'ಶೀಘ್ರದಲ್ಲೇ ಪುಲ್ವಾಮಾ ರೀತಿಯ ದಾಳಿ ನಡೆಯಲಿದೆ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಜಾರ್ಖಂಡ್ ಮೂಲದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ (ಡಿಸೆಂಬರ್ 27, 2023): ಸಾಮಾಜಿಕ ಜಾಲತಾಣದ ಪೋಸ್ಟ್‌ವೊಂದಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ವಿದ್ಯಾರ್ಥಿಯೊಬ್ಬನನ್ನು ಬುಧವಾರ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ವಿದ್ಯಾರ್ಥಿ, 'ಶೀಘ್ರದಲ್ಲೇ ಪುಲ್ವಾಮಾ ರೀತಿಯ ದಾಳಿ ನಡೆಯಲಿದೆ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಎಂದು ವಿವರಗಳು ಹೇಳುತ್ತಿವೆ.

Add Asianetnews Kannada as a Preferred SourcegooglePreferred

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಕೂಡ ದಾಖಲಾಗಿದ್ದು, ಆರೋಪಿ ವಿದ್ಯಾರ್ಥಿಯೊಂದಿಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಸಹರಾನ್‌ಪುರ ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ ಮತ್ತು ತಂಡವು ವಿಚಾರಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ಎಕ್ಸ್‌ ಪೋಸ್ಟ್‌ ( ಈ ಹಿಂದಿನ ಟ್ವಿಟ್ಟರ್‌) ನಲ್ಲಿ ಖಚಿತಪಡಿಸಲಾಗಿದೆ.

ಇದನ್ನು ಓದಿ: ಜಮ್ಮು - ಕಾಶ್ಮೀರದಲ್ಲಿ ಸೇನೆ ಮೇಲೆ ದಾಳಿ: ಚೀನಾ ನಿರ್ಮಿತ ಶಸ್ತ್ರಾಸ್ತ್ರ ಬಳಸ್ತಿರೋ ಭಯೋತ್ಪಾದಕರು

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮೂವರನ್ನು ಬಂಧಿಸಿ ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಶಂಕಿತರನ್ನು ಸೇನೆ ಮತ್ತು ಪೊಲೀಸರು ಜಂಟಿಯಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದೂ ತಿಳಿದುಬಂದಿದೆ.

2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದರು. ಫೆಬ್ರವರಿ 14 ರಂದು ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಬೆಂಗಾವಲು ವಾಹನದ ಮೇಲೆ ಲೆಥಾಪೋರಾದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿದಾಗ ಈ ಘಟನೆ ಸಂಭವಿಸಿತ್ತು. 

ಇದನ್ನು ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ನಿವೃತ್ತ ಪೊಲೀಸ್ ಅಧಿಕಾರಿ: ಮತ್ತೆ ಭಯೋತ್ಪಾದಕರ ಅಟ್ಟಹಾಸ!

ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಆದರೂ, 2019 ರಲ್ಲಿ ನಡೆದ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ಘಟನೆಯನ್ನು ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿತು. ಹಾಗೆ, ಇದರಿಂದ ಬಿಜೆಪಿಗೆ ಮರಳಿ ಅಧಿಕಾರಕ್ಕೆ ಬರಲು ಲಾಭವಾಯಿತು ಎಂದೂ ಹಲವರು ಆರೋಪಿಸಿದ್ದರು.

ಇದನ್ನು ಓದಿ: ಕಾಶ್ಮೀರಿ ಉಗ್ರರ ಜೊತೆ ಸೇರಿ ಪನ್ನು ಹೊಸ ಉಗ್ರ ಸಂಘಟನೆ! ಕಾಶ್ಮೀರ್ - ಖಲಿಸ್ತಾನ್ ರೆಫರೆಂಡಮ್‌ ಫ್ರಂಟ್‌ ಘೋಷಣೆ

ಉಗ್ರರ ಗುಂಡೇಟಿನಿಂದಾಗಿ 8 ವರ್ಷ ಕೋಮಾದಲ್ಲಿದ್ದ ಯೋಧ ಕರಣ್‌ಬೀರ್‌ ಸಾವು