ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂದಿರಕ್ಕೆ ಮಹಿಳೆಯರ ಪ್ರವೇಶದ ವೇಳೆ ಎದುರಾದ ಸಮಸ್ಯೆಗಳ ಬಗ್ಗೆ ಕೇರಳ ಸಚಿವ ವಿಷಾದ ವ್ಯಕ್ತಪಡಿಸಿದ್ದಾರೆ. 2018ರಲ್ಲಿ ದೇಗುಲ ಪ್ರವೇಶದ ವಿಚಾರದಲ್ಲಿ ಪ್ರತಿಭಟನೆ ಗಲಭೆಗಳೇ ನಡೆದಿದ್ದವು.
ತಿರುವನಂತಪುರ (ಮಾ.12): 2018ರಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂದಿರಕ್ಕೆ ಮಹಿಳೆಯರ ಪ್ರವೇಶದ ವೇಳೆ ಎದುರಾದ ಘಟನಾವಳಿಗಳ ಬಗ್ಗೆ ಕೇರಳದ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಸ್ತ್ರೀಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂ ಆದೇಶ ಪಾಲನೆಗೂ ಮುನ್ನ ಭಕ್ತರು, ರಾಜಕೀಯ ಮುಖಂಡರು ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು ಎಂದಿದ್ದಾರೆ.
ಅರೆನಗ್ನ ದೇಹದ ಮೇಲೆ ಮಗನಿಂದ ಚಿತ್ರ ಬರೆಸಿಕೊಂಡ ಅಯ್ಯಪ್ಪ ಹೋರಾಟಗಾತಿ ರೆಹನಾ! ..
ಚುನಾವಣೆ ವೇಳೆ ಅವರು ಈ ಹೇಳಿಕೆ ನೀಡಿರುವುದು ರಾಜಕೀಯ ಉದ್ದೇಶಕ್ಕಾಗಿ ಎಂದು ವಿಶ್ಲೇಷಿಸಲಾಗಿದೆ. ಈ ನಡುವೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ತಮ್ಮದೇ ಸರ್ಕಾರದ ಬಗ್ಗೆ ಕ್ಷಮೆ ಕೋರುವಂತೆ ಕಾಂಗ್ರೆಸ್ ಮತ್ತು ಬಿಜೆಪಿ, ಸಚಿವ ಸುರೇಂದ್ರನ್ ಅವರನ್ನು ಒತ್ತಾಯಿಸಿವೆ.
