ರಾಮ ಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟಿದ್ದು ಕರ್ನಾಟಕ ವಿದ್ವಾಂಸ
ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ/ ಮುಹೂರ್ತ ಕೊಟ್ಟವರಲ್ಲಿ ಕರ್ನಾಟಕದ ವಿದ್ವಾಂಸ/ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿಯಿಂದ ಶಿಲಾನ್ಯಾಸ/ ಬೆಳಗಾವಿಯ ರಾಘವೇಂದ್ರ ಮಠದ ಕುಲಪತಿ ಎನ್. ಆರ್. ವಿಜಯೇಂದ್ರ ಶರ್ಮ ಅವರು ನಿಗದಿ ಮಾಡಿದ್ದ ದಿನಾಂಕ
ಅಯೋಧ್ಯೆ(ಜು. 27) ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. ಆಗಸ್ಟ್ 5 ರಂದೇ ಶಿಲಾನ್ಯಾಸ ಮಾಡಲು ಮುಹೂರ್ತ ಕೊಟ್ಟವರಲ್ಲಿ ಕರ್ನಾಟಕದವರು ಸಹ ಒಬ್ಬರಿದ್ದಾರೆ ಎನ್ನುವುದು ಹೆಮ್ಮೆಯ ಸಂಗತಿ.
ಬೆಳಗಾವಿಯ ರಾಘವೇಂದ್ರ ಮಠದ ಕುಲಪತಿ ಎನ್.ಆರ್ ವಿಜಯೇಂದ್ರ ಶರ್ಮ ಅವರು ರಾಮಜನ್ಮಭೂಮಿ ಟ್ರಸ್ಟ್ ಗೆ ಆಗಸ್ಟ್ 5ನೇ ತಾರೀಖು ಸೇರಿದಂತೆ ಕೆಲ ದಿನಾಂಕವನ್ನು ಕಳುಹಿಸಿಕೊಟ್ಟದ್ದರಂತೆ. ಅದರಲ್ಲಿ 5 ನೇ ತಾರೀಕನ್ನು ಫೈನಲ್ ಮಾಡಲಾಗಿದೆ.
ರಾಮಮಂದಿರ ಅಡಿ ಟೈಂ ಕ್ಯಾಪ್ಸೂಲ್.. ಏನಿದು?
ಶ್ರೀರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲು ದಿನಗಣನೆ ಆರಂಭವಾಗಿದೆ. ಭೂಮಿ ಪೂಜೆಗೆ ದಿನಾಂಕ ಹಾಗೂ ಸಮಯ ನಿಗದಿಯಾಗಿದ್ದು, ಆಗಸ್ಟ್ 5ರಂದು ಪಿಎಂ ಮೋದಿಯೇ ಕಾರ್ಯಕ್ರಮ ನೆರವೇರಿಸಲಿದ್ದಾರೆ.
ರಾಮಮಂದಿರ ದೀರ್ಘ ಕಾಲದ ಹೋರಾಟದ ನಂತರ ನಿರ್ಮಾಣವಾಗುತ್ತಿದೆ. ಸುಪ್ರೀಂ ಕೋರ್ಟ್ ತೀರ್ಮಾನ ನೀಡಿದ ನಂತರ ಮಂದಿರ ನಿರ್ಮಾಣ ಕೆಲಸ ವೇಗವಾಗಿ ನಡೆದಿದೆ.