ಕೇಂದ್ರ ಸರ್ಕಾರವು ಮಾ.15ರಿಂದ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿದ್ದು ಕೆವೈಸಿ ಪೂರ್ಣಗೊಳಿಸಿದ ಗ್ರಾಹಕರಿಗೆ ಮಾತ್ರ ಗ್ಯಾಸ್ ಸೇವೆಗಳು ಮತ್ತು ಸಬ್ಸಿಡಿ ಲಭ್ಯವಾಗಲಿದೆ.

ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಬಯೋಮೆಟ್ರಿಕ್ ಆಧಾ‌ರ್ ದೃಢೀಕರಣ ಕಡ್ಡಾಯ

ನವದೆಹಲಿ: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ನಡುವೆಯೇ ಮಾ.15ರಿಂದ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಬಯೋಮೆಟ್ರಿಕ್ ಆಧಾ‌ರ್ ದೃಢೀಕರಣ ಅಥವಾ ಕೈವೈಸಿ ಕಡ್ಡಾಯ ಮಾಡಿ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

Add Asianetnews Kannada as a Preferred SourcegooglePreferred

ಕೆವೈಸಿ ಪೂರ್ಣಗೊಳಿಸಿದ ಗ್ರಾಹಕರಿಗಷ್ಟೇ ಆ ಬಳಿಕ ಎಲ್‌ಪಿಜಿ ಸೇವೆಗಳು ಮತ್ತು ಸಬ್ಸಿಡಿ ದೊರೆಯಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಈ ಕೆವೈಸಿ ಪ್ರಕ್ರಿಯೆಯನ್ನು ಸಂಬಂಧಪಟ್ಟ ಗ್ಯಾಸ್ ವಿತರಣಾ ಕಂಪನಿಗಳ ಆ್ಯಪ್ ಮೂಲಕ ಮನೆಯಲ್ಲಿ ಕುಳಿತೇ ಆಧಾರ್ ಕಾರ್ಡ್ ಹಾಗೂ ಫೇಸ್‌ಆರ್‌ಡಿ ಆ್ಯಪ್ ಬಳಸಿ ಸುಲಭವಾಗಿ ಪೂರ್ಣಗೊಳಿಸಬಹುದು ಎಂದು ಸಚಿವಾಲಯ ಗ್ರಾಹಕರಿಗೆ ಮಾಹಿತಿ ನೀಡಿದೆ.

ಇದನ್ನೂ ಓದಿ: RSS ಸಂಘಟನೆಗೆ ನಿರ್ಬಂಧ ಹೇರಿ, ಆಸ್ತಿ ಜಪ್ತಿ ಮಾಡಿ: ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

ಪ್ರಮುಖ ಸರ್ಕಾರಿ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊ ರೇಷನ್ ಲಿ. ಮತ್ತು ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. ಕಂಪನಿಗಳ ಗ್ರಾಹಕರಿಗೆ ಕೇಂದ್ರದ ಈ ಹೊಸ ನಿಯಮ ಅನ್ವಯವಾಗಲಿದೆ.

ಹೀಗೆ ಕೆವೈಸಿ ಪ್ರಕ್ರಿಯೆ ಮಾಡಿ

  • 1 ಸರ್ಕಾರಿ ನೋಟಿಸ್‌ನಲ್ಲಿ ನೀಡಲಾದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ ಅಥವಾ ಅಧಿಕೃತ ಲಿಂಕ್ https://www.pmuy.gov.in/e&kyc.html ಮೂಲಕ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.
  • 2 ನಂತರ ಆಧಾ‌ರ್ ಫೇಸ್‌ಆರ್‌ಡಿ ಆ್ಯಪ್ ಜತೆಗೆ ತೈಲ ಪೂರೈಕೆ ಕಂಪನಿಯ ಮೊಬೈಲ್ ಆ್ಯಪ್ ಗಳನ್ನು (ಐಒಸಿಎಲ್, ಬಿಪಿಸಿಎಲ್ ಅಥವಾ ಎಚ್‌ಪಿಸಿಎಲ್‌) ಡೌನ್ ಲೋಡ್ ಮಾಡಿಕೊಳ್ಳಬೇಕು
  • 3 ಕಂಪನಿಯ ಆ್ಯಪ್‌ನಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸಿ, ಆಧಾರ್ ಫೇಸ್ ಆರ್‌ಡಿ ಆ್ಯಪ್ ಬಳಸಿ ಮುಖ ವನ್ನು ಸ್ಕ್ಯಾನ್ ಮಾಡುವ ಮೂಲಕ ಬಯೋಮೆಟ್ರಿಕ್ ದೃಢೀಕರಣ ನೀಡಬೇಕು.
  • ಈ ಪ್ರಕ್ರಿಯೆ ಬಳಿಕ ನಿಮ್ಮ 4 ಕೆವೈಸಿ ದೃಢೀಕರಣ ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: ಬಾರಾಮತಿ ಕ್ಷೇತ್ರದ ಉಪ ಚುನಾವಣೆ: ಅತ್ತಿಗೆ ಸುನೇತ್ರಾ ಪವಾರ್ ವಿರುದ್ಧ NCP ಅಭ್ಯರ್ಥಿ ಕಣಕ್ಕಿಳಿಸಲ್ಲ ಎಂದ ಸುಪ್ರಿಯಾ ಸುಳೆ