ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪುಗಳ ಬಗ್ಗೆ ಕಪಿಲ್‌ ಸಿಬಲ್‌ ಟೀಕೆ ಮಾಡಿದ್ದಾರೆ. ರಾಜ್ಯಸಭಾ ಸಂಸದನ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. 

ರಾಜ್ಯಸಭಾ ನಾಯಕ ಹಾಗೂ ಹಿರಿಯ ವಕೀಲ ಕಪಿಲ್‌ ಸಿಬಲ್‌ ಶನಿವಾರ ಸುಪ್ರೀಂ ಕೋರ್ಟ್‌ನ ಕೆಲ ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮಾತನ್ನಾಡಿದ್ದಾರೆ. ಇನ್ನು, ಕಾಂಗ್ರೆಸ್‌ನ ಮಾಜಿ ನಾಯಕ ಕಪಿಲ್‌ ಸಿಬಲ್‌ ಅವರ ಈ ಹೇಳಿಕೆಗೆ ಹಲವರಿಂದ ವಿರೋಧ ವ್ಯಕ್ತವಾಗುತ್ತಿದೆ. 

Add Asianetnews Kannada as a Preferred SourcegooglePreferred

ಸುಪ್ರೀಂ ಕೋರ್ಟ್‌ ಬಗ್ಗೆ ನನಗೀಗ ಯಾವುದೇ ಭರವಸೆ ಉಳಿದಿಲ್ಲ ಎಂದು ಕಪಿಲ್‌ ಸಿಬಲ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ನಿಮಗೆ ಪರಿಹಾರ ದೊರೆಯುತ್ತದೆ ಎಂದು ನಿಮಗೆ ಅನಿಸಿದರೆ, ನೀವು ತುಂಬಾ ತಪ್ಪಾಗಿ ಭಾವಿಸುತ್ತೀರಿ. ಮತ್ತು ಸುಪ್ರೀಂ ಕೋರ್ಟ್‌ನಲ್ಲಿ 50 ವರ್ಷಗಳ ಕಾಲ ಪ್ರಾಕ್ಟೀಸ್‌ ಪೂರ್ಣಗೊಳಿಸಿದ ನಂತರ ನಾನು ಇದನ್ನು ಹೇಳುತ್ತಿದ್ದೇನೆ ಎಂದು ಕಪಿಲ್‌ ಸಿಬಲ್ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಏಕನಾಥ್ ಶಿಂಧೆ ಬಣದ ಅರ್ಜಿಯನ್ನು ಈಗಲೇ ನಿರ್ಧರಿಸಬೇಡಿ ಎಂದ ಸುಪ್ರೀಂಕೋರ್ಟ್‌: ಉದ್ಧವ್‌ ಠಾಕ್ರೆ ಬಣಕ್ಕೆ ರಿಲೀಫ್‌..!

ಒಂದು ವೇಳೆ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದ್ದರೂ, ಅದು ನೆಲದ ವಾಸ್ತವತೆಯನ್ನು ಬದಲಾಯಿಸುವುದು ಅಪರೂಪ ಎಂದೂ ಶನಿವಾರ ಕಪಿಲ್‌ ಸಿಬಲ್‌ ಹೇಳಿದರು. “ಈ ವರ್ಷ ನಾನು ಸುಪ್ರೀಂ ಕೋರ್ಟ್‌ನಲ್ಲಿ 50 ವರ್ಷಗಳ ಅಭ್ಯಾಸವನ್ನು ಪೂರ್ಣಗೊಳಿಸುತ್ತೇನೆ ಮತ್ತು 50 ವರ್ಷಗಳ ನಂತರ ನನಗೆ ಸಂಸ್ಥೆಯಿಂದ ಯಾವುದೇ ಭರವಸೆ ಇಲ್ಲ ಎಂದು ನಾನು ಭಾವಿಸುತ್ತೇನೆ. ನೀವು ಸುಪ್ರೀಂ ಕೋರ್ಟ್ ನೀಡಿದ ಪ್ರಗತಿಪರ ತೀರ್ಪುಗಳ ಬಗ್ಗೆ ಮಾತನಾಡುತ್ತೀರಿ. ಆದರೆ ನೆಲದ ಮಟ್ಟದಲ್ಲಿ ಏನಾಗುತ್ತದೆ ಎಂಬುದರಲ್ಲಿ ಭಾರಿ ವ್ಯತ್ಯಾಸವಿದೆ. ಸುಪ್ರೀಂ ಕೋರ್ಟ್ ಗೌಪ್ಯತೆಯ ಬಗ್ಗೆ ತೀರ್ಪು ನೀಡಿತು ಮತ್ತು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ. ನಿಮ್ಮ ಗೌಪ್ಯತೆ ಎಲ್ಲಿದೆ..?" ಎಂದು ಕಪಿಲ್‌ ಸಿಬಲ್ ಅವರನ್ನು ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ನ್ಯಾಯಾಂಗ ಹೊಣೆಗಾರಿಕೆ ಮತ್ತು ಸುಧಾರಣೆಗಳ ಅಭಿಯಾನ (ಸಿಜೆಎಆರ್), ನಾಗರಿಕ ಸ್ವಾತಂತ್ರ್ಯಕ್ಕಾಗಿ ಪೀಪಲ್ಸ್ ಯೂನಿಯನ್ (ಪಿಯುಸಿಎಲ್) ಮತ್ತು ಪೀಪಲ್ಸ್ ಮೂವ್‌ಮೆಂಟ್‌ಗಳ ರಾಷ್ಟ್ರೀಯ ಒಕ್ಕೂಟವು (ಎನ್‌ಎಪಿಎಂ) "ನಾಗರಿಕ ಸ್ವಾತಂತ್ರ್ಯಗಳ ನ್ಯಾಯಾಂಗ ರೋಲ್‌ಬ್ಯಾಕ್" ಕುರಿತು ಶನಿವಾರ ದೆಹಲಿಯಲ್ಲಿ ಆಯೋಜಿಸಿದ್ದ ಪೀಪಲ್ಸ್ ಟ್ರಿಬ್ಯೂನಲ್‌ನಲ್ಲಿ ಸಿಬಲ್ ಈ ಮಾತುಗಳನ್ನಾಡಿದ್ದಾರೆ. 

