ನಟ-ನಿರ್ಮಾಪಕರು, ಪತ್ರಕರ್ತರು, ರಾಜಕಾರಣಿಗಳು, ಜನಸಾಮಾನ್ಯರು ಸೇರಿದಂತೆ ದೇಶದ ಪ್ರತಿಯೊಬ್ಬರನ್ನು ಕೊರೋನಾ ಹಿಂಬಾಲಿಸುತ್ತಿದೆ. ಭಾರತದಲ್ಲಿ ಎದ್ದಿರುವ 2ನೇ ಕೊರೋನಾ ಅಲೆಗೆ ಹಲವು ಪತ್ರಕರ್ತರು ಬಲಿಯಾಗಿದ್ದಾರೆ. ಇದೀಗ ಖ್ಯಾತ ಪತ್ರಕರ್ತ, ನಿರೂಪಕ ರೋಹಿತ್ ಸರ್ದಾನ ನಿಧನ ವಾರ್ತಗೆ ಭಾರತವೇ ಕಂಬನಿ ಮಿಡಿದಿದೆ. 

ನವದೆಹಲಿ(ಏ.30) ಖ್ಯಾತ ಪತ್ರಕರ್ತ, ನಿರೂಪಕ ರೋಹಿತ್ ಸರ್ದಾನ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಆಜ್‌ತಕ್ ವಾಹಿನಿಯ ನಿರೂಪಕರಾಗಿದ್ದ ರೋಹಿತ್‌ಗೆ ಕೊರೋನಾ ಕಾಣಿಸಿಕೊಂಡಿತ್ತು. ಕೊರೋನಾ ಸೋಂಕು ತಗುಲಿದ ರೋಹಿತ್ ಇಂದು(ಏ.30) ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪತ್ರಕರ್ತ, ಕಲಾವಿದನ ಬಲಿಪಡೆದ ಕರಾಳ ಕೊರೋನಾ.. ಗುಂಪು ಸೇರಿದರೆ!..

41 ವರ್ಷದ ರೋಹಿತ್ ನೇರ, ನಿಷ್ಠುರ ಹಾಗೂ ಅತ್ಯುತ್ತಮ ಪತ್ರಕರ್ತ ಎಂದು ಗುರುತಿಸಿಕೊಂಡಿದ್ದರು. ರೋಹಿತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ರೋಹಿತ್ ಸರ್ದಾನಾ ನಮ್ಮನ್ನು ಬೇಗನೆ ಅಗಲಿದ್ದಾರೆ. ಭಾರತದ ಪ್ರಗತಿಯ ಬಗ್ಗೆ ಉತ್ಸಾಹ ಹೊಂದಿದ್ದ ಸ್ನೇಹಮಯಿ ರೋಹಿತ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ರೋಹಿತ್ ಅಕಾಲಿಕ ನಿಧನವು ಮಾಧ್ಯಮ ಜಗತ್ತಿನಲ್ಲಿ ಭಾ ನಷ್ಟವನ್ನುಂಟುಮಾಡಿದೆ. ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

Scroll to load tweet…

ರೋಹಿತ್ ನಿಧನ ವಾರ್ತೆ ತೀವ್ರ ನೋವುಂಟು ಮಾಡಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಹಲವು ಗಣ್ಯರು, ರಾಜಕಾರಣಿಗಳು ರೋಹಿತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 


Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…