ಉಧಂಪುರದಲ್ಲಿ ಸಿಆರ್ಪಿಎಫ್ ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಒಟ್ಟು 23 ಸಿಬ್ಬಂದಿ ವಾಹನದಲ್ಲಿದ್ದರು.
ನವದೆಹಲಿ (ಆ.7): ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್ಗಢ ಪ್ರದೇಶದ ಕಾಂಡ್ವಾ ಬಳಿ ಸಿಆರ್ಪಿಎಫ್ ವಾಹನ ಅಪಘಾತಕ್ಕೀಡಾದ ಪರಿಣಾಮ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ಉಧಂಪುರ ಸಂದೀಪ್ ಭಟ್ ಅವರ ಪ್ರಕಾರ, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಎಲ್ಲಾ ಗಾಯಾಳು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿದವು. ಬಂಕರ್ ವಾಹನವು ಪಲ್ಟಿಯಾದಾಗ ಒಟ್ಟು 23 ಸಿಆರ್ಪಿಎಫ್ ಸಿಬ್ಬಂದಿ ಅದರಲ್ಲಿದ್ದರು.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು X ನಲ್ಲಿ ಪೋಸ್ಟ್ ಮಾಡುವ ಮೂಲಕ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. "ಉಧಂಪುರ: ಕಾಂಡ್ವಾ-ಬಸಂತ್ಗಢ ಪ್ರದೇಶದಲ್ಲಿ CRPF ವಾಹನಕ್ಕೆ ಅಪಘಾತ ಸಂಭವಿಸಿದ ಸುದ್ದಿ ಕೇಳಿ ಬೇಸರವಾಯಿತು. ವಾಹನದಲ್ಲಿ ಹಲವಾರು ಧೈರ್ಯಶಾಲಿ CRPF ಯೋಧರು ಇದ್ದರು" ಎಂದು ಅವರು ಬರೆದಿದ್ದಾರೆ.
ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿರುವ ಉಪ ಆಯುಕ್ತೆ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ ಎಂದು ಸಿಂಗ್ ಹೇಳಿದರು. "ತಕ್ಷಣವೇ ರಕ್ಷಣಾ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸ್ಥಳೀಯರು ಸ್ವಯಂಪ್ರೇರಣೆಯಿಂದ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ತೆಗೆದುಕೊಳ್ಳಲಾಗುತ್ತಿದೆ" ಎಂದು ಅವರು ಹೇಳಿದರು.
ಬಂಕರ್ ವಾಹನ ಪಲ್ಟಿಯಾದಾಗ ಅದರಲ್ಲಿ ಒಟ್ಟು 23 ಸಿಆರ್ಪಿಎಫ್ ಸಿಬ್ಬಂದಿ ಇದ್ದರು. ಬಸಂತ್ ಘರ್ನಿಂದ ಕಾರ್ಯಾಚರಣೆ ಮುಗಿಸಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಾಹನವು ಪಡೆಯ 187 ಬೆಟಾಲಿಯನ್ಗೆ ಸೇರಿದೆ.