2002 ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ವಿಶೇಷ ತನಿಖಾ ತಂಡ (SIT) ನೀಡಿದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಕ್ಕಾಗಿ ಕಪಿಲ್‌ ಸಿಬಲ್ ಸುಪ್ರೀಂ ಕೋರ್ಟ್ ಅನ್ನು ಟೀಕಿಸಿದರು. ಅಲ್ಲದೆ, ಜಾರಿ ನಿರ್ದೇಶನಾಲಯಕ್ಕೆ ಅಪಾರ ಅಧಿಕಾರವನ್ನು ನೀಡುವ ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳನ್ನು ಎತ್ತಿಹಿಡಿಯುವುದು; ಮತ್ತು ಭದ್ರತಾ ಪಡೆಗಳಿಂದ ಛತ್ತೀಸ್‌ಗಢದಲ್ಲಿ ನಕ್ಸಲ್-ವಿರೋಧಿ ಕಾರ್ಯಾಚರಣೆಗಳ ಸಂದರ್ಭದಲ್ಲಿ 17 ಆದಿವಾಸಿಗಳ ನ್ಯಾಯಾಂಗೇತರ ಹತ್ಯೆಗಳ ಆಪಾದಿತ ಘಟನೆಗಳ ಬಗ್ಗೆ ಸ್ವತಂತ್ರ ತನಿಖೆಯನ್ನು ಕೋರಿ 2009 ರ ಅರ್ಜಿಯನ್ನು ವಜಾಗೊಳಿಸಿರುವುದನ್ನು ಅವರು ವಿರೋಧಿಸಿದ್ದಾರೆ. 

ಬಿಬಿಎಂಪಿ ಚುನಾವಣೆ: 1 ವಾರದಲ್ಲಿ ಮೀಸಲಾತಿ ಪ್ರಕ್ರಿಯೆ ಅಸಾಧ್ಯ?

"... ನಾನು 50 ವರ್ಷಗಳಿಂದ ಅಭ್ಯಾಸ ಮಾಡಿದ ನ್ಯಾಯಾಲಯದ ಬಗ್ಗೆ ಈ ರೀತಿ ಮಾತನಾಡಲು ಬಯಸುವುದಿಲ್ಲ, ಆದರೆ ಸಮಯ ಬಂದಿದೆ. ನಾವು ಮಾತನಾಡದಿದ್ದರೆ, ಇನ್ಯಾರು ಮಾತನಾಡುತ್ತಾರೆ..? ವಾಸ್ತವ ಏನೆಂದರೆ, ಸಮಸ್ಯೆ ಇದೆ ಎಂದು ನಮಗೆ ತಿಳಿದಿರುವ ಯಾವುದೇ ಸೂಕ್ಷ್ಮ ವಿಷಯವನ್ನು ಕೆಲವು ನ್ಯಾಯಾಧೀಶರ ಮುಂದೆ ಇಡಲಾಗುತ್ತದೆ ಮತ್ತು ಫಲಿತಾಂಶವು ನಮಗೆ ತಿಳಿದಿದೆ” ಎಂದು ಕಪಿಲ್‌ ಸಿಬಲ್‌ ಹೇಳಿದ್ದಾರೆ. 

ಇನ್ನೊಂದೆಡೆ, ಕಪಿಲ್‌ ಸಿಬಲ್‌ ಹೇಳಿಕೆಗೆ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಖಿಲ ಭಾರತ ವಕೀಲರ ಸಂಘದ (ಎಐಬಿಎ) ಅಧ್ಯಕ್ಷ ಡಾ. ಆದಿಶ್ ಸಿ ಅಗರ್ವಾಲಾ, ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಮುಖ್ಯಸ್ಥರು, ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು, ಬಿಜೆಪಿ ನಾಯಕ ಅಮಿತ್ ಮಾಳವೀಯ ಸೇರಿದಂತೆ ಹಲವರು ರಾಜ್ಯಸಭಾ ನಾಯಕನ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

Scroll to load tweet…