೆ.20): ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಗಾಯಗೊಂಡಿದ್ದು, ಎನ್‌ಕೌಂಟರ್‌ನಲ್ಲಿ ಮೂರರಿಂದ ನಾಲ್ಕು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಶುಕ್ರವಾರ ರಾತ್ರಿ ಕಿಶ್ತ್ವಾರ್‌ನಲ್ಲಿ ಪ್ರತ್ಯೇಕ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ಭದ್ರತಾ ಪಡೆಗಳಿಗೆ ಇಬ್ಬರಿಂದ ಮೂವರು ಭಯೋತ್ಪಾದಕರನ್ನು ಸಿಕ್ಕಿಬಿದ್ದಿದ್ದಾರೆ. ಉಧಂಪುರದಲ್ಲಿ ಸಿಕ್ಕಿಬಿದ್ದಿರುವ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದವರು ಎಂದು ನಂಬಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಧಂಪುರದಲ್ಲಿ ದುಡು ಬಸಂತ್‌ಗಢ್‌ನ ಬೆಟ್ಟದ ಪ್ರದೇಶದಲ್ಲಿ ಭದ್ರತಾ ಪಡೆಗಳು ಮೂರರಿಂದ ನಾಲ್ಕು ಭಯೋತ್ಪಾದಕರು ಇರುವ ಮಾಹಿತಿ ಸಿಕ್ಕಿದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು.ನಿರ್ದಿಷ್ಟ ಮಾಹಿತಿಯ ಮೇರೆಗೆ, ಸೇನೆ, ವಿಶೇಷ ಕಾರ್ಯಾಚರಣೆ ಗುಂಪು (SOG) ಮತ್ತು ಪೊಲೀಸರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು, ಇದರ ಪರಿಣಾಮವಾಗಿ ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಗಾಯಗೊಂಡಿದ್ದಾರೆ.

"ಎನ್‌ಕೌಂಟರ್ ಪ್ರಗತಿಯಲ್ಲಿದೆ. ಎಸ್‌ಒಜಿ, ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ತಂಡಗಳು ಆನ್‌ಗ್ರೌಂಡ್‌ನಲ್ಲಿದೆ" ಎಂದು ಜಮ್ಮು ಐಜಿಪಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಕಿಶ್ತ್ವಾರ್‌ನಲ್ಲಿ ಗುಂಡಿನ ಚಕಮಕಿ

ಶುಕ್ರವಾರ ರಾತ್ರಿ, ಕಿಶ್ತ್ವಾರ್‌ನಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಅಥವಾ ಮೂವರು ಭಯೋತ್ಪಾದಕರು ಭದ್ರತಾ ಪಡೆಗಳ ಬಲೆಗೆ ಬಿದ್ದಿದ್ದರು. "ಕಿಶ್ತ್ವಾರ್‌ನ ಸಾಮಾನ್ಯ ಪ್ರದೇಶದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ, ವೈಟ್ ನೈಟ್ ಕಾರ್ಪ್ಸ್‌ನ ಅಲರ್ಟ್‌ ಟೀಮ್‌ ರಾತ್ರಿ 8 ಗಂಟೆ ಸುಮಾರಿಗೆ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಿದವು" ಎಂದು ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ. ಗುಂಡಿನ ಚಕಮಕಿ ನಡೆದಿದೆ ಎಂದು ದೃಢಪಡಿಸಿದ ಸೇನೆಯು, "ಪ್ರಸ್ತುತ ಕಾರ್ಯಾಚರಣೆ ನಡೆಯುತ್ತಿದೆ" ಎಂದು ಹೇಳಿದೆ.